ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 10. ಬಸ್‌ ನಿಲ್ದಾಣದ ಬಳಿ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕುವೆಟ್ಟು ಗ್ರಾಮ ಮದ್ದಡ್ಕ ಮನೆ ಶೇಖ್‌ ಜಹೀರ್‌ (26) ಎಂದು ಗುರುತಿಸಲಾಗಿದೆ. ಪೊಲೀಸರು ಪರಿಶೀಲಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವಸುವ ಕುರಿತು ವೈದ್ಯಕೀಯ ಪರೀಕ್ಷೆಗೆ […]

ಬೆಳ್ತಂಗಡಿ: ಗಾಂಜಾ ಸೇವನೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಬೈಕ್ ಸ್ಕಿಡ್- ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಬೈಕ್ ಸ್ಕಿಡ್ ಆಗಿ ಬಿದ್ದು ಸವಾರನೋರ್ವ ಗಾಯಗೊಂಡ ಘಟನೆ ಅಲೆಟ್ಟಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರನನ್ನು ಅಲೆಟ್ಟಿ ನಿವಾಸಿ ಮಹಾಬಲ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ವೇಳೆ ನಾಯಿ ಅಡ್ಡ ಬಂದಿದ್ದು, ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ‌. ತಕ್ಷಣವೇ ಸ್ಥಳೀಯರ ಸಹಕಾರದಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಬೈಕ್ ಸ್ಕಿಡ್- ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ಯುವಕನೋರ್ವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮರಪಡ್ನೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದೆ. ಈತ ಮನೆಯ ಪಕ್ಕದ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮನೆಯವರ ಗಮನಕ್ಕೆ ಬಂದ ತಕ್ಷಣವೇ ಹಗ್ಗ ತುಂಡರಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಳ್ಯ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ರಸ್ತೆಯ ವಿಚಾರದಲ್ಲಿ ವಿವಾದ- ಪೊಲೀಸ್ ಎಂಟ್ರಿ ➤ ತನಿಖೆಯ ವೇಳೆ ಸಾಗುವಾನಿ ಮರದ ದಿಮ್ಮಿ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ರಸ್ತೆ ವಿವಾದಕ್ಕೆ ಸಂಬಂಧಿಸಿ ಸ್ಥಳ ಪರಿಶೀಲನೆಗೆಂದು ಬಂದ ಪೊಲೀಸರಿಗೆ ಮನೆಯ ಆವರಣದಲ್ಲಿ ಸಾಗುವಾನಿ ಮರದ ದಿಮ್ಮಿ ಹಾಗೂ ಬೀಟಿ ಮರದ ದಿಮ್ಮಿ ಗಮನಕ್ಕೆ ಬಂದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ ಘಟನೆ ನಡೆದಿದೆ. ಮೊಯಿದಿನ್ ಎಂಬವರ ಮನೆಯ ಜಾಗದ ಬಳಿಯಿರುವ ದೇವಸ್ಥಾನಕ್ಕೆ ಸಂಬಂಧಿಸಿದ ಮಾರಿಕಳ ಕಾರ್ಯಕ್ರಮ ನಡೆಸುವ ಸ್ಥಳಕ್ಕೆ ತೆರಳುವ ರಸ್ತೆಯನ್ನು ಮೊಯಿದಿನ್ ರವರು ಬೇಲಿ ಹಾಕಿ ಬಂದ್ ಮಾಡಿದ್ದರು. ಈ ವಿಷಯಕ್ಕೆ ಸಂಬಂಧಿಸಿ ಸ್ಥಳೀಯ ದೇವಸ್ಥಾನದ ಮುಖಂಡರು

ಸುಳ್ಯ: ರಸ್ತೆಯ ವಿಚಾರದಲ್ಲಿ ವಿವಾದ- ಪೊಲೀಸ್ ಎಂಟ್ರಿ ➤ ತನಿಖೆಯ ವೇಳೆ ಸಾಗುವಾನಿ ಮರದ ದಿಮ್ಮಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೋಮಾಂಸ ಸಾಗಾಟದ ಶಂಕೆ ➤ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು

(ನ್ಯೂಸ್ ಕಡಬ)newskadaba.com ಬಿಹಾರ, ಮಾ.10. ಗೋಮಾಂಸ ಸಾಗಾಟದ ಶಂಕೆಯಲ್ಲಿ ಗುಂಪು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಘಟನೆ ಬಿಹಾರದ ಸರಣ್ ಜಿಲ್ಲೆಯಲ್ಲಿ ಸಂಭವಿಸಿದೆ. ಸಿವಾನ್ ಜಿಲ್ಲೆಯ ಹಸನ್ಪುರ ಪೊಲೀಸ್ ಠಾಣೆಯ ನಿವಾಸಿ ನಶೀಮ್ ಖುರೇಶಿ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಖುರೇಶಿ ಹಾಗೂ ಅವರ ಸೋದರಳಿಯ ರಸೂಲ್ಪುರದ ಮೂಲಕ ಜೋಗಿಯಾ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬ್ಯಾಗ್ನಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ಗ್ರಾಮಸ್ಥರ ಗುಂಪೊಂದು ಅವರನ್ನು ತಡೆದು ನಿಲ್ಲಿಸಿದೆ.ಗೋಮಾಂಸವನ್ನು ತೋರಿಸುವಂತೆ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.  

ಗೋಮಾಂಸ ಸಾಗಾಟದ ಶಂಕೆ ➤ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು Read More »

ಕ್ರೈಮ್ ನ್ಯೂಸ್

ಟ್ರಾನ್ಸ್ ಫಾರ್ಮರ್ ಸ್ಫೋಟ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಥಾಣೆ, ಮಾ. 10. ಟ್ರಾನ್ಸ್ಫಾರ್ಮರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯ ಶಿಲ್ಪಾಟಾ ಪ್ರದೇಶದಲ್ಲಿ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಥಾಣೆ ಮುನ್ಸಿಪಲ್ ಕಾರ್ಪೋರೇಶನ್ ತಿಳಿಸಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ ➤ ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಬಂಟ್ವಾಳ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 10. ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಈತನ ವಿರುದ್ದ ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC ಮಾನ್ಯ ACJ & JMFC Bantwal c c no1020/2020 ರಡಿ ಪ್ರಕರಣ ದಾಖಲಾಗಿತ್ತು. ಮಾ. 08ರಂದು ಈತನ

ಬಂಟ್ವಾಳ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅನಾಹುತ ನಡೆದು ಬಸ್ ನಲ್ಲಿ ನಿದ್ರಿಸುತ್ತಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45).ಬೆಳಗಿನ ಜಾವ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಬಸ್ನಲ್ಲೇ ನಿದ್ರೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಶೌಚಕ್ಕೆ ಹೋಗಿದ್ದ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​     

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​      Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ವಿವಿಧ ಪ್ರಕರಣಗಳ ಆರೋಪಿ ಕ್ಯಾಲಿಕಟ್ ಏರ್ ಪೋರ್ಟ್ ನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ ಘಡನೆ ನಡೆದಿದೆ. ಬಂಧಿತನನ್ನು ಕಣ್ಣೂರು ಜಿಲ್ಲೆಯ ಮಹಮ್ಮದ್‌ ಅಸ್ಗರ್‌ ಕರಿಂಕಲ್ಲನ್‌ (26) ಎಂದು ಗುರುತಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಈತನನ್ನು ಮಾದಕ ವಸ್ತು ಸಾಗಾಟ, ಮಾರಾಟ ಹಾಗೂ ಸೇವಿಸಿರುವ ಶಂಕೆಯ ಹಿನ್ನೆಲೆ ತನಿಖೆ ನಡೆಸಿದಾಗ ಮಂಗಳೂರು ನಗರ ಸೆಂಟ್ರಲ್ ರೈಲ್ವೇ ನಿಲ್ದಾಣ ಬಳಿಯಲ್ಲಿ ಮಾರ್ಚ್ 6ರಂದು ಗಾಂಜಾ ಖರೀದಿಸಿ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ

ಮಂಗಳೂರು: ವಿವಿಧ ಪ್ರಕರಣಗಳ ಆರೋಪಿ ಕ್ಯಾಲಿಕಟ್ ಏರ್ ಪೋರ್ಟ್ ನಲ್ಲಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top