ಕ್ರೈಮ್ ನ್ಯೂಸ್

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 23. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅಜರುದ್ದೀನ್ ಅಲಿಯಾಸ್ ಅಜರ್ (ನಾಥು) ಕೃಷ್ಣಾಪುರ ಎಂದು ಗುರುತಿಸಲಾಗಿದೆ. ಈತನ ವಿರುದ್ದ ದಾಖಲಾಗಿದ್ದ 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದ್ದು, ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಬಂಧಿಸಲಾಗಿದೆ. ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌, ನಿರ್ದೇಶನದಂತೆ […]

ಮಂಗಳೂರು: 23 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಹಾಸನ, ಮಾ. 23. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ.

ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ,23. ಖ್ಯಾತ ಗಾಯಕ ಸೋನು ನಿಗಮ್ ತಂದೆಯ ಮನೆಯಿಂದ 72 ಲಕ್ಷ ರೂಪಾಯಿ ಕಳ್ಳತನ ಮಾಡಿದ ಆರೋಪದಲ್ಲಿ ಅವರ ಮಾಜಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಮಗಳಿಗೆ ಕರೆ ಮಾಡಿ, ಮರದ ಕಪಾಟಿಲ್ಲಿ ಇದ್ದ ಡಿಜಿಟಲ್ ಲಾಕರ್‌ನಿಂದ 40 ಲಕ್ಷ ರೂಪಾಯಿ ಕಾಣೆಯಾಗಿದೆ ಎಂದು ನಿಕಿತಾ ಪೊಲೀಸ್ ಠಾಣೆಗೆ ಆಗಮಿಸಿದ ದೂರು ನೀಡಿದ್ದಾರೆ.

ಸೋನು ನಿಗಮ್ ತಂದೆ ಮನೆಯಿಂದ 72 ಲಕ್ಷ ರೂ. ಕಳವು ➤ ಮಾಜಿ ಕಾರು ಚಾಲಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತು ಎಸ್.ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನನ್ನು ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಎಂದು ಗುರುತಿಸಲಾಗಿದೆ. ಈತ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮಾ. 23. KSRTC ಬಸ್- ಬೈಕ್ ಗೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 23. ಸ್ಕೂಟಿಯಲ್ಲಿ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆಯೊಬ್ಬರನ್ನು ಕಾರಿನಿಂದ ಡಿಕ್ಕಿ ಹೊಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತ ಸಾಮಾಜಿಕ ಕಾರ್ಯಕರ್ತೆಯನ್ನು ಕಲಬುರಗಿ ನಗರದ ಜಂಜಂ ಕಾಲೋನಿ ನಿವಾಸಿ ಮುಜತ್ ಸುಲ್ತಾನ್(35) ಎಂದು ಗುರುತಿಸಲಾಗಿದೆ. ಮುಜತ್ ಸುಲ್ತಾನ್ ರನ್ನು ವಸೀಂ ಶೇಖ್, ನದೀಮ್, ಅಜೀಮ್ ಶೇಖ್ ಮತ್ತು ನದೀಮ್ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 23. ಕ್ಯಾಂಡಲ್ ಫ್ಯಾಕ್ಟರಿಯೊಂದು ಅಗ್ನಿ ಆಹುತಿಗೊಳಗಾಗಿ ಸಂಪೂರ್ಣವಾಗಿ ಭಸ್ಮಗೊಂಡಘಟನೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಚಚ್೯ ಪರಿಸರದಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮ ಪಂಚಾಯತ್ ನ ಅತ್ತೂರು ಚರ್ಚ್ ಬಳಿ ಕ್ಯಾಂಡಲ್ ತಯಾರಿಕಾ ಕೇಂದ್ರ ದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 03 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.

