ಕ್ರೈಮ್ ನ್ಯೂಸ್

ಕುಡಿದ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ➤ ಮೂವರು ರೌಡಿಶೀಟರ್ ಗಳಿಗೆ ಹಿಗ್ಗಾಮುಗ್ಗ ಥಳಿತ

(ನ್ಯೂಸ್ ಕಡಬ) newskadaba.com ಹೊಳೆನರಸೀಪುರ, ಮಾ. 07. ಕುಡಿದ ಅಮಲಿನಲ್ಲಿ ಜನರಿಗೆ ತೊಂದರೆ ಕೊಡುತ್ತಿದ್ದ ಮೂವರು ರೌಡಿಶೀಟರ್‌ಗಳಿಗೆ ಸಾರ್ವಜನಿಕರು ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಥಳಿತಕ್ಕೊಳಗಾದವರನ್ನು ಎರಡು ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಯಾಚೇನಹಳ್ಳಿ ಚೇತು, ಉಲಿವಾಲ ಚೇತು ಮತ್ತು ನೈಂಟಿ ವಿಶ್ವ ಎಂದು ಗುರುತಿಸಲಾಗಿದೆ. ಇವರು ನಾಲ್ಕು ದಿನದ ಹಿಂದೆ ತಾಲೂಕಿನ ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಡಿ ಗುಬ್ಬಿಯ ಬಾರ್‌ ವೊಂದರಲ್ಲಿ ಕುಡಿದು ಬಿಲ್ ಕೊಡದೆ ಬಾರ್ ಕ್ಯಾಷಿಯರ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಲ್ಲದೇ ಕುಡಿದ […]

ಕುಡಿದ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆ ➤ ಮೂವರು ರೌಡಿಶೀಟರ್ ಗಳಿಗೆ ಹಿಗ್ಗಾಮುಗ್ಗ ಥಳಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೀಟ ಕಚ್ಚಿ 8ನೇ ತರಗತಿ ವಿದ್ಯಾರ್ಥಿನಿ ದಾರುಣ ಮೃತ್ಯು

(ನ್ಯೂಸ್ ಕಡಬ)newskadaba.com ಪತ್ತನಂತಿಟ್ಟ, ಮಾ.07. ವಿಷಪೂರಿತ ಕೀಟ ಕಚ್ಚಿ ಪುಟ್ಟ ಬಾಲಕಿ ಮೃತ ಪಟ್ಟಿರುವ ದಾರುಣ ಘಟನೆ ಕೇರಳದ ಪತ್ತನಂತಿಟ್ಟದ ತಿರುವಲ್ಲಾದಲ್ಲಿ ನಡೆದಿದೆ. ಪೆರಿಂಗಾರ ಕೊಚಾರಿಮುಕ್ಕಂನ ಪನಾರ ಮನೆ ನಿವಾಸಿ ಅನೀಶ್ ಮತ್ತು ಶಾಂತಿ ಕೃಷ್ಣನ್ ದಂಪತಿಯ ಪುತ್ರಿ ಅಂಜಿತಾ ಅನೀಶ್ ಮೃತಪಟ್ಟ ಬಾಲಕಿ. ಮಾ.5ರಂದು ಸಂಜೆ ಮನೆಯ ಸಮೀಪದ ಹೊಲದಲ್ಲಿ ಸ್ನೇಹಿತೆಯರೊಂದಿಗೆ ಆಟವಾಡುತ್ತಿದ್ದಾಗ ಕಿವಿಯ ಕೆಳಗೆ ಕೀಟವೊಂದು ಕಚ್ಚಿದೆ. ನೊಣದಂತಹ ಜೀವಿ ಕಚ್ಚಿರುವುದಾಗಿ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ. ಕೀಟ ಕಚ್ಚಿದ 30 ನಿಮಿಷದಲ್ಲಿ ಬಾಲಕಿಯ ಇಡೀ

