ಕ್ರೈಮ್ ನ್ಯೂಸ್

ಯೂಟ್ಯೂಬ್ ವಿಡಿಯೋ ನೋಡಿ ಹೆರಿಗೆ ಮಾಡಿ ಶಿಶುವನ್ನು ಕೊಂದ ಅಪ್ರಾಪ್ತೆ..!

(ನ್ಯೂಸ್ ಕಡಬ) newskadaba.com ನಾಗ್ಪುರ, ಮಾ. 06. ಶಂಕಿತ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಯುವತಿಯೋರ್ವಳು ಯೂಟ್ಯೂಬ್‍ ನಲ್ಲಿ ವಿಡಿಯೊ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಂಡು, ನವಜಾತ ಶಿಶುವನ್ನು ಕೊಂದಿರುವ ಘಟನೆ ವರದಿಯಾಗಿದೆ.   ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನಿಂದ ಈ ಯುವತಿಯು ಲೈಂಗಿಕ ಶೋಷಣೆಗೆ ಒಳಗಾಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ತನಗೆ ಆರೋಗ್ಯ ಸಮಸ್ಯೆ ಇದೆ ಎಂದು ತಾಯಿಯ ಜೊತೆ ಹೇಳಿ, ಯುವತಿಯು ತಾನು ಗರ್ಭಿಣಿಯಾದ ವಿಚಾರವನ್ನು ಮುಚ್ಚಿಟ್ಟಿದ್ದಳು ಎಂದು ಹೇಳಲಾಗಿದೆ. ಅಂಬಝರಿ ಪ್ರದೇಶದ […]

ಯೂಟ್ಯೂಬ್ ವಿಡಿಯೋ ನೋಡಿ ಹೆರಿಗೆ ಮಾಡಿ ಶಿಶುವನ್ನು ಕೊಂದ ಅಪ್ರಾಪ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಲಿಂಡರ್ ಸ್ಫೋಟ..!     ➤  ಛಿದ್ರವಾಗಿ ಹೋಯ್ತು ಬಾಲಕನ ದೇಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಸಿಲಿಂಡರ್ ಸ್ಫೋಟಗೊಂಡು 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ. ಆರನೇ ತರಗತಿಯಲ್ಲಿ ಓದುತಿದ್ದ ಮಹೇಶ್(13) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ಸಿಲಿಂಡರ್ ಫಿಲ್ಲಿಂಗ್ ಅಂಗಡಿಯಲ್ಲಿ ಘಟನೆ ನಡೆದಿದ್ದು, ಅಂಗಡಿ ಪಕ್ಕದಲ್ಲಿ ಬಾಲಕ ಮಹೇಶ್ ನಿಂತಿದ್ದ. ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.  

ಸಿಲಿಂಡರ್ ಸ್ಫೋಟ..!     ➤  ಛಿದ್ರವಾಗಿ ಹೋಯ್ತು ಬಾಲಕನ ದೇಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಎನ್ಐಎ ತಂಡದ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸಿಎ ಬ್ಯಾಂಕ್ ಸಿಇಒ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 06. ಎನ್ಐಎ ತಂಡ ಸಂಚರಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಜಿಲ್ಲೆಯ ಡಿ.ಆರ್ ಗೆ ಸೇರಿದ ಪೊಲೀಸ್ ವಾಹನ ಹಾಗೂ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ

ಪುತ್ತೂರು: ಎನ್ಐಎ ತಂಡದ ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸಿಎ ಬ್ಯಾಂಕ್ ಸಿಇಒ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಬೇರ್ಪಟ್ಟ ಬೋಗಿಗಳು!    ➤  ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.06. ಮಂಗಳೂರಿನಿಂದ ಪಾಲಕ್ಕಾಡ್‌ ಕಡೆ ಚಲಿಸುತ್ತಿದ್ದ ಗೂಡ್ಸ್ ರೈಲಿನ ಬೋಗಿಗಳು ಬೇರ್ಪಟ್ಟಿದ್ದು, ಭಾರೀ ಅನಾಹುತವೊಂದು ತಪ್ಪಿದೆ ಎಂದು ವರದಿ ತಿಳಿಸಿದೆ. ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಚಂದೇರಾದಲ್ಲಿ ಸಾಗುತ್ತಿದ್ದ ಗೂಡ್ಸ್ ರೈಲಿನ ಬೋಗಿಗಳು ದಿಢೀರನೆ ಬೇರ್ಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಚಂದೇರಾ ರೈಲ್ವೇ ನಿಲ್ದಾಣ ಸಮೀಪಿಸುತ್ತಿದ್ದಂತೆ ಏಳನೇ ಬೋಗಿಯು ಸಂಪರ್ಕ ಕಳೆದುಕೊಂಡಿದೆ. ರೈಲನ್ನು ಹಿಂದಕ್ಕೆ ಚಲಾಯಿಸುವ ಮೂಲಕ ಒಂದೂವರೆ ಗಂಟೆಗಳ ಸುದೀರ್ಘ ಪ್ರಯತ್ನದ ನಂತರ ಬೋಗಿಗಳನ್ನು ಸರಿಪಡಿಸಲಾಯಿತು.    

ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಬೇರ್ಪಟ್ಟ ಬೋಗಿಗಳು!    ➤  ತಪ್ಪಿದ ಭಾರೀ ಅನಾಹುತ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.06. ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಾತೂರ್‌ನಲ್ಲಿ ನಡೆದಿದೆ. ಎಲ್ಲಾ ಆರು ಜನರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಟೆಂಪೋ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಟೆಂಪೋ ಕೂಡ ಪಲ್ಟಿಯಾಗಿದ್ದು, ಒಂಬತ್ತು ಕುರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾನ್ ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ವಂಚನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 06. ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಸುಧಾಕರ ಕಾಂಚನ್ ಎಂಬವರು ಹೆಚ್.ಡಿ.ಎಫ್.ಸಿ ಬ್ಯಾಂಕ್ ನ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಇವರಿಗೆ ಪಾನ್‌ಕಾರ್ಡ್‌ ಅಪ್ಡೇಟ್ ಮಾಡಲು ಮೆಸೇಜ್ ಕಳುಹಿಸಿದ್ದು, ಈ ಸಂದೇಶ ಬ್ಯಾಂಕ್‌ನಿಂದ ಕಳುಹಿಸಿರುವುದಾಗಿದೆ ಎಂದು ನಂಬಿದ ಸುಧಾಕರ್ ಅವರು, ಸದ್ರಿ ಲಿಂಕ್‌ನಲ್ಲಿ ವಿವರವನ್ನು ಅಪೌಡೇಟ್‌ ಮಾಡಿದ್ದಾರೆ. ಬಳಿಕ

ಪಾನ್ ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ವಂಚನೆ ➤ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ !      ➤ ಆಟೋ ಚಾಲಕ ಪುರುಷೋತ್ತಮರವರಿಗೆ ಹೊಸ ರಿಕ್ಷಾ, 5 ಲಕ್ಷ ಸಹಾಯಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 06. ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ಹಾಗೂ 5 ಲಕ್ಷ ರೂ.ನೆರವನ್ನು ನೀಡಿರುವ ಕುರಿತು ಎಂದು ವರದಿಯಾಗಿದೆ. ಪುರುಷೋತ್ತಮ ಪೂಜಾರಿ ಅವರ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೊಸ ರಿಕ್ಷಾ ಹಾಗೂ 5 ಲಕ್ಷ ರೂ. ಗಳ ಚೆಕ್ ಹಸ್ತಾಂತರಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಮಂಗಳೂರಿನ ಪಂಪ್ ವೆಲ್ ಬಳಿ ಆಟೋವೊಂದರಲ್ಲಿ ಕುಕ್ಕರ್

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ !      ➤ ಆಟೋ ಚಾಲಕ ಪುರುಷೋತ್ತಮರವರಿಗೆ ಹೊಸ ರಿಕ್ಷಾ, 5 ಲಕ್ಷ ಸಹಾಯಧನ ಹಸ್ತಾಂತರ Read More »

ಕರಾವಳಿ, ಕ್ರೈಮ್ ನ್ಯೂಸ್

ಉಗ್ರರಿಗೆ ಹಣಕಾಸಿನ ನೆರವು ಆರೋಪ ➤ ದ.ಕ. ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 06. ಬಿಹಾರದ ಪಾಟ್ನಾದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್ ಐ ಎ ಸಂಜೆ ಬಂಟ್ವಾಳ, ಪುತ್ತೂರಿನಲ್ಲಿ ಹಲವು ಮನೆಗಳಿಗೆ ದಾಳಿ ನಡೆಸಿದೆ. ಪಾಟ್ನಾ ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ

ಉಗ್ರರಿಗೆ ಹಣಕಾಸಿನ ನೆರವು ಆರೋಪ ➤ ದ.ಕ. ಜಿಲ್ಲೆಯ ವಿವಿಧೆಡೆ ಎನ್ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತ ! ➤ ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.06. ಪಾಣೆಮಂಗಳೂರಿನ ಗುಡ್ಡೆ ಅಂಗಡಿಯ ರೆಫ್ರಿಜರೇಟರ್ ದುರಸ್ತಿಯ ಮಳಿಗೆಯೊಂದರಲ್ಲಿ ರವಿವಾರ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಗುಡ್ಡೆ ಅಂಗಡಿಯ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಸೇರಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತ ! ➤ ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 05. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ತೌಫೀಲ್​ ಎಂದು ಗುರುತಿಸಲಾಗಿದೆ. ಎನ್‌ಐಎ ಅಧಿಕಾರಿಗಳು ಮಾ. 04ರಂದು ರಾತ್ರಿ 9.30ರ ವೇಳೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಎಂಬಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ಎನ್‌ಐಎ ಅಧಿಕಾರಿಗಳು ಆರೋಪಿಗಳ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top