ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು ಕುಂಜತ್ ಬೈಲು ನಿವಾಸಿ ರಾಜ, ಜಪಾನ್ ಮಂಗ ಯಾನೆ ರೋಹನ್ ರೆಡ್ಡಿ (36) ಎಂದು ಗುರುತಿಸಲಾಗಿದೆ. ಈತ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ನಂತರ ಪ್ರಕರಣದ ವಿಚಾರಣಾ ಸಂದರ್ಭ […]

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಕಟ್ಟಡದ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಚಾಮರಾಜಪೇಟೆಯ ಆಜಾದ್ ನಗರದ 6ನೇ ಕ್ರಾಸ್​ನಲ್ಲಿ ನಡೆದಿದೆ. ಮೃತ ಮಗುವನ್ನು ವಿನಯ್ ಎಂಬವರ ಪುತ್ರಿ ದೀಕ್ಷಾ ಎಂದು ಗುರುತಿಸಲಾಗಿದೆ. ಆಕೆಯ ತಾಯಿ ಊಟ ಮಾಡಿಸುತ್ತಿದ್ದ ವೇಳೆ ಆಟವಾಡುತ್ತಿದ್ದ ದೀಕ್ಷಾ ಗ್ರಿಲ್ಸ್ ಮೇಲೆ ಹತ್ತಿದ್ದು, ಬಳಿಕ ನೋಡ ನೋಡುತ್ತಿದ್ದಂತೆ ಜಾರಿ ಕೆಳಕ್ಕೆ ಬಿದ್ದಿದ್ದಾಳೆ. ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ ಎನ್ನಲಾಗಿದೆ.

ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನಿಂದ ನೋಟು ಎಸೆದು ರೀಲ್ಸ್ ➤ ಯೂಟ್ಯೂಬರ್ ಜೈಲುಪಾಲು

(ನ್ಯೂಸ್ ಕಡಬ) newskadaba.com ಗುರುಗ್ರಾಮ್,  ಮಾ. 15.  ವೆಬ್ ಸೀರೀಸ್‌ನಿಂದ ಪ್ರೇರಣೆ ಪಡೆದು ಚಲಿಸುತ್ತಿರುವ ಕಾರಿನಿಂದ ನೋಟು ಎಸೆದು ಯೂಟ್ಯೂಬರ್ ಸಹಿತ ಇಬ್ಬರು ಜೈಲು ಪಾಲಾದ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಬಂಧಿತರನ್ನು ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ ಮತ್ತು ಆತನ ಸ್ನೇಹಿತ ಲಕ್ಕಿ ಕಾಂಬೋಜ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗುರುಗ್ರಾಮ್‌ನ ಡಿಎಲ್‌ಎಫ್ ಗಾಲ್ಫ್ ಕೋರ್ಸ್ ರಸ್ತೆಯ ಕೆಳಸೇತುವೆಯಲ್ಲಿ ಮಾರ್ಚ್ 02ರಂದು ಕಾರನ್ನು ಅಪಾಯಕಾರಿಯಾಗಿ ಚಲಾಯಿಸುತ್ತಾ ಹಿಂಬದಿಯಿಂದ ನೋಟುಗಳನ್ನು ಎಸೆಯುತ್ತಿದ್ದರು. ಇವರು ಶಾಹಿದ್‌ ಕಪೂರ್‌, ಕೆಕೆ ಮೆನನ್‌ ಅಭಿನಯದ ʼಫರ್ಜಿʼ

