ಕ್ರೈಮ್ ನ್ಯೂಸ್

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ!

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.03. ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದ ಹಿಂದು ಮತ್ತು ಮುಸ್ಲಿಂ  ವ್ಯಕ್ತಿಗಳಿಬ್ಬರನ್ನು ಹಿಂದು ಸಂಘಟನೆ ಕಾರ್ಯಕರ್ತರು ವಿಚಾರಿಸಿದ  ಘಟನೆ ಕೃಷ್ಣನಗರದಲ್ಲಿ  ನಡೆದಿದ್ದು ಮಾಹಿತಿ ತಿಳಿದು ಪೊಲೀಸರು ಆಗಮಿಸಿ ಅಹಿತಕರ ಘಟನೆಗಳಾಗದಂತೆ  ನೋಡಿಕೊಂಡಿದ್ದಾರೆ. ಕೆರೆಮೂಲೆ ನಿವಾಸಿ ಮುಸ್ಲಿಂ ಮತ್ತು ಕೆಮ್ಮಾಯಿಯ ಹಿಂದು ಓರ್ವರು ಸೇರಿಕೊಂಡು ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲೇಜಿನಲ್ಲಿ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಹೈದರಾಬಾದ್‌  ಮಾ.02.  ಕಾಲೇಜಿನಲ್ಲಿ ಕಿರುಕುಳ ತಾಳಲಾಗದೆ ʻಅಮ್ಮ ಐ ಲವ್​ ಯೂʼ –ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್​ನ ಶ್ರೀ ಚೈತನ್ಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ, ವಿದ್ಯಾರ್ಥಿಯೊಬ್ಬನಿಗೆ ಉಪನ್ಯಾಸಕರ ಪದೇ ಪದೇ ನೀನು ಫೈಲ್​ ಆಗಿದ್ದೀಯಾ ಅಂತ ಹೀಯಾಳಿಸುತ್ತಿದ್ದರು. ಅಷ್ಟೆ ಅಲ್ಲದೇ ಆತನಿಗೆ ಚಿತ್ರಹಿಂಸೆ ನೀಡುತ್ತಾ ಆತನಿಗೆ ಹೆಚ್ಚು ಒತ್ತಡ ಹಾಕುತ್ತಿದ್ದರು. ಇದಕ್ಕೆ ಬೇಸತ್ತ ಯುವಕ ಅಮ್ಮ ಐ ಲವ್​ ಯೂ -ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆ ಶರಣಾಗಿದ್ದಾನೆ. ಮೃತಪಟ್ಟ

ಕಾಲೇಜಿನಲ್ಲಿ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್

➤ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಕೊಟ್ಟು ಕೊಂದ ಪಾಪಿ ಪತಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.02.  ಹೆಂಡತಿ ಹಾಗೂ ಇಬ್ಬರು ಮಕ್ಕಳಿಗೆ ಊಟದಲ್ಲಿ ವಿಷ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಕೋಣನಕುಂಟೆಯಲ್ಲಿ ನಡೆದಿದೆ.  ವಿಜಯ (28) ನಿಷಾ(7)  ದೀಕ್ಷಾ(5) ಮೃತ ಪಟ್ಟವರು . ಪತಿ ನಾಗೇಂದ್ರ  ವಿಷ ಬೆರೆಸಿದ ಊಟವನ್ನು ನೀಡಿದ್ದು, ಹೆಂಡತಿ ಹಾಗೂ ಮಕ್ಕಳು ಮನೆಯಲ್ಲಿಯೇ ನರಳಾಡಿ ಸಾವನ್ನಪ್ಪಿದ್ದಾರೆ.  ಬಳಿಕ ನಾಗೇಂದ್ರ  ಆತ್ಮಹತ್ಯೆಗೆ ಯತ್ನಿಸಿದ್ದಾನೆ.   ಇನ್ನು ಪತಿ ನಾಗೇಶ್ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

➤ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಕೊಟ್ಟು ಕೊಂದ ಪಾಪಿ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ತಾಯಿ ನಿದ್ದೆ ಮಾಡಿದ್ದಾರೆಂದು ತಿಳಿದು 11 ವರ್ಷದ ಬಾಲಕನೊಬ್ಬ ಆಕೆಯ ಶವದೊಂದಿಗೆ ಎರಡು ದಿನ ಕಳೆದ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಆರ್‌.ಟಿ. ನಗರದಲ್ಲಿ ನಡೆದಿದೆ. ಅಣ್ಣಮ್ಮ ( 44) ಅವರು ಮಧುಮೇಹ ಮತ್ತು ರಕ್ತದೊತ್ತಡ ಕಡಿಮೆಯಾಗಿ ಮನೆಯಲ್ಲಿ ಮಲಗಿದ್ದಾಗಲೇ ಸಾವನ್ನಪ್ಪಿದ್ದರು. ಅವರ 11 ವರ್ಷದ ಪುತ್ರ ತಾಯಿ ತನ್ನೊಂದಿಗೆ ಕೋಪದಿಂದ ಮಾತನಾಡದೇ ಮಲಗಿದ್ದಾರೆ ಎಂದೇ ಭಾವಿಸಿದ್ದ ಎನ್ನಲಾಗಿದೆ.  

ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ನಿಕುಂಜ್ ಬಾಬಿಲ್ ಎಂಬಾತನನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.  

ಬೈಕ್’ನಲ್ಲಿ 6.5 ಕೆ.ಜಿ ಚಿನ್ನ ಸಾಗಿಸುತ್ತಿದ್ದಾಗ ಸಿಕ್ಕಿ ಬಿದ್ದ ವ್ಯಕ್ತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ಸಿಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು..!    

(ನ್ಯೂಸ್ ಕಡಬ)newskadaba.com ಉಡುಪಿ, ಮಾ.02. ಕಾರ್ಕಳ ತಾಲೂಕಿನ ಹಿರ್ಗಾನದ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ಬೈಕ್ ಸವಾರ ಹಿರ್ಗಾನ ಗ್ರಾಮದ ಕಾನಂಗಿ ಹಂಕರಬೆಟ್ಟು ನಿವಾಸಿ ಮನೋಹರ ಪೂಜಾರಿ(43ವ) ಎಂದು ಗುರುತಿಸಲಾಗಿದೆ.

ಬಸ್ಸಿಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು..!     Read More »

ಕರಾವಳಿ, ಕ್ರೈಮ್ ನ್ಯೂಸ್

ದೆಹಲಿ ನಾಯಿ ಮೇಲೆ ಅತ್ಯಾಚಾರ ➤ ಪಾಪಿ ವ್ಯಕ್ತಿಯ ಬಂಧನ!

(ನ್ಯೂಸ್ ಕಡಬ) newskadaba.com. ನವದೆಹಲಿ , ಮಾ.2.  ದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ . ಪೊಲೀಸರು ದೂರು ಸ್ವೀಕರಿಸಿದ ನಂತರ ಐಪಿಸಿ ಮತ್ತು ಪ್ರಾಣಿ ಹಿಂಸೆ ಕಾಯ್ದೆಯ ಸೆಕ್ಷನ್ 377 ಅಡಿಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ. ಈ ಘೋರ ಕೃತ್ಯವನ್ನು ಪ್ರಾಣಿಗಳಿಗೆ ಆಹಾರ ನೀಡುವವರೊಬ್ಬರ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆರೋಪಿಯ ಪ್ರಾಣಿ ಹಿಂಸೆಯ ಕೃತ್ಯವನ್ನು ಜನರು ಖಂಡಿಸಿದ್ದಾರೆ.

ದೆಹಲಿ ನಾಯಿ ಮೇಲೆ ಅತ್ಯಾಚಾರ ➤ ಪಾಪಿ ವ್ಯಕ್ತಿಯ ಬಂಧನ! Read More »

ಕ್ರೈಮ್ ನ್ಯೂಸ್

ಕಾಸರಗೋಡು: ರೈಲು ಬಡಿದು ಲ್ಯಾಬ್ ಟೆಕ್ನಿಷಿಯನ್ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.02. ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಮೃತಪಟ್ಟ ಘಟನೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಉಪ್ಪಳ ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತಪಟ್ಟವರು.  

ಕಾಸರಗೋಡು: ರೈಲು ಬಡಿದು ಲ್ಯಾಬ್ ಟೆಕ್ನಿಷಿಯನ್ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ಇತ್ತೀಚಿಗೆ ನಿವೃತ್ತ ಮಹಿಳಾ ಪೊಲೀಸ್‌ ಇನ್ಸ್ ಪೆಕ್ಟರ್‌ವೊಬ್ಬರಿಂದ ಚಿನ್ನದ ಸರ ದೋಚಿದ್ದ ಚಾಲಾಕಿ ಖದೀಮನೊಬ್ಬ ಚಂದ್ರಾಲೇಔಟ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಉಲ್ಲಾಳ ನಿವಾಸಿ ದರ್ಶನ್‌ ಬಂಧಿತನಾಗಿದ್ದು, ಆರೋಪಿಯಿಂದ 3 ಲಕ್ಷ ರು ಮೌಲ್ಯದ 76.4 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮೂಡಲಪಾಳ್ಯ ಮುಖ್ಯರಸ್ತೆಯ ಕೆನರಾ ಬ್ಯಾಂಕ್‌ ಕಾಲೋನಿ ನಿವಾಸಿ ನಿವೃತ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ ಗೀತಾರೆಡ್ಡಿ ಅವರು ಮನೆ ಮುಂದೆ ಕಸ ಗುಡಿಸುವಾಗ ಸರ ಕಳವು ಮಾಡಿ ಕಿಡಿಗೇಡಿ ಪರಾರಿಯಾಗಿದ್ದ.

ಬೆಂಗಳೂರು: ನಿವೃತ್ತ ಮಹಿಳಾ ಸರ ದೋಚಿದ್ದ ಖದೀಮನ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top