ಕೀಟ ಕಚ್ಚಿ 8ನೇ ತರಗತಿ ವಿದ್ಯಾರ್ಥಿನಿ ದಾರುಣ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸಂಪಾಜೆ, ಮಾ. 07. ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಂಪಾಜೆ ವಲಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ.   ಬಂಧಿತನನ್ನು ಮುಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ. ಈತ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದು, ಆತನಿಂದ ವಾಹನ ಹಾಗೂ 12 ಹೆಬ್ಬಲಸು ಮರದ ತುಂಡುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪೂವಯ್ಯ.ಎ.ಟಿ, ಸಹಾಯಕ

ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯ ಸೇವಿಸಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ !

(ನ್ಯೂಸ್ ಕಡಬ)newskadaba.com ತುಮಕೂರು, ಮಾ.07. ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದರು.

ಮದ್ಯ ಸೇವಿಸಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಮಹಿಳೆ ಮೃತದೇಹ ಪತ್ತೆ…!      ➤  ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಮಾ.07. 3 ದಿನದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಜಗದೀಶ್ ಆಚಾರ್ ಅವರ ಪತ್ನಿ ನೇತ್ರಾ ಅವರ ಶವ ಸೋಮವಾರ ಕಾಫಿ ತೋಟವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇತ್ತೀಚೆಗೆ ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಜಗದೀಶ್ ಆಚಾರ್ ಚಿಕಿತ್ಸೆ ಫಲಕಾರಿಯಾಗದೇ ಮಾ.3ರಂದು ಕೊನೆಯುಸಿರೆಳೆದಿದ್ದರು. ಈ ಬಗ್ಗೆ ಗೋಣಿಬೀಡು ಠಾಣೆಗೆ ದೂರು ನೀಡಿದ್ದ ಜಗದೀಶ್ ಆಚಾರ್ ತಾಯಿ ಯಶೋಧಮ್ಮ, ನನ್ನ ಮಗನ ಸಾವಿಗೆ ಆತನ ಹೆಂಡತಿ ನೇತ್ರಾ ಮತ್ತು ಆಕೆಯ ಪ್ರಿಯಕರ ಧನಂಜಯ ಅವರ ನಡುವಿನ

ನಾಪತ್ತೆಯಾಗಿದ್ದ ಮಹಿಳೆ ಮೃತದೇಹ ಪತ್ತೆ…!      ➤  ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ತುಳಿದು 3 ಕಾಡಾನೆಗಳು ಮೃತ್ಯು

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 07.  ವಿದ್ಯುತ್ ಬೇಲಿ ದಾಟುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಮೂರು ಆನೆಗಳು ಮೃತಪಟ್ಟ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮಾರಂಡಹಳ್ಳಿ ಎಂಬಲ್ಲಿ ನಡೆದಿದೆ. ಘಟನೆಯ ಬಳಿಕ ಕಾನೂನುಬಾಹಿರ ಬೇಲಿ ಬಳಸಿದಕ್ಕಾಗಿ ಮುರುಗೇಶನ್ ಎಂಬಾತನನ್ನು ಬಂಧಿಸಲಾಗಿದ್ದು, ಕಾಡುಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಲು ಬೇಲಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ವಿದ್ಯುತ್ ತಂತಿ ತುಳಿದು 3 ಕಾಡಾನೆಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೇರಿಕಾದಲ್ಲಿ ಸಣ್ಣ ವಿಮಾನ ಪತನ ➤ ಭಾರತೀಯ ಮೂಲದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಮಾ. 07. ನ್ಯೂಯಾರ್ಕ್ ಪ್ರದೇಶದಲ್ಲಿ ಸಣ್ಣ ವಿಮಾನ ಅಪಘಾತ ಸಂಭವಿಸಿ ಭಾರತೀಯ ಮೂಲದ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗಳು ಹಾಗೂ ಪೈಲಟ್ ಗಾಯಗೊಂಡ ಘಟನೆ ವರದಿಯಾಗಿದೆ. ಮೃತ ಮಹಿಳೆಯನ್ನು ರೋಮಾ ಗುಪ್ತಾ ಎಂದು ಗುರುತಿಸಲಾಗಿದೆ. ಇವರು ಮಗಳು ರೀವಾ ಗುಪ್ತಾ ಜೊತೆ ಸಣ್ಣ ಪ್ರಯಾಣಿಸುತ್ತಿದ್ದ ನಾಲ್ಕು ಆಸನಗಳ ಸಿಂಗಲ್-ಇಂಜಿನ್ ಪೈಪರ್ ಚೆರೋಕೀ ವಿಮಾನವು ಲಾಂಗ್ ಐಲ್ಯಾಂಡ್‌ನ ರಿಪಬ್ಲಿಕ್ ಏರ್‌ಪೋರ್ಟ್‌ಗೆ ಹಿಂತಿರುಗುತ್ತಿದ್ದ ವೇಳೆ ಬೆಂಕಿ ಹೊತ್ತಿಕೊಂಡಿದ್ದು ರೋಮಾ ಮೃತಪಟ್ಟಿದ್ದಾರೆ. ಸ್ಥಳೀಯ ವರದಿಯ ಪ್ರಕಾರ

