ಕ್ರೈಮ್ ನ್ಯೂಸ್

40 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು..!

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಶ್ರೀಗಂಧ ಹಾಗೂ ವಾಹನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 40 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸಕಲೇಶಪುರ ತಾಲೂಕಿನ ಕೊಡಿಗೆ ಗ್ರಾಮದ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕಡಬ ಠಾಣಾ ಹೆಚ್.ಸಿ ಗಳಾದ ರಾಜು ನಾಯಕ್, ಭವಿತ್ ರಾಜ್ ಮತ್ತು ಪಿ.ಸಿ ಸಿರಾಜುದ್ದೀನ್ ಎಂಬವರು ಮೂಡಿಗೆರೆ ತಾಲೂಕಿನ ಬಾಳೂರು ಎಂಬಲ್ಲಿ ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು […]

40 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಕಡಬ ಪೊಲೀಸರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ ದೆಹಲಿ ಪೊಲೀಸರು ಬಂಧಿಸಿದ್ದಾರೆ  ಎನ್ನಲಾಗಿದೆ. ಸಮರ್ಕ್ ಮಲಿಕ್ (20) ಬಂಧಿತ ಚಾಲಕ ಎಂದು ಗುರುತಿಸಲಾಗಿದೆ. ಈತ ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ. ಈತ ಚಲಾಯಿಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ .  

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮಂಗಳೂರು .  ಫೆ.28. ಮಂಗಳೂರು  ಬಂಟರ  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್ ಎಸ್ಟೇಟ್  ಉದ್ಯಮಿ ಹೃದಯಾಘಾತದಿಂದ ಮೃತಪಟ್ಟ  ಘಟನೆ ನಡೆದಿದೆ. ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ(50) ಮೃತಪಟ್ಟವರು.  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಇವರು ಪಾಲ್ಗೊಂಡಿದ್ದರು. ಸ್ಪರ್ಧೆಯ ಬಳಿಕ ಇವರಿಗೆ ಎದೆನೋವು ಕಾಣಿಸಿಕೊಂಡಿತು. ಅವರು ಅಸ್ಪತ್ರೆಗೆ  ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ದೆಹಲಿ .  ಫೆ.28. ಮಗುವಿನ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿತ್ತು, ಸಮರ್ಕ್ ಮಲಿಕ್ (20) ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ  ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ

➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು..

(ನ್ಯೂಸ್ ಕಡಬ) newskadaba.com. ತೆಲಂಗಾಣ .  ಫೆ.28. ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿರುವಾಗ ಕುಸಿದುಬಿದ್ದು, 19 ವರ್ಷದ ಯುವಕನೋರ್ವ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಯುವಕ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯವನೆಂದು ತಿಳಿದುಬಂದಿದೆ. ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೈದರಾಬಾದ್​ನಿಂದ 200 ಕಿ.ಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಯುವಕ ಡಿಜೆಯಲ್ಲಿ ಹಾಡಿ ಕುಣಿಯುತ್ತಿದ್ದ.

➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುರತ್ಕಲ್: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ➤ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.28. ಗಾಂಜಾ ಅಮಲಿ ನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಘಟ‌ನೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆದಿತ್ಯವಾರ ಪ್ರತೀಕ್ ಎಂಬಾತನನ್ನು ಬಂಧಿಸಲಾಗಿತ್ತು. ನಿನ್ನೆ ಅಮಲ್ ಅಜಯನ್ ಮತ್ತು ನಿಶಾಂತ್ ಗೆ ಬಂಧಿಸಲಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸುನಿಲ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ.

ಸುರತ್ಕಲ್: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ➤ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ನೆಲಮಂಗಲ. ಫೆ.27. ಲೇಔಟ್ ಒಂದರಲ್ಲಿ ಸಂಜೆ ವೇಳೆ ವಾಕ್ ಮಾಡ್ತಿದ್ದ ವ್ಯಕ್ತಿಯೊರ್ವರಿಗೆ   ನಾಗರ ಹಾವೊಂದು ಕಚ್ಚಿತ್ತು.  ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸುವ ವೇಳೆ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.  ಮೃತರನ್ನು ಸೈಯದ್ ಸಮೀವುಲ್ಲಾ(38)  ಎಂದು ಗುರುತಿಸಲಾಗಿದೆ. ನೆಲಮಂಗಲ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಲೂರು ಗ್ರಾಮದ ನಿವಾಸಿ. ನಿನ್ನೆ ರಾತ್ರಿ ವೇಳೆ ವಾಕ್ ಮಾಡುತ್ತಿದ್ದ ಈತ ಹಾವು ಕಡಿತಕ್ಕೊಳಗಾಗಿ ದಾರುಣ ಸಾವನ್ನಪಿದ್ದಾನೆ. 40 ದಿನದ ಹಿಂದಷ್ಟೆ ಮಗುವಿಗೆ ತಂದೆಯಾಗಿದ್ದ ಈತ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದು,

