ಕ್ರೈಮ್ ನ್ಯೂಸ್

ಪ್ರಿಯಕರನ ಜೊತೆ ಅನುಚಿತ ಭಂಗಿಯಲ್ಲಿದ್ದ ಅಕ್ಕ!!     ➤ ಪೋಷಕರಿಗೆ ಹೇಳುತ್ತಾನೆಂದು ತಮ್ಮನನ್ನೇ ಕೊಂದ ಸೋದರಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.17. ತನ್ನ ಬಾಯ್ ಫ್ರೆಂಡ್ ನೊಂದಿಗಿದ್ದ ಅಕ್ಕನನ್ನು ನೋಡಿದ ಬಾಲಕ ವಿಷಯವನ್ನು ಪೋಷಕರಿಗೆ ತಿಳಿಸುತ್ತೇನೆಂದು ಹೇಳಿದ್ದಕ್ಕೆ ಆತನನ್ನು ಅಕ್ಕ ಮತ್ತು ಆಕೆಯ ಗೆಳೆಯ ಸೇರಿ ಹತ್ಯೆ ಮಾಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪೋಲೀಸರ ಪ್ರಕಾರ, 18 ವರ್ಷದ ಯುವತಿ ಮತ್ತು ಆಕೆಯ ಗೆಳೆಯನನ್ನು ಯುವತಿಯ ಕಿರಿಯ ಸಹೋದರನ ಕೊಲೆ ಪ್ರಕರಣ ಸಂಬಂಧ ಬಂಧಿಸಲಾಯಿತು. ಇದರಿಂದ ಕೋಪಗೊಂಡ ಇಬ್ಬರೂ ಕುಡುಗೋಲಿನಿಂದ ಬಾಲಕನ ಕತ್ತು ಕೊಯ್ದಿದ್ದಾರೆ.

ಪ್ರಿಯಕರನ ಜೊತೆ ಅನುಚಿತ ಭಂಗಿಯಲ್ಲಿದ್ದ ಅಕ್ಕ!!     ➤ ಪೋಷಕರಿಗೆ ಹೇಳುತ್ತಾನೆಂದು ತಮ್ಮನನ್ನೇ ಕೊಂದ ಸೋದರಿ Read More »

ಕ್ರೈಮ್ ನ್ಯೂಸ್

ಗುಡ್ಡಕ್ಕೆ ಬೆಂಕಿ ಹಾಕಿದ ದುಷ್ಕರ್ಮಿಗಳು!

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.17. ಇತಿಹಾಸ ಪ್ರಸಿದ್ಧ ಸೂಳೆಕೆರೆ ಗುಡ್ಡಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅಪಾರ ಪ್ರಮಾಣದ ಸಸ್ಯ ಸಂಪತ್ತು ಸುಟ್ಟು ನಾಶವಾಗಿದೆ. ಕಾಡು ಪ್ರಾಣಿಗಳು, ಪಕ್ಷಿ ಸಂಕುಲ ಅರಣ್ಯದಿಂದ ಚಿತ್ಕಾರದೊಂದಿಗೆ ಪಾಲಾಯನ ಮಾಡಿವೆ. ಗುಡ್ಡಕ್ಕೆ ಹೊಂದಿಕೊಂಡ ಜಮೀನು ಕಬಳಿಸಲು ಭೂಗಳ್ಳ ಕಿಡಿಗೇಡಿಗಳು ಈ ಕೃತ್ಯ ಎಸಗುತ್ತಿದ್ದಾರೆ. ಇದರ ಜತೆ ದನಗಾಹಿಗಳು ಹುಲ್ಲು ಬೆಳೆಯಲಿ ಎಂದೂ ಕೂಡ ಇಂತಹ ಕೆಲಸ ಮಾಡುತ್ತಿದ್ದಾರೆ. ಏನೇ ಆದರೂ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂಬುದು

