ಕ್ರೈಮ್ ನ್ಯೂಸ್

ಕಾಸರಗೋಡು ಆಸ್ಪತ್ರೆ ಆವರಣದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 27.   ನಗರದ ಪರಿಸರದ ಬಾವಿಯೊಂದರಲ್ಲಿ ಅಪರಿಚಿತ ಪುರುಷನೊಬ್ಬನ ಮೃತದೇಹ ಇಂದು ಪತ್ತೆಯಾಗಿದೆ. ಕರಂದಕ್ಕಾಡ್ ಅಶ್ವಿನಿ ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ದುರ್ವಾಸನೆ ಬರುತ್ತಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಕಾಸರಗೋಡು ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮಹಜರು ನಡೆಸಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.  

ಕಾಸರಗೋಡು ಆಸ್ಪತ್ರೆ ಆವರಣದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್

ಮಗು ಪಡೆಯಲು ಅಪ್ರಾಪ್ತ ಬಾಲಕಿಯ ನರಬಲಿ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com. ಕೋಲ್ಕತ್ತಾ, ಮಾ. 27. ಸ್ವಂತ ಮಗುವನ್ನು ಪಡೆಯಲು ‘ನರಬಲಿ’ ಹೆಸರಲ್ಲಿ ತನ್ನ ನೆರೆಯಮನೆಯ ಅಪ್ರಾಪ್ತ ಬಾಲಕಿಯನ್ನು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಏಳು ವರ್ಷದ ಬಾಲಕಿಯ ಮೃತದೇಹವನ್ನು ಭಾನುವಾರ ತಡರಾತ್ರಿ ದಕ್ಷಿಣ ಕೋಲ್ಕತ್ತಾದ ತಿಲಜಾಲದಲ್ಲಿರುವ ಆರೋಪಿಯ ನಿವಾಸದಿಂದ ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಬಾಲಕಿಯ ದೇಹವನ್ನು ಗೋಣಿ ಚೀಲದೊಳಗೆ ತುಂಬಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಮೇಲೆಲ್ಲ ಮಾರಣಾಂತಿಕ ಗಾಯದ ಗುರುತುಗಳು ಪತ್ತೆಯಾಗಿವೆ.

ಮಗು ಪಡೆಯಲು ಅಪ್ರಾಪ್ತ ಬಾಲಕಿಯ ನರಬಲಿ➤ ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್

ಬಾಣಂತಿ ಕೊಲೆ ಪ್ರಕರಣ ➤ತಾಯಿ, ತಮ್ಮ ಅರೆಸ್ಟ್!

(ನ್ಯೂಸ್ ಕಡಬ) newskadaba.com. ಕೊಪ್ಪಳ, ಮಾ. 27. ಬಾಣಂತಿಯ ಮೃತದೇಹ ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣದಲ್ಲಿ ಮೃತ ಮಹಿಳೆಯ ತಾಯಿ ಹಾಗೂ ತಮ್ಮನನ್ನೇ ಪೊಲೀಸರು ಬಂಧನ ಮಾಡಿದ್ದಾರೆ. ಇದರೊಂದಿಗೆ ಗ್ರಾಮಸ್ಥರಿಗೆ ಶಾಕ್ ಆಗಿದ್ದು, ಬಾಣಂತಿ ಅಂತಲೂ ನೋಡದೆ ಹೆತ್ತ ತಾಯಿಯೇ ಮಗಳನ್ನು ಕೊಲೆಗೈದು ಸುಟ್ಟು ಹಾಕಲು ಕಾರಣವೇನು ಅಂತ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯ ಅನ್ವಯ ಮೃತ ಮಹಿಳೆ ನೇತ್ರಾವತಿ ಹಾಗೂ ಆರೋಪಿಗಳ ಇಬ್ಬರ ನಡುವೆ ಹಣ ಹಾಗೂ ಬಂಗಾರದ ವಿಚಾರದಲ್ಲಿ ಆರಂಭವಾದ ಜಗಳವೇ

ಬಾಣಂತಿ ಕೊಲೆ ಪ್ರಕರಣ ➤ತಾಯಿ, ತಮ್ಮ ಅರೆಸ್ಟ್! Read More »

ಕ್ರೈಮ್ ನ್ಯೂಸ್

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮಾ.27. ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯ ಭಾವಚಿತ್ರವುಳ್ಳ ಕ್ಯಾಲೆಂಡರ್, ತಲವಾರು ಮತ್ತು ಮದ್ಯದ ಪ್ಯಾಕೇಟ್ ಗಳು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್‌ನಲ್ಲಿ ನಡೆದಿದೆ. ಕಾರುವೊಂದರ ಬ್ರೇಕ್ ಡೌನ್‌ ಆಗಿದೆ. ಈ ವೇಳೆ ಕಾರನ್ನು ತಳ್ಳಲು ಮುಂದಾದಾಗ ಚಾಲಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.ಆ ಸಂದರ್ಭ ಕಾರಿನ ಒಳಗೆ ನೋಡಿದಾಗ ಅದರಲ್ಲಿ ಮದ್ಯದ ಪ್ಯಾಕೇಟ್ ಗಳು, ಮಾರಕಾಸ್ತ್ರ ಮತ್ತು ಸಿ.ಟಿ.ರವಿಯ ಫೋಟೋ ಇರುವ ಕ್ಯಾಲೆಂಡರ್ ಪತ್ತೆಯಾಗಿವೆ ಎಂದು

