ಕ್ರೈಮ್ ನ್ಯೂಸ್

crime, arrest, suspected

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 26. ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ […]

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Death, deadbody, Waterfall

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ಅವರ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಚಾಲಕ ಹೊನ್ನಪ್ಪ ಅವರು ನಾಪತ್ತೆಯಾಗಿದ್ದು ಅವರಿಗಾಗಿ ಮೂರು ದಿನಗಳಿಂದ ಎಸ್.ಡಿ.ಆರ್.ಎಫ್, ಈಶ್ವರ್ ಮಲ್ಪೆ ತಂಡ, ಅಗ್ನಿ ಶಾಮಕ ತಂಡ ಹಾಗೂ ಅಂಬ್ಯುಲೆನ್ಸ್ ಚಾಲಕ ಮಾಲಕರ ತಂಡ ತೀವ್ರ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಇದೀಗ ಅವರ ಮೃತದೇಹವು ಕುಮಾರಧಾರ

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಜು. 25. ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಗುರುವಾರದಂದು ನಡೆದಿದೆ. ಮೃತಪಟ್ಟ ಯುವಕನಿಗೆ 35 ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ. ಗುರುವಾರ ಬೆಳಗ್ಗೆ 11ಗಂಟೆ ಸುಮಾರಿಗೆ ಗೂಡ್ಸ್ ರೈಲು ಬಿ.ಸಿ.ರೋಡ್ ನಿಲ್ದಾಣದಲ್ಲಿ ಸಾಗುವ ವೇಳೆ ಆ ವ್ಯಕ್ತಿಯು ಹಳಿಯಲ್ಲಿ ಮಲಗಿದ್ದು, ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಖದ ಭಾಗಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಆ್ಯಂಬುಲೆನ್ಸ್ ಚಾಲಕ ನಾಪತ್ತೆ ಶೋಧ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಜು. 24. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ ಎಂಬವರು ಜುಲೈ 22 ರಂದು ನಾಪತ್ತೆಯಾಗಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ.   ಮೂಲಗಳ ಪ್ರಕಾರ, ಹೊನ್ನಪ್ಪ ಅವರು ಜುಲೈ 22 ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ಕಾಣೆಯಾಗಿದ್ದಾರೆ. ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಈ ಹಿನ್ನೆಲೆ

ಸುಬ್ರಹ್ಮಣ್ಯ: ಆ್ಯಂಬುಲೆನ್ಸ್ ಚಾಲಕ ನಾಪತ್ತೆ ಶೋಧ ಕಾರ್ಯ ಆರಂಭ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಜು. 24.  2021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಯತಿರಾಜ್ (34) ಎಂದು ಗುರುತಿಸಲಾಗಿದೆ. ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗೆ 7 ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತಾದರೂ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆ ಆರೋಪಿಯ ವಿರುದ್ಧ ಉಪ್ಪಿನಂಗಡಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾರ್ನ್ ವಿಚಾರದಲ್ಲಿ ಆಕ್ರೋಶ- ಬಸ್ ಚಾಲಕನ ಮೇಲೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 24. ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲ್ಮೆಟ್ ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ.   ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ಸಿನ ಚಾಲಕ ರಿಯಾಝ್ ಅಹಮ್ಮದ್ ಅವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು

ಹಾರ್ನ್ ವಿಚಾರದಲ್ಲಿ ಆಕ್ರೋಶ- ಬಸ್ ಚಾಲಕನ ಮೇಲೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ

(ನ್ಯೂಸ್‌ ಕಡಬ) newskadaba.com ಜು.23: ಉಡುಪಿ: ಮೆಸೇಜಿಂಗ್ ಆ್ಯಪ್ ಮೂಲಕ ಹೂಡಿಕೆ ಯೋಜನೆಗೆ ಆಮಿಷವೊಡ್ಡಲ್ಪಟ್ಟ ಬಳಿಕ 34 ವರ್ಷದ ವ್ಯಕ್ತಿಯೊಬ್ಬ ಆನ್‌ಲೈನ್ ವಂಚನೆಗೆ ಒಳಗಾಗಿ 15.5 ಲಕ್ಷ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಶ್ವಿತ್ ಎಂದು ಗುರುತಿಸಲಾದ ಸಂತ್ರಸ್ತ ಈ ಸಂಬಂಧ ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಅಶ್ವಿತ್‌ಗೆ ಜನವರಿ 28 ರಂದು ಮೀನಾ ಸಕ್ಪಾಲ್

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..!

(ನ್ಯೂಸ್‌ ಕಡಬ) newskadaba.com ಜು.23: ಚಿಕ್ಕಮಗಳೂರು: ಬಾಲ್ಯ ವಿವಾಹದ ಕುರಿತು ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿಯ ಕುಟುಂಬವನ್ನು ಗ್ರಾಮಸ್ಥರು ಬಹಿಷ್ಕಾರ ಹಾಕಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಯರೇಹಳ್ಳಿಯಲ್ಲಿ ನಡೆದಿದೆ. ಯರೇಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ತೇಜಸ್ವಿನಿ ಎಂಬ ಅಂಗನವಾಡಿ ಶಿಕ್ಷಕಿ ಕೆಲ ದಿನಗಳ ಹಿಂದೆ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳ ವಿವಾಹದ ಬಗ್ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗನವಾಡಿ ಶಿಕ್ಷಕಿಯಿಂದಾಗಿ ವಿವಾಹ ನಿಂತು ಹೋಗಿದ್ದಲ್ಲದೆ, ಬಾಲ್ಯ

ಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿ ಪತ್ತೆಯಾಗಿದ್ದ ಯುವತಿ ಧರ್ಮಸ್ಥಳದ ಸನಿಹ ಅನುಮಾನಸ್ಪದ ಸಾವು!

(ನ್ಯೂಸ್‌ ಕಡಬ) newskadaba.com ಜು.23: ಧರ್ಮಸ್ಥಳದ ಸನಿಹ ಬೆಳಾಲು ಗ್ರಾಮದ ಕುಕ್ಕೊಟ್ಟುವಿನ ವೀಣಾ(19) ಎನ್ನುವ ಯುವತಿ ಅನುಮಾನಸ್ಪದವಾಗಿ ಸಾವು ಕಂಡಿರುವ ಘಟನೆ ನಡೆದಿದೆ. ಕಳೆದ ಜುಲೈ 11 ರಂದು ವೀಣಾಳ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಧರ್ಮಸ್ಥಳ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೀಣಾ ಅವರು ಕಳೆದ ಮೇ.10ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ಆಕೆಯ ಪತ್ತೆಗಾಗಿ ಪ್ರಕಟಣೆ ಹೊರಡಿಸಿದ್ದರು. ಆದಾದ ಕೆಲವೇ ದಿನಗಳಲ್ಲಿ

ನಾಪತ್ತೆಯಾಗಿ ಪತ್ತೆಯಾಗಿದ್ದ ಯುವತಿ ಧರ್ಮಸ್ಥಳದ ಸನಿಹ ಅನುಮಾನಸ್ಪದ ಸಾವು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು

(ನ್ಯೂಸ್‌ ಕಡಬ) newskadaba.com ಜು. 22: ಫುಡ್ ಪಾಯಿಸನ್‌ನಿಂದಾಗಿ ತಂದೆ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಂದೆ ರಮೇಶ್(38), ಮಗಳು ನಾಗಮ್ಮ(8), ದೀಪಾ(6) ಮೃತ ದುರ್ವೈವಿಗಳು. ತಾಯಿ ಪದ್ಮಾ, ಮಕ್ಕಳಾದ ಕೃಷ್ಣ, ಚೈತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top