ಗುಡ್ಡಕ್ಕೆ ಬೆಂಕಿ ಹಾಕಿದ ದುಷ್ಕರ್ಮಿಗಳು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳು ಸಾಗಾಟ ಪ್ರಕರಣ➤ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com. ಹಾವೇರಿ, ಫೆ.17. ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ,  ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಕೇರಳದ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು ಯಾನೆ ಸೂರಿ ಬಂಧಿತ ಆರೋಪಿಯಾಗಿದ್ದಾನೆ. ಈ ಅಕ್ರಮ ಮರಳು ಸಾಗಾಟದ ಪ್ರಮುಖ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಪತ್ತೆಗೆ ವಾರೆಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ವಿಟ್ಲ ಠಾಣೆ ಎಸ್ಸೈ ಜಯರಾಮ್ ಕೇರಳದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ಬಂಧಿಸಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ➤ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ತಂದು ಕಸದ ರಾಶಿಗೆ ಎಸೆದ ದುಷ್ಕರ್ಮಿಗಳು ➤ ಆರೋಪಿಗಳು ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.17. ಅಸ್ವಸ್ಥ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಉಳಿದ ಇಬ್ಬರು ಆತನನ್ನು ಗೂಡ್ಸ್ ವಾಹನವೊಂದರಲ್ಲಿ ಹಾಕಿ ತಂದು ಕಸದ ರಾಶಿಗೆ ಎಸೆದ ಪ್ರಕರಣ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ.ಆದರೆ ಅಸ್ವಸ್ಥಗೊಂಡು ಮೃತಪಟ್ಟಿದ್ದನು.ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ

ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ತಂದು ಕಸದ ರಾಶಿಗೆ ಎಸೆದ ದುಷ್ಕರ್ಮಿಗಳು ➤ ಆರೋಪಿಗಳು ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿ ಪುಣೆಯಲ್ಲಿ ಮೃತ್ಯು !!

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.17. ಅಜ್ಮೀರ್‌ ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿಯೋರ್ವರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿದ್ದೀಖ್ ಅಲ್ ಮದೀನಿ ಎಂದು ಗುರುತಿಸಲಾಗಿದೆ. ಸಂಸ್ಥೆಯ ಸ್ನೇಹಿತರ ಜತೆ ಮೊನ್ನೆ ಅಜ್ಮೀರ್ ಪ್ರವಾಸಕ್ಕೆಂದು ಹೋಗಿದ್ದ ಅವರಿಗೆ ಪುಣೆಯಲ್ಲಿ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾಗಿ ಎನ್ನಲಾಗಿದೆ.  

ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿ ಪುಣೆಯಲ್ಲಿ ಮೃತ್ಯು !! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಲೈಟ್ ಕಂಬವೊಂದರ ಬುಡದಲ್ಲಿ ನವಜಾತ ಶಿಶು ಪತ್ತೆ !!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಲಾಗಿದೆ ಎಂದು ಮಂಗಳೂರಿನಲ್ಲಿ ವರದಿಯಾಗಿದೆ. ಲೈಟ್‌ ಕಂಬವೊಂದರ ಬುಡದಲ್ಲಿ ಮಗು ಇರುವುದನ್ನು ಗಮನಿಸಿದ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಇದೀಗ ಪೊಲೀಸರು ಮಗುವನ್ನು ದಾಖಲಿಸಿದ್ದಾರೆ. ಮಗುವಿನ ಆರೋಗ್ಯದಲ್ಲಿ ಏರುಪೇರು ಇದ್ದು, ಸುಮಾರು ಒಂದು ವಾರದ ಹಿಂದೆ ಮಗು ಜನಿಸಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.  