ಕ್ಯಾಂಡಲ್ ಫ್ಯಾಕ್ಟರಿ ಆಕಸ್ಮಿಕವಾಗಿ ಬೆಂಕಿಗಾಹುತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್      ➤ 6 ಮಂದಿ ಬಂಧನ, 100ಕ್ಕೂ FIR..!

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.22. ಪ್ರಧಾನಿ ನರೇಂದ್ರ ಮೋದಿ ವಿರುದ್ದ ದೆಹಲಿ ನಗರಾದ್ಯಂತ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ 100ಕ್ಕೂ ಎಫ್‌ಐಆರ್ ದಾಖಲಾಗಿದೆ. ಪ್ರಿಂಟಿಂಗ್ ಪ್ರೆಸ್ ಆಕ್ಟ್ & ಡಿಫೇಸ್ಮೆಂಟ್ ಆಫ್ ಪ್ರಾಪರ್ಟಿ ಆಕ್ಟ್‌ನಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವ್ಯಾನ್‌ವೊಂದು ಆಮ್ ಆದ್ಮಿ ಪಕ್ಷದ ಕಚೇರಿಯಿಂದ ಹೊರಟಿದ್ದು, ಕೂಡಲೇ ಆ ವ್ಯಾನ್‌ನ್ನು ಅಡ್ಡಗಟ್ಟಿ ಕೆಲವು ಪೋಸ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಪೋಸ್ಟರ್      ➤ 6 ಮಂದಿ ಬಂಧನ, 100ಕ್ಕೂ FIR..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.22. ವಿದ್ಯಾರ್ಥಿಯೋರ್ವ ಸೀಮೆಎಣ್ಣೆ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈಮರ್ಮುಲಾ ತನ್ಸಿಯುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಉಮರ್ ಅಫ್ರಾಬುದ್ದೀನ್ (15) ಪೆರುಂಬಳ ಚಾಳ ಜೆಟ್ಟಿ ಅಶ್ರಫ್ ಹಾಗೂ ಫಾಮಿನಿಯಾ ದಂಪತಿಯ ಪುತ್ರ  ಮೃತಪಟ್ಟ ವಿದ್ಯಾರ್ಥಿ. ಹಲವು ದಿನಗಳಿಂದ ತೀವ್ರ ಅಸ್ವಸ್ಥನಾಗಿದ್ದ ಉಮರ್ ಅಫ್ರಾಬುದ್ದೀನ್ ಸೀಮೆಎಣ್ಣೆ ಸೇವಿಸಿದ್ದಾಗಿ ಪತ್ತೆಯಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಕಷ್ಟ

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು ಮಾ.22 ಸಿಲಿಕಾನ್​ ಸಿಟಿಯಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳನೊಬ್ಬ ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗಳಿಗೆ ನುಗ್ಗಿ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.ಹೆಚ್​ಎಸ್​​ಆರ್​ ಲೇಔಟ್​​ನ ಅಪಾರ್ಟ್​ಮೆಂಟ್​ನಿಂದ ಶೂ ಕದ್ದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ. ಮನೆ ಬಾಗಿಲವರೆಗೂ ಬಂದು ಕಳ್ಳತನ ನಡೆಸಿದ್ದು, ಯಾವಾಗ ಮನೆಗೆ ನುಗ್ಗಿ ಕನ್ನ ಹಾಕ್ತಾರೋ ಅಂತ ಜನರು ಭಯಭೀತರಾಗಿದ್ದಾರೆ. ಬೇರೆ ಬೇರೆ ರೀತಿಯ ಶೂಗಳು ಒಂದೇ ಕಡೆ ಸಿಗುತ್ತವೆ ಎಂದು ಕಳ್ಳರು ಅಪಾರ್ಟ್​ಮೆಂಟ್​​ಗಳನ್ನು ಗುರಿಯಾಗಿಸಿಕೊಂಡಿದ್ದಾರೆ.    

ಮಧ್ಯರಾತ್ರಿ ವೇಳೆ ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ಶೂ ಕಳ್ಳರು ➤ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top