ಕ್ರೈಮ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿ ನಾಪತ್ತೆ!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.23. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿ ಎಂದು ತಿಳಿದುಬಂದಿದೆ. ಫೆ.20 ರಂದು ರಾತ್ರಿ ಮನೆಯಿಂದ ನಾಪತ್ತೆಯಾದ ಬಗ್ಗೆ ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ ರಾತ್ರಿ ವೇಳೆಯಲ್ಲಿ ಬಾಲಕಿ ನಾಪತ್ತೆ ಪ್ರಕರಣದ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಬಾಲಕಿಯ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಂಟ್ವಾಳ: ಅಪ್ರಾಪ್ತ ಬಾಲಕಿ ನಾಪತ್ತೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ತಂದೆಯನ್ನು ಕೊಂದ ಮಗನಿಗೆ ಮೂರು ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ !

(ನ್ಯೂಸ್ ಕಡಬ)newskadaba.com ಉಡುಪಿ, ಫೆ.23. ಮೂರು ವರ್ಷಗಳ ಹಿಂದೆ ತಂದೆಯನ್ನು ಕೊಂದ ಆರೋಪಿ ಮಗನಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ದಿನೇಶ್ ಹೆಗ್ಡೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪೆರಂಪಳ್ಳಿ ಭಂಡಾರ ಮನೆ ನಿವಾಸಿ ಪ್ರಜೋತ್ ಶೆಟ್ಟಿ (50) ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಆರೋಪಿ ಎಂದು ತಿಳಿದುಬಂದಿದೆ. 35 ಸಾಕ್ಷಿಗಳ ಪೈಕಿ 25 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿದೆ. ಜೊತೆಗೆ ತಾಯಿಗೆ

ಉಡುಪಿ: ತಂದೆಯನ್ನು ಕೊಂದ ಮಗನಿಗೆ ಮೂರು ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಯಾತ್ರೆಗೆ ತೆರಳಿದ್ದ ಬಸ್ ಮತ್ತು ಟ್ರಕ್ ನಡುವೆ ಅಪಘಾತ ! ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಫೆ.23. ಮೆಕ್ಕಾದಲ್ಲಿ ಉಮ್ರಾ ಯಾತ್ರೆ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ಬುಧವಾರದಂದು ರಾತ್ರಿ ನಡೆದಿದೆ. ಕಲಬುರಗಿಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್, ಸಾಮಾಜಿಕ ಕಾರ್ಯಕರ್ತ ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಮೂಲಕ ಮೆಕ್ಕಾ ಪ್ರವಾಸ ಕೈಗೊಂಡಿದ್ದರು. ಉಮ್ರಾ

ಯಾತ್ರೆಗೆ ತೆರಳಿದ್ದ ಬಸ್ ಮತ್ತು ಟ್ರಕ್ ನಡುವೆ ಅಪಘಾತ ! ➤ ಐವರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್

ಪಿಕಪ್ ನಿಂದ ಹೊರಬಂದು ಕಾರಿನೊಳಗೆ ಹೊಕ್ಕ ಅಲ್ಯುಮೀನಿಯಂ ಪಟ್ಟಿಗಳು !           ➤  ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.23. ಪಿಕ್-ಅಪ್ ವಾಹನದಲ್ಲಿ ಸಾಗಿಸುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಂತೂರು ಜಂಕ್ಷನ್‌ನಲ್ಲಿ ಸಂಭವಿಸಿದೆ. ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಹಾಗೂ ಕಾರು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು. ನಂತೂರು ಜಂಕ್ಷನ್‌ ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ ಅಪ್‌ ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ ಎಂದು ವರದಿ ತಿಳಿಸಿದೆ.  

ಪಿಕಪ್ ನಿಂದ ಹೊರಬಂದು ಕಾರಿನೊಳಗೆ ಹೊಕ್ಕ ಅಲ್ಯುಮೀನಿಯಂ ಪಟ್ಟಿಗಳು !           ➤  ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ತಂದೆಯನ್ನ ಕಾಣಲು ಜಮೀನಿಗೆ ಹೋಗಿದ್ದ ಬಾಲಕ !       ➤  ಕಾಲುವೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.22. ಕಾಲುವೆಯಲ್ಲಿ ಜಾರಿಬಿದ್ದು ಬಾಲಕ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಅಸಂಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಲ್ಲಯ್ಯ ಹಿರೇಮಠ(13) ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ಬಾಲಕ. ಶಾಲೆಯಿಂದ ಮನೆಗೆ ಬಂದಿದ್ದ ಬಾಲಕ, ಬಳಿಕ ತಂದೆಯನ್ನ ಕಾಣಲು ಜಮೀನಿಗೆ ತೆರಳಿದ್ದ. ಈ ಹಿಂದೆಯೂ ತಂದೆಯಿಂದ ಜಮೀನಿಗೆ ಹೋಗುತ್ತಿದ್ದ ಬಾಲಕ. ಈಜು ಬಾರದ ಬಾಲಕ ಕಾಲುವೆಯಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾನೆ.  