ಮಂಗಳೂರು: ಲೈಟ್ ಕಂಬವೊಂದರ ಬುಡದಲ್ಲಿ ನವಜಾತ ಶಿಶು ಪತ್ತೆ !! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ತಾಯಿಗೆ ಕೊಲೆ ಬೆದರಿಕೆ !     ➤ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಮಗನೋರ್ವ ಹೆತ್ತ ತಾಯಿಗೆ ಅವ್ಯಾಚ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದ ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬೋಳಾರ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ಫೆ. 15ರ ಬುಧವಾರ ತಡರಾತ್ರಿ ಸಂಭವಿಸಿದೆ. ಆರೋಪಿ ಪುತ್ರ ರೋಹಿತ್‌ ವಿರುದ್ಧ ಗಾಯಾಳು ಆಗಿರುವ ಶಾಂತಾ ರೈ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಮಂಗಳೂರು: ತಾಯಿಗೆ ಕೊಲೆ ಬೆದರಿಕೆ !     ➤ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಕೊಡಿ ಎಂದು ಹಲ್ಲೆಗೊಳಗಾದ ಪತಿಯನ್ನು ಎಸ್ಪಿ ಕಚೇರಿಗೆ ಹೆಗಲ ಮೇಲೆ ಹೊತ್ತುಕೊಂಡು ಬಂದ ಪತ್ನಿ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಫೆ.17.  ಹಲ್ಲೆಗೊಳಗಾದ ವ್ಯಕ್ತಿಯೋರ್ವನಿಗೆ ನ್ಯಾಯ ಕೋರಿ ಆತನ ಪತ್ನಿ ಆತನನ್ನು ಹೆಗಲ ಮೇಲೆ ಹೊತ್ತು ಎಸ್ ಪಿ ಕಚೇರಿಗೆ ಕರೆದುಕೊಂಡು ಬಂದ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.   ಶಾದೂಲ್ ಜಿಲ್ಲೆಯಲ್ಲಿ ಸೋಹಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ಕೂಲಿ ಕಾರ್ಮಿಕ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಆತನಿಗೆ ಹಲ್ಲೆ ನಡೆಸಿ ದರೋಡೆ ಮಾಡಿದ್ದರು. ಇದರಿಂದ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ

ನ್ಯಾಯಕೊಡಿ ಎಂದು ಹಲ್ಲೆಗೊಳಗಾದ ಪತಿಯನ್ನು ಎಸ್ಪಿ ಕಚೇರಿಗೆ ಹೆಗಲ ಮೇಲೆ ಹೊತ್ತುಕೊಂಡು ಬಂದ ಪತ್ನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಆಕಾಶಭವನದ ಆನಂದನಗರ ಸರ್ಕಲ್ ಸಮೀಪ ಇರುವ ಭಂಡಾರಿ ಟವರ್ಸ್ ಕಟ್ಟಡದ ಎದುರು ರಸ್ತೆ ದಾಟುತ್ತಿದ್ದ ವೃದ್ದೆಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಮೃತರಾದವರನ್ನು ಆಕಾಶಭವನ ನಿವಾಸಿ ಶ್ರೀಮತಿ ಗೀತಾ (74 ವರ್ಷ) ಎಂದು ಗುರುತಿಸಲಾಗಿದೆ. ಬಸ್ಸು ಚಾಲಕ ವನೀಶ್ ಎಂಬಾತ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಆಕಾಶಭವನ ಮುಖ್ಯ ರಸ್ತೆಯಲ್ಲಿ 4ನೇ ಮೈಲು ಕಡೆಯಿಂದ ಆನಂದನಗರ ಸರ್ಕಲ್ ಕಡೆಗೆ ರಸ್ತೆಯಲ್ಲಿ ಹಂಪ್ಸ್ ಇರುವ ಜಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ರಸ್ತೆ

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನವೊಂದರಲ್ಲಿ ಸುಟ್ಟು ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆ

(ನ್ಯೂಸ್ ಕಡಬ) newskadaba.com ಹರಿಯಾಣ, ಫೆ.17.  ವಾಹನವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಎರಡು ಶವಗಳು ಪತ್ತೆಯಾಗಿದ್ದು. ಮೃತರನ್ನು ನಾಸಿರ್ (25) ಮತ್ತು ಜುನೈದ್ ಅಲಿಯಾಸ್ ಜುನಾ (35) ಎಂದು ಗುರುತಿಸಲಾಗಿದೆ. ಇಬ್ಬರನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕು ಚಕ್ರದ ವಾಹನದಲ್ಲಿ ಎರಡು ಸುಟ್ಟ ಮೃತದೇಹಗಳು ಪತ್ತೆಯಾಗಿವೆ. ಅಪಹರಣಕಾರರು ಮೊದಲು ಇಬ್ಬರನ್ನೂ ಥಳಿಸಿ, ನಂತರ ಅಪಹರಿಸಿ, ವಾಹನವನ್ನು ತೆಗೆದುಕೊಂಡು ಹೋಗಿ ಸುಟ್ಟುಹಾಕಲಾಗಿದೆ ಎಂದು ವರದಿ ತಿಳಿಸಿದೆ.      

ವಾಹನವೊಂದರಲ್ಲಿ ಸುಟ್ಟು ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top