ಕಾರಿನಿಂದ ನೋಟು ಎಸೆದು ರೀಲ್ಸ್ ➤ ಯೂಟ್ಯೂಬರ್ ಜೈಲುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣಿತ ಪರೀಕ್ಷೆಗೆ ಗೈರಾದ ಬಾಲಕಿ ➤ ತನಿಖೆಯ ವೇಳೆ ಬಾಲ್ಯವಿವಾಹ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಔರಂಗಬಾದ್, ಮಾ. 15. ವಿದ್ಯಾರ್ಥಿನಿಯೊಬ್ಬಳು ಗಣಿತ ಪರೀಕ್ಷೆಗೆ ಗೈರು ಹಾಜರಾಗುವ ಮೂಲಕ ಬಾಲ್ಯವಿವಾಹ ಪ್ರಕರಣವೊಂದು ಬೆಳಕಿಗೆ ಬಂದ ಘಟನೆ ಔರಂಗಬಾದ್ನಲ್ಲಿ ನಡೆದಿದೆ. ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ ಗಣಿತ ಪರೀಕ್ಷೆಗೆ ಬಾಲಕಿಯೋರ್ವಳು ಗೈರಾಗಿದ್ದು, ಇದರಿಂದ ಅನುಮಾನಗೊಂಡ ಸಾಮಾಜಿಕ ಕಾರ್ಯಕರ್ತರೊಬ್ಬರು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ದೂರನ್ನಾಧರಿಸಿ ಬಾಲಕಿಯ ಮನೆಗೆ ಬಂದ ಗ್ರಾಮ ಸೇವಕರಿಗೆ ಬಾಲ್ಯ ವಿವಾಹ ಮಾಡಿರುವ ವಿಚಾರ ತಿಳಿದುಬಂದಿದೆ.

ಗಣಿತ ಪರೀಕ್ಷೆಗೆ ಗೈರಾದ ಬಾಲಕಿ ➤ ತನಿಖೆಯ ವೇಳೆ ಬಾಲ್ಯವಿವಾಹ ಪ್ರಕರಣ ಬೆಳಕಿಗೆ Read More »

ಕ್ರೈಮ್ ನ್ಯೂಸ್

ಅಡ್ಡಾದಿಡ್ಡಿ ಕಾರು ಚಾಲನೆ ➤ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು. ಮಾ. 15. ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿಕೊಂಡು ಬಂದ ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ವಿದ್ಯಾರ್ಥಿ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶದ ಆನಂತಪುರ ಜಿಲ್ಲೆ ಬೊಮ್ಮನಹಳ್ಳ ನಿವಾಸಿ ಕಾರ್ತಿಕ್ (23) ಮತ್ತು ಪ್ರಕಾಶಂ ಜಿಲ್ಲೆಯ ಭಗಿರಥ ರೆಡ್ಡಿ (17) ಎಂದು ಗುರುತಿಸಲಾಗಿದೆ. ವ್ಯಾಸಂಗ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಕಾರ್ತಿಕ್, ಖಾಸಗಿ ಕಾಲೇಜಿನಲ್ಲಿ

ಅಡ್ಡಾದಿಡ್ಡಿ ಕಾರು ಚಾಲನೆ ➤ ಇಬ್ಬರು ವಿದ್ಯಾರ್ಥಿಗಳ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

PSI ಮೇಲೆ ಶಾಸಕರ ಪುತ್ರನಿಂದ ಹಲ್ಲೆ ಆರೋಪ ➤ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಸಿಂಧನೂರ, ಮಾ. 15. ರಂಗಮಂದಿರದ ಎದುರು ಪುನೀತ್ ರಾಜಕುಮಾರ್ ಪುತ್ಥಳಿ ಸ್ಥಾಪನೆಗೆ ಸಂಬಂಧಿಸಿದಂತೆ ಪೊಲೀಸರು ಮತ್ತು ಪುನೀತ್‌ ರಾಜ್‌ಕುಮಾರ್ ಅಭಿಮಾನಿಗಳ ನಡುವೆ ನಡೆದ ತಳ್ಳಾಟದ ವೇಳೆ ಪಿಎಸ್ ಐ ಮೇಲೆ ಹಲ್ಲೆ ನಡೆಸಿರುವ ಕುರಿತು ವರದಿಯಾಗಿದೆ. ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಅವರ ಪುತ್ರ ಅಭಿಷೇಕ್ ನಾಡಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಂಧನೂರಿನಲ್ಲಿ ನೂತನವಾಗಿ ನಿರ್ಮಿಸಿದ ರಂಗ ಮಂದಿರದ ಮುಂದೆ ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಸ್ಥಾಪಿಸಬೇಕು ಮತ್ತು ರಂಗ

