ಕ್ರೈಮ್ ನ್ಯೂಸ್

crime, arrest, suspected

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 24. ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ (45) ಎಂದು ಗುರುತಿಸಲಾಗಿದೆ. ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು ಪ್ರಕರಣಗಳಿವೆ. ಬಂಧಿತ […]

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ. 24. ಅಶೋಕ್ ಲೈಲ್ಯಾಂಡ್ ದೋಸ್ತ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ- 75ರ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಮಹಮ್ಮದ್ ಅನ್ಸಾರ್, ಸುಮಯ್ಯ ಹಾಗೂ 1 ವರ್ಷದ ಮಗು ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದೆ.  

ಉಪ್ಪಿನಂಗಡಿ: ರಸ್ತೆ ಅಪಘಾತ  ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಉಪ್ಪಿನಂಗಡಿ: ಚಿನ್ನ ಖರೀದಿಗೆ ತೆರಳುತ್ತಿದ್ದ ವ್ಯಕ್ತಿಯಿಂದ 10 ಲ.ರೂ. ಕಳ್ಳತನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 24. ಮಗಳ ವಿವಾಹಕ್ಕೆ ಚಿನ್ನಾಭರಣ ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಾಯರ್ಪಾಡಿ ನಿವಾಸಿ ಮೊಹಮ್ಮದ್ ಅವರಿಂದ 10 ಲಕ್ಷ ರೂ.ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ಮುಸ್ತಫಾ (41) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 9 ಲಕ್ಷ ರೂ.ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ಇನ್ನೋರ್ವ ಆರೋಪಿ ಒಂದು ಲಕ್ಷ ರೂಪಾಯಿಯೊಂದಿಗೆ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

ಉಪ್ಪಿನಂಗಡಿ: ಚಿನ್ನ ಖರೀದಿಗೆ ತೆರಳುತ್ತಿದ್ದ ವ್ಯಕ್ತಿಯಿಂದ 10 ಲ.ರೂ. ಕಳ್ಳತನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 24. ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ರವರ ಪುತ್ರ ಲೋಕೇಶ(22) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಗಳೂರುನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ದೇವರ ಸಂದರ್ಶನಕ್ಕೆ ಬಂದಿದ್ದ ಯುವತಿಯೋರ್ವಳು ನಾಪತ್ತೆಯಾದ ಕುರಿತು ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ರೇಶ್ಮಾ ಎಂದು ಗುರುತಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವರ ದರ್ಶನ ಪಡೆದ ಬಳಿಕ ಎಲ್ಲರೂ ರೂಂ ಹೋಗಿದ್ದು, ಬಳಿಕ ಯುವತಿ ರೇಶ್ಮಾ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.  

ಧರ್ಮಸ್ಥಳ ಕ್ಷೇತ್ರ ಸಂದರ್ಶಿಸಲು ಬಂದಿದ್ದ ಯುವತಿ ನಾಪತ್ತೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

➤ಮಂಗಳೂರು ಹಲವು ಪ್ರಖರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಬಂಧನ

(ನ್ಯೂಸ್ ಕಡಬ) newskadaba.com. ಮುಂಬೈ,  ಮಾ. 23. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅಜರುದ್ದೀನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ (29) ಎಂದು ಗುರುತಿಸಲಾಗಿದೆ.ಈತನ ಮೇಲೆ ಮಂಗಳೂರು ನಗರ, ದಕ್ಷಿಣಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ  ವಾರಂಟ್ ಇದೆ.ಮಂಗಳೂರು ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್ ಕುಮಾರ್ ರವರ

➤ಮಂಗಳೂರು ಹಲವು ಪ್ರಖರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಉಡುಪಿ, ಮಾ.23. ಅಪಾರ್ಟ್ಮೆಂಟ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳನ್ನು ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ಎಂದು ಗುರುತಿಸಲಾಗಿದೆ.  

ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಗಾಂಜಾ ಸೇವನೆ..!   ➤ ಐವರು ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.23. ಆರೋಪಿಯನ್ನೇ ಅಪಹರಿಸಿದ ಪೊಲೀಸರು ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.    

ಆರೋಪಿಯನ್ನೇ ಅಪಹರಿಸಿ ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಮಾ.23. ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್ ಕಾನ್ಸ್’ಟೇಬಲ್ ಒಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ಕಾನ್ಸ್ ಟೇಬಲ್’ರನ್ನು ಜಾಫರ್ ಎಂದು ಗುರುತಿಸಲಾಗಿದೆ. ಪೊಲೀಸ್ ವಸತಿ ಗೃಹದಲ್ಲಿ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಜಾಫರ್ ಅವರನ್ನು ವಿಮ್ಸ್’ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಾಫರ್ ಮೃತಪಟ್ಟಿದ್ದಾನೆ.

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top