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಪುತ್ತೂರು ಕೋರ್ಟ್ ರೋಡ್ ನಲ್ಲಿ ಜಿನಸಿ ಅಂಗಡಿಯನ್ನು ಕಳೆದ ಹಲವು‌ ವರ್ಷಗಳಿಂದ ನಡೆಸುತ್ತಿದ್ದರು ಎನ್ನಲಾಗಿದೆ. ವಿಘ್ನೇಶ್ ಈ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ನೇತ್ರಾವತಿ ನದಿ ಬಳಿ ಸಂಶಯಾಸ್ಪದ ನೆಲೆಯಲ್ಲಿ ವಾಹನ‌ ಕಂಡ ಹಿನ್ನೆಲೆ ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.27. ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ. ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 26. ಉರಗ ಸಂರಕ್ಷಕ ಸ್ನೇಕ್ ಅಶೋಕ್‌ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಕಳೆದ ರಾತ್ರಿ ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ನಾಗರಹಾವು ಹಿಡಿಯುತ್ತಿದ್ದ ವೇಳೆ ಹಾವು ಅವರ ಬಲಗಾಲಿಗೆ ಕಚ್ಚಿದೆ. ತಕ್ಷಣವೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ನೇಕ್ ಅಶೋಕ್ ಗೆ ಹಾವು ಕಡಿತ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ

(ನ್ಯೂಸ್ ಕಡಬ) newskadaba.com ಮೀರತ್, ಮಾ. 26. ಪ್ರೀತಿಯ ವ್ಯಾಮೋಹಕ್ಕೆ ಸಿಲುಕಿದ ಮಹಾತಾಯಿಯೋರ್ವಳು ತನ್ನ ಕರುಳ ಕುಡಿಗಳನ್ನೇ ನಿರ್ದಯಿಯಾಗಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದಿದೆ. ಸ್ಥಳೀಯ ಕೌನ್ಸಿಲರ್ ಆಗಿರುವ ಸೌದ್ ಎಂಬಾತನೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಈಕೆ, 10 ವರ್ಷದ ಮಗ ಹಾಗೂ ಆರು ವರ್ಷದ ಮಗಳನ್ನು ಕೊಂದು ಹಾಕಿ ನಂತರ ಮೃತದೇಹಗಳನ್ನು ಕಾಲುವೆಗೆ ಎಸೆದಿದ್ದಳು. ಈ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ‌ ಸಂಬಂಧ- ಕರುಳಕುಡಿಗಳನ್ನೇ ಕೊಂದ ಮಹಾತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ನಿರ್ವಾಹಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 26. ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಬಸ್ ನಿರ್ವಾಹಕನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ಡಿಪೋ ನಿರ್ವಾಹಕ ದವಾಳ್ ಸಾಬ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯು ಕಲ್ಲಡ್ಕದ ವಿದ್ಯಾಸಂಸ್ಥೆಯೊಂದರ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ ಮನೆಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಪಾಣೆಮಂಗಳೂರು ಬಸ್ ಸ್ಟಾಪ್ ನಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದು ಹೋಗಿದ್ದರು.

ಬಂಟ್ವಾಳ: ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ➤ ಬಸ್ ನಿರ್ವಾಹಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಆಸ್ಪತ್ರೆಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ ➤ ಪತ್ತೆಗಾಗಿ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಮಾ. 26. ವಿದ್ಯುತ್ ಬಿಲ್ಲು ಪಾವತಿಗೆ ಹಾಗೂ ಔಷಧಿಗೆಂದು ಮನೆಯಿಂದ ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಎಡೆಂಜ ನಿವಾಸಿ ನಾಗರಾಜ (65) ಎಂದು ಗುರುತಿಸಲಾಗಿದೆ. ನಾಗರಾಜರವರು ಮಾ. 20ರಂದು ಬೆಳಿಗ್ಗೆ 9.30 ಕ್ಕೆ ಮನೆಯಿಂದ ವಿದ್ಯುತ್ ಬಿಲ್ಲು ಪಾವತಿಸಲು ಹಾಗೂ ಆಸ್ಪತ್ರೆಗೆ ಜೌಷಧಿಗೆಂದು ತೆರಳಿದವರು ಈವರೆಗೆ ಮನೆಗೆ ಹಿಂತಿರುಗಿಲ್ಲ. ಸಂಬಂಧಿಕರ ಮನೆಗಳಲ್ಲಿ ಹಾಗೂ ಪರಿಸರಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿರುವುದಿಲ್ಲ.

ಕಡಬ: ಆಸ್ಪತ್ರೆಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ ➤ ಪತ್ತೆಗಾಗಿ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top