PSI ಮೇಲೆ ಶಾಸಕರ ಪುತ್ರನಿಂದ ಹಲ್ಲೆ ಆರೋಪ ➤ ಕೇಸ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 15. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಬಳಿಕ ತಾನೂ ಮೋಟಾರ್ ಪಂಪ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ತಮಿಳುನಾಡು ನಾಮಕ್ಕಲ್ ಜಿಲ್ಲೆಯ ಮೋಹನೂರಿನಲ್ಲಿ ನಡೆದಿದೆ. ಮೃತರನ್ನು ಗುಣವತಿ, ಆಕೆಯ ಮಕ್ಕಳಾದ ಪ್ರಿಯಾನ್ (5) ಸುಜಿತ್ಪ್ರಿಯನ್ (2) ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆಯಲ್ಲಿರುವ ಸ್ನೇಹಿತನ‌ ಮನೆಗೆ ಕಾರ್ಯಕ್ರಮಕ್ಕೆಂದು ವೆಂಕಟೇಶ್ ಹೋಗಿದ್ದ ವೇಳೆ ಗೋಪಾಲಸ್ವಾಮಿ ಎಂಬಾತ ರ‍್ಯಾಶ್‌ ಡ್ರೈವಿಂಗ್‌ ಮಾಡಿಕೊಂಡು ಬಂದಿದ್ದು, ಈ ವೇಳೆ ಇದನ್ನ ಪ್ರಶ್ನಿಸಿದಕ್ಕೆ ಕೊಡಿಗೇಹಳ್ಳಿಗೆ ಬಾ ನಿನ್ನನ್ನ ನೋಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದನು.

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ವಾಟ್ಸ್ ಆಯಪ್‌ನಲ್ಲಿ ಬಂದ ಅರೆಕಾಲಿಕ ಉದ್ಯೋಗದ ಜಾಹೀರಾತನ್ನು ನಂಬಿ ಒಟ್ಟು 15.34 ಲಕ್ಷ ರೂ. ಕಳೆದುಕೊಂಡ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದು, ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿಯ ವಾಟ್ಸಾಪ್ ಗೆ ಮಾರ್ಚ್ 4ರಂದು ಅಪರಿಚಿತ ವ್ಯಕ್ತಿಯೋರ್ವ ಅರೆಕಾಲಿಕ ಉದ್ಯೋಗದ ಕುರಿತು ಸಂದೇಶ ಕಳುಹಿಸಿದ್ದು, ಅದರ ಜೊತೆಗೆ ಗೂಗಲ್‌ ಲಿಂಕ್ ಒಂದನ್ನು ಕಳುಹಿಸಲಾಗಿತ್ತು. ಅಲ್ಲದೇ ಟೆಲಿಗ್ರಾಂ ಆಯಪ್‌ ಡೌನ್‌ಲೋಡ್‌ ಮಾಡುವಂತೆ ಸೂಚಿಸಿದ್ದ. ದೂರುದಾರ ವ್ಯಕ್ತಿಯು ಸಂದೇಶದ ಪ್ರಕಾರ

ಉದ್ಯೋಗದ ಹೆಸರಿನಲ್ಲಿ 15.34 ಲಕ್ಷ ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೀದಿ ನಾಯಿಗಳ ದಾಳಿಗೆ ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಮಾ. 14. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಬಾನೋತ್ ಭಾರತ್ (5) ದು ಗುರುತಿಸಲಾಗಿದೆ. ಈತ ಮನೆಯ ಪಕ್ಕದಲ್ಲಿರುವ ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ಆತನ ಮೇಲೆ ದಾಳಿ ನಡೆಸಿವೆ. ಪರಿಣಾಮ ಗಂಭೀರ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬೀದಿ ನಾಯಿಗಳ ದಾಳಿಗೆ ಐದರ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top