ಅಮೇರಿಕಾದಲ್ಲಿ ಸಣ್ಣ ವಿಮಾನ ಪತನ ➤ ಭಾರತೀಯ ಮೂಲದ ಮಹಿಳೆ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿಯಲ್ಲಿ ಬಂಧನ

(ನ್ಯೂಸ್ ಕಡಬ) newskadaba.con ನೆಲ್ಯಾಡಿ, ಮಾ. 07. ಬೆಳ್ತಂಗಡಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ 2 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ನೆಲ್ಯಾಡಿ ಬಸ್‌ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ವಾಲಾಡಿ ನಿವಾಸಿ ಸೋನು ಜೋಯಿ(32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸಿ.ಸಿ 445/2016 ಕಲಂ: 143,147,148, 504,506,447,427 ಜೊತೆಗೆ 149 IPC ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ ವಾರಂಟ್

2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿಯಲ್ಲಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. 32 ವರ್ಷದ ಫಿಸಿಯೋಥೆರಪಿಸ್ಟ್ ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣ ಸಂಬಂಧ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೇಸ್ತ್ರಿ ವೀರ ಆಂಜನೇಯುಲು ಅಲಿಯಾಸ್ ಪುಲಿ (38), ಅನಂತಪುರದ ಗೋವರ್ಧನ್ ಅಲಿಯಾಸ್ ಡಿಜೆ (23) ಮತ್ತು ಬುಡ್ಡಪ್ಪ ಅಲಿಯಾಸ್ ಭಾಸ್ಕರ್ (46) ಆರೋಪಿಗಳು. ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಪೆನುಕೊಂಡದ ಶ್ರೀಧರ್ ಎಂಬಾತನನ್ನು ಕೊಲೆ ಮಾಡಿದ ಆರೋಪ ಇವರ ಮೇಲಿದೆ.  

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 07. ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೌಡಿಚ್ಚಾರಿನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಮೃತರನ್ನು ಮಾಡ್ನೂರು ಗ್ರಾಮದ ಕುಂಞಿಕುಮೇರು ನಿವಾಸಿ ನಾರಾಯಣ ನಾಯ್ಕ್ (49) ಎಂದು ಗುರುತಿಸಲಾಗಿದೆ. ಇವರು ಸಹೋದರ ಬಾಲಕೃಷ್ಣ ನಾಯ್ಕ್ ಎಂಬವರ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬಂದ ಬೈಕ್ ನಾರಾಯಣ ನಾಯ್ಕ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾರಾಯಣ ನಾಯ್ಕ ಅವರ ತಲೆಗೆ

ಪುತ್ತೂರು: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top