➤ ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ವಾಲಿಬಾಲ್ ಆಡುವಾಗ ಕುಸಿದು ಬಿದ್ದು ಯುವಕ ಮೃತ್ಯು.!

(ನ್ಯೂಸ್ ಕಡಬ) newskadaba.com. ಕಾರ್ಕಳ.  ಫೆ.27.  ವಾಲಿಬಾಲ್ ಆಟವಾಡುವಾಗ ಕುಸಿದು ಬಿದ್ದು,ಯುವಕ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಬಳಿ ನಡೆದಿದೆ. ಸಂತೋಷ (34) ಮೃತ ದುರ್ದೈವಿ. ಸಂತೋಷ್ ನಿನ್ನೆ ಸಂಜೆ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

➤ ವಾಲಿಬಾಲ್ ಆಡುವಾಗ ಕುಸಿದು ಬಿದ್ದು ಯುವಕ ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ

(ನ್ಯೂಸ್ ಕಡಬ) newskadaba.com. ಹೈದರಾಬಾದ್. ಫೆ.27.  ತನ್ನ ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕಾಗಿ ಮತ್ತು ಕರೆ ಮಾಡಿದ ಎಂಬ ಕಾರಣಕ್ಕಾಗಿ  ತನ್ನ ಸ್ನೇಹಿತನನ್ನು ಕ್ರೂರವಾಗಿ ಕೊಂದ ಘಟನೆ  ಹೈದರಾಬಾದ್ ನಲ್ಲಿ ನಡೆದಿದೆ. ಇಲ್ಲಿ ನವೀನ್ (22) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹರಿಹರ ಕೃಷ್ಣಾ ಎಂಬಾತ ಕೃತ್ಯವನ್ನು ನಡೆಸಿದ್ದಾನೆ ಎನ್ನಲಾಗಿದೆ.   ನವೀನ್ ನನ್ನು ಕೊಲೆ ಮಾಡಿ, ಆತನ ತಲೆ ಕಡಿದು,ಆತನ ಹೃದಯ ಮತ್ತು ಖಾಸಗಿ ಭಾಗಗಳನ್ನು ತೆಗೆದು, ಬೆರಳುಗಳನ್ನು ಕತ್ತರಿಸಿ, ನಂತರ ಪೊಲೀಸರಿಗೆ ಆರೋಪಿ ಶರಣಾಗಿದ್ದಾನೆಂದು ಹೇಳಾಗಿದೆ. ಆರೋಪಿಯ ಹೇಳಿಕೆ

➤ ಪ್ರೇಯಸಿಗಾಗಿ ತನ್ನ ಗೆಳೆಯನನ್ನೆ ಕ್ರೂರವಾಗಿ ಕೊಂದ ಆಸಾಮಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ!

(ನ್ಯೂಸ್ ಕಡಬ) newskadaba.com.ಕುಂದಾಪುರ. ಫೆ.27. ಪಿಕಪ್ ವಾಹನ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ  ಘಟನೆ ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸೇತುವೆ ಬಳಿ ನಡೆದಿದೆ. ಅಪಘಾತದ ವೇಳೆ ಆಟೋ ರಿಕ್ಷಾ ಡಿವೈಡರ್ ಏರಿದ್ದು, ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿದು ಹೊಳೆಗೆ ಜಾರಿದೆ. ಆಟೋದಲ್ಲಿ ನಾಲ್ವರಿದ್ದು, ಮಹಿಳೆಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಪಿಕಪ್ ವಾಹನದಲ್ಲಿ ಇಬ್ಬರು ಇದ್ದು, ಚಾಲಕನಿಗೆ  ಸಣ್ಣ ಪುಟ್ಟಗಾಯವಾಗಿದೆ. ಈ ಕುರಿತು ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ ಪಿಕಪ್, ಆಟೋ ಮುಖಾಮುಖಿ ಢಿಕ್ಕಿ ➤ ಮಹಿಳೆ ಗಂಭೀರ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top