ಕ್ರೈಮ್ ನ್ಯೂಸ್

ಅಕ್ರಮ ನರಿ ಸಾಕಾಣೆ       ➤ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ನರಿಯನ್ನ ಅಕ್ರಮವಾಗಿ ಸಾಕಿದ್ದ ಆರೋಪಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಲಕ್ಷ್ಮಿಕಾಂತ್ (42) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಲಕ್ಷ್ಮಿಕಾಂತ್ ಏಳು ತಿಂಗಳ ಹಿಂದೆ ನರಿಯನ್ನು ಅರಣ್ಯದಿಂದ ಹಿಡಿದು ತಂದಿದ್ದ. ಬಳಿಕ ತನ್ನ ಕೋಳಿ ಫಾರಂನ ಪಂಜರದಲ್ಲಿ ನರಿಯನ್ನ ಸಾಕಿಕೊಂಡಿದ್ದ.  

ಅಕ್ರಮ ನರಿ ಸಾಕಾಣೆ       ➤ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು    

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ಎಂ.ಜಿ ರಸ್ತೆಯ ಹಳೆ ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಮುಹಮ್ಮದ್ ಫಾಸಿಲ್ ತಬ್ಸೀರ್(23) ಎಂದು ಗುರುತಿಸಲಾಗಿದೆ.  

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು     Read More »

ಕ್ರೈಮ್ ನ್ಯೂಸ್

➤ ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com. ಚಿಕ್ಕಮಂಗಳೂರು. ಫೆ.28.  ಮುಳ್ಳುಹಂದಿ ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ. ಗೊವಿಂದರಾಜು (30) ವಿಜಯ್ ಕುಮಾರ್(29) ಮೃತಪಟ್ಟವರು. ಮೃತರನ್ನು ತಮಿಳುನಾಡು ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಒಟ್ಟು ನಾಲ್ಕು  ಮಂದಿ ಮುಳ್ಳು ಹಂದಿ ಹಿಡಿಯಲು ಹೋಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದು, ಇನ್ನಿಬ್ಬರು ಸಾವನ್ನಪ್ಪಿದ್ದಾರೆ.

➤ ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಯುವಕರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.28. ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ದೇಶದಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಅಮಾಯಕರನ್ನು ನಂಬಿಸಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ನೈಜೀರಿಯಾ ಪ್ರಜೆಯನ್ನು ಈಶಾನ್ಯ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿ ನೈಜೀರಿಯಾದ ನೋಕೊಚಾ ಕಾಸ್ಮೀರ್‌ ಇಕೆಂಬಾ ಎಂಬಾತನಿಂದ ಸಿಮ್‌ ಕಾರ್ಡ್‌ಗಳು, ಆರು ಮೊಬೈಲ್‌ ಫೋನ್‌ಗಳು, ಒಂದು ಲ್ಯಾಪ್‌ಟಾಪ್‌, ಎರಡು ಡೆಬಿಟ್‌ ಕಾರ್ಡ್‌ ಹಾಗೂ ಪಾಸ್‌ಪೋರ್ಟ್‌ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.  

ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ           

(ನ್ಯೂಸ್ ಕಡಬ)newskadaba.com ಬೀದರ್, ಫೆ.28. ಬ್ರಿಮ್ಸ್ ಹಾಸ್ಟೆಲ್ ಮೇಲಿಂದ ಹಾರಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶ್ರೀರಾಮ್(22) ಎಂದು ಗುರುತಿಸಲಾಗಿದೆ. ಎಂಬಿಬಿಎಸ್‌ ಪ್ರಾಕ್ಟಿಕಲ್ ಎಕ್ಸಾಂ ಭಯದಲ್ಲಿ ಶ್ರೀರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಹೇಳಲಾಗುತ್ತಿದೆ. ಆದರೆ, ಮತ್ತೊಂದೆಡೆ ತಂದೆ ಸಾವಿನಿಂದ ಶ್ರೀರಾಮ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು ಎಂದು ಹೇಳಲಾಗುತ್ತಿದೆ. ಶ್ರೀರಾಮ್ ಸಾವಿಗೆ ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.  

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಇಲ್ಲೊಬ್ಬ ಪಾಪಿ ಮಗ ತಂದೆ ಹತ್ಯೆಗೆ ಸುಪಾರಿ ಕೊಟ್ಟಿದ್ದಾನೆ. ಅದು ಬರೋಬ್ಬರಿ ಒಂದು ಕೋಟಿ ರೂಪಾಯಿಗೆ ಎಂದು ವರದಿ ತಿಳಿಸಿದೆ. ತಂದೆಯನ್ನ ಕೊಚ್ಚಿ ಕೊಚ್ಚಿ ಕೊಂದು ಹಾಕ್ತಿದ್ರೆ ಮಗ ನೋಡ್ತಾ ನಿಂತಿದ್ದ. ಉಳಿಸಿಕೊಳ್ಳೋ ಹೈಡ್ರಾಮಾ ಆಡಿದ್ದ. ಆದರೆ ಪೊಲೀಸರ ತನಿಖೆ ಮುಂದೆ ಎಲ್ಲಾ ಬಟಾಬಯಲಾಗಿದೆ.  

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಶಾಲಾ-ಕಾಲೇಜುಗಳನ್ನು ಗುರಿಯಾಗಿಸಿ ಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಕಳ್ಳರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ತಮಿಳುನಾಡಿನ ಸೇಲಂ ಜಿಲ್ಲೆಯ ನಿವಾಸಿಗಳಾದ ಅಣ್ಣಾ ದೊರೈ (42), ವೀರಮಲೈ ಅಲಿಯಾಸ್ ಕುಮಾರ್ (40) ಮತ್ತು ಬಾಬು (34) ಎಂದು ಗುರುತಿಸಲಾಗಿದೆ ಎನ್ನಲಾಗಿದೆ. ಫೆಬ್ರವರಿ 10 ರಂದು ನಾಗದೇವನಹಳ್ಳಿಯ ವಿಎಸ್‌ಎಸ್ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ದುಷ್ಕರ್ಮಿಗಳು ರೂ. 5 ಲಕ್ಷ ಮತ್ತು ಕೆಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ಕದ್ದೊಯ್ದಿದ್ದರು

ಶಾಲಾ-ಕಾಲೇಜು ದೋಚುತ್ತಿದ್ದ ಗ್ಯಾಂಗ್ ಪೊಲೀಸ್ ಬಲೆಗೆ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿಯ ಮನೆಯಲ್ಲಿ ನಡೆದಿದೆ. ಲಿಯಾಖತ್ ಅಲಿಖಾನ್ (44) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಜಿಮ್ ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಲಿಯಾಖತ್ ಅಲಿಖಾನ್ ಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಬೆಳಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಕತ್ ಶವವಾಗಿ ಪತ್ತೆ ಆಗಿದ್ದಾನೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸ ಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ. ಗಾರೆ ಕೆಲಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಜ್ಯೋತಿ ಹೊಸಕೋಟೆ ತಾಲೂಕಿನ ಕನಕ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ಅವರು ಭಾನುವಾರ ಮಧ್ಯಾಹ್ನ ಶೌಚಾಲಯದಲ್ಲಿ ನೀರು ಕಾಯಿಸಲು ಬಕೆಟ್ ನಲ್ಲಿ ಹೀಟರ್ ಹಾಕಿದ್ದಾಗ ಶೌಚಾಲಯಕ್ಕೆ ಬಾಲಕ

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top