ಕ್ರೈಮ್ ನ್ಯೂಸ್

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!!

(ನ್ಯೂಸ್ ಕಡಬ) newskadaba.com, ಜು. 31: ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬ೦ಧಿಸಿದ೦ತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಇದೀಗ ಬುರುಡೆ ಪತ್ತೆಯಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು […]

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ

(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳದಲ್ಲಿ ನೂರೂರು ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ತೀವ್ರಗೊಂಡಿದೆ. ನೇತ್ರಾವತಿ ಸ್ನಾನಘಟ್ಟ ಸಮೀಪದ ಕಾಡಿನಲ್ಲಿ ಅನಾಮಿಕ ದೂರುದಾರ ಹಲವು ಶವ ಹೂತಿಟ್ಟ ಸ್ಥಳಗಳನ್ನು ಗುರುತಿಸಿದ್ದಾನೆ. ಈ ಪೈಕಿ ಮೊದಲ ಸ್ಥಳವನ್ನು ನಿನ್ನೆ (ಜು.29)ರಂದು ಅಗೆಯಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇಂದು (ಜು.30) ದೂರುದಾರ ಗುರುತಿಸಿದ 2ನೇ ಸ್ಥಳ ಅಗೆಯಲಾಗಿದೆ. ಆದರೆ ಎರಡನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com, ಜು. 30.  ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರು ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಈ ವೇಳೆ ಸರ್ಕಾರಿ ವಕೀಲ ಎನ್

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

(ನ್ಯೂಸ್ ಕಡಬ) newskadaba.com, ಜು.‌ 29. ಮುಂಬಯಿ: ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. 8 ಜನರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡ್ರೋನ್‌

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

(ನ್ಯೂಸ್ ಕಡಬ) newskadaba.com, ಜು.‌ 29. ಯೆಮೆನ್‌ನಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ‍್ಯಾಂಡ್ ಮುಫ್ತಿ, ಕಾಂತಪುರಂ ಎಪಿ ಅಬುಬಕರ್ ಮುಸ್ಲೈಯರ್ ಅವರ ಕಚೇರಿ ತಿಳಿಸಿದೆ. ಜುಲೈ 16ರಂದು ನಿಮಿಷಾ ಪ್ರಿಯಾಳಿಗೆ ಗಲ್ಲಿಗೇರಿಸಲು ದಿನ ನಿಗದಿಯಾಗಿತ್ತು. ಆದರೆ, ಭಾರತ ಸರ್ಕಾರದ ಮನವಿ ಹಾಗೂ ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ಬಳಿಕ ಆ ಗಲ್ಲು ಶಿಕ್ಷೆ ಮುಂದೂಡಲಾಗಿತ್ತು. ಭಾರತ ಸರ್ಕಾರ ಮತ್ತು ಗ್ರ‍್ಯಾಂಡ್ ಮುಫ್ತಿ ಅಬುಬಕರ್

ಕೇರಳದ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

(ನ್ಯೂಸ್ ಕಡಬ) newskadaba.com ಜು. 26. ಹೈದರಾಬಾದ್: ತೆಲಂಗಾಣದ ಯಾದಾದ್ರಿಯಲ್ಲಿ ಪೊಲೀಸ್ ವಾಹನವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಡಿಎಸ್ಪಿ ಅಧಿಕಾರಿಗಳು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಡಿಎಸ್ಪಿಗಳಾದ ಚಂದ್ರಕರ್ ರಾವ್ ಮತ್ತು ಶಾಂತಾ ರಾವ್‌ರನ್ನು ಮೃತರೆಂದು ಗುರುತಿಸಲಾಗಿದೆ. ಎಎಸ್ಪಿ ಪ್ರಸಾದ್ ಮತ್ತು ಹೆಡ್ ಕಾನ್‌ಸ್ಟೇಬಲ್ ನರಸಿಂಗ್ ರಾವ್ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜು. 26. ನವದೆಹಲಿ: ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಗಳನ್ನು ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೀಡಿದ ಈ ತೀರ್ಪು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಖಾಸಗಿ

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು

(ನ್ಯೂಸ್ ಕಡಬ) com ಜು. 26. ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯ

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top