ತಂದೆಯನ್ನ ಕಾಣಲು ಜಮೀನಿಗೆ ಹೋಗಿದ್ದ ಬಾಲಕ !       ➤  ಕಾಲುವೆಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಕ್ಕದ ಮನೆಯವನೊಂದಿಗೆ ಅನೈತಿಕ ಸಂಬಂಧ        ➤  ನಡುರಸ್ತೆಯಲ್ಲೇ ಶಾಲಾ ಶಿಕ್ಷಕಿಯನ್ನು ಕೊಂದ ಪತಿ

(ನ್ಯೂಸ್ ಕಡಬ)newskadaba.com  ವಿಜಯಪುರ, ಫೆ.22. ಹಾಡುಹಗಲೇ ಶಾಲಾ ಶಿಕ್ಷಕಿಯನ್ನ ಕೊಲೆ ಮಾಡಲಾಗಿದ್ದು, ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲೇ ಘಟನೆ ನಡೆದಿದೆ. ದಿಲಶಾದ್ ಹವಾಲ್ದಾರ್​​ನನ್ನ ಆಕೆಯ ಪತಿ ಬಾದಶಾಹ ಶೇಖ್ ಹತ್ಯೆ ಮಾಡಿದ್ದಾನೆ. ಪತ್ನಿ ದಿಲಶಾದ್ ಹವಾಲ್ದಾರ್ ಪಕ್ಕದ ಮನೆಯವರೊಂದಿಗೆ ಅನೈತಿಕ ಸಂಬಂಧ ಹೊಂದಿದಕ್ಕಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.  

ಪಕ್ಕದ ಮನೆಯವನೊಂದಿಗೆ ಅನೈತಿಕ ಸಂಬಂಧ        ➤  ನಡುರಸ್ತೆಯಲ್ಲೇ ಶಾಲಾ ಶಿಕ್ಷಕಿಯನ್ನು ಕೊಂದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.22. ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಎಸ್.ಡಿ.ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ ಎಂದು ಗುರುತಿಲಾಗಿದೆ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಅಪಘಾತವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.    

ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

➤ ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್​ ಕಳಿಸಿದ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com. ತುಮಕೂರು. ಫೆ.22.  ತುಮಕೂರಿನ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರ ಮೊಬೈಲ್ ಗೆ ಅಸಭ್ಯ ಸಂದೇಶ ಕಳಿಸಿದ್ದಾರೆ. ಇದು ಬೆಳಕಿಗೆ ಬಂದ ವಿಚಾರವಾಗಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಪಿ.ನಾಗಭೂಷಣ್ ಅಮಾನತುಗೊಂಡ ಶಿಕ್ಷಕ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಕೊಟಗಾರಲಹಳ್ಳಿ ಸರ್ಕಾರಿ ಪ್ರೌಡ ಶಾಲೆಯ ಸಹ ಶಿಕ್ಷಕರಾಗಿ ಇವರು ಕೆಲಸ ಮಾಡುತ್ತಿದ್ದರು. ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ. ಕೊಟಗಾರಲಹಳ್ಳಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿನಿಯರೊಡನೆ ಈ ಶಿಕ್ಷಕ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.  ಪರೀಕ್ಷೆಯಲ್ಲಿ

➤ ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್​ ಕಳಿಸಿದ ಶಿಕ್ಷಕ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ     ➤  ಬೆಂಕಿ ಹಚ್ಚಿಕೊಂಡು ಮೂವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಚಿಕ್ಕಬಳ್ಳಾಪುರ, ಫೆ.22. ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿ, ಮೂವರು ಮೃತಪಟ್ಟ ದುರಂತ ಘಟನೆ ಬೆಳಕಿಗೆ ಬಂದಿದೆ. ಬೆಂಕಿ ಹಚ್ಚಿಕೊಂಡ ಇಬ್ಬರು ಪುತ್ರಿಯರು, ಪತ್ನಿ ಮೃತಪಟ್ಟು, ಪತಿಯ ಸ್ಥಿತಿ ಗಂಭೀರವಾಗಿದೆ. ನೇತ್ರಾವತಿ(37) ಮಕ್ಕಳಾದ ವರ್ಷಿತಾ(12), ಸ್ನೇಹಾ (9)ಮೃತಪಟ್ಟವರು ಎಂದು ಗುರುತಿಸಲಾಗಿದೆ . ಪತಿ ಸೊನ್ನೇಗೌಡ(48)ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.  

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ     ➤  ಬೆಂಕಿ ಹಚ್ಚಿಕೊಂಡು ಮೂವರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಫೆ. 22. ಇಲ್ಲಿನ ಟ್ಯುಟೋರಿಯಲ್ ಶಾಲೆಯೊಂದರ 10ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ಆರೋಪಿಯನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ ಆಕೆಯೊಂದಿಗೆ ಅಶ್ಲೀಲವಾಗಿ ಮಾತನಾಡಿರುವ ಕುರಿತು ಕೇಸ್ ದಾಖಲಾಗಿದ್ದು, ಇದೀಗ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.  

ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top