ಕ್ರೈಮ್ ನ್ಯೂಸ್

ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧ ➤  ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.!

(ನ್ಯೂಸ್ ಕಡಬ)newskadaba.com  ಹಾಸನ, ಫೆ.15. ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಆಲೂರು ತಾಲೂಕಿನ ಹಂಪನಗುಪ್ಪೆ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಹೆಚ್.ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಯೋಧ. ಈತ ರೈತ ಹರೀಶ್ ಅವರ ದ್ವಿತಿಯ ಪುತ್ರರಾಗಿದ್ದಾರೆ. ಕರ್ತವ್ಯಕ್ಕೆ ರಜೆ ಹಾಕಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ತಮ್ಮ ಪತ್ನಿ ದೀಕ್ಷಾ ಹಾಗೂ ಕುಟುಂಬಸ್ಥರೊಂದಿಗೆ ಒಂದು ತಿಂಗಳಿಂದ ಪ್ರೀತಿಯಿಂದ ಕಾಲ ಕಳೆದಿದ್ದರು. 10 ಗಂಟೆ ಸಮಯವಾದರೂ ಯೋಗೇಶ್ ಮಲಗಿದ್ದ ರೂಂ ಬಾಗಿಲು ತೆರೆದಿರಲಿಲ್ಲ. ಈ ವೇಳೆ ಮನೆಯವರು ಎಷ್ಟು ಕೂಗಿದ್ರೂ […]

ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧ ➤  ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್‌ ಮತ್ತು ಟ್ರಕ್‌ ನಡುವೆ ಅಪಘಾತ ➤  20 ಮಂದಿ ಮೃತ್ಯು.!

(ನ್ಯೂಸ್ ಕಡಬ)newskadaba.com  ದಕ್ಷಿಣ ಆಫ್ರೀಕಾ, ಫೆ.15. ಜಿಂಬಾಬ್ವೆಯ ಗಡಿಯಲ್ಲಿರುವ ಲಿಂಪೊಪೋದಲ್ಲಿನ ರಾಷ್ಟ್ರೀಯ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಮತ್ತು ಶಸ್ತ್ರಸಜ್ಜಿತ ಟ್ರಕ್‌ ಪರಸ್ಪರ ಡಿಕ್ಕಿಯಾಗಿ 20 ಜನರು ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಸರ್ಕಾರ ತಿಳಿಸಿದೆ. ಅಪಘಾತವಾದ ರಸ್ತೆ ಕೆಳಗಿರುವ ನದಿಯಲ್ಲಿ ಕೊಚ್ಚಿ ಹೋದವರ ರಕ್ಷಣೆಗಾಗಿ ಹುಡುಕಾಟ ನಡೆಸುತ್ತಿದೆ. ಈ ಪ್ರದೇಶ ಭಾರೀ ಮಳೆಗೆ ತತ್ತರಿಸಿದೆ ಎನ್ನಲಾಗಿದೆ.

ಬಸ್‌ ಮತ್ತು ಟ್ರಕ್‌ ನಡುವೆ ಅಪಘಾತ ➤  20 ಮಂದಿ ಮೃತ್ಯು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಾಬಾ ಫ್ರಿಡ್ಜ್‌ನೊಳಗೆ ಬಾಲಕಿ ಮೃತದೇಹ ಪತ್ತೆ      ➤  ಆರೋಪಿ ಅರೆಸ್ಟ್.!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.15. ಸಂಬಂಧ ಮುರಿದುಕೊಂಡು ಬೇರೆ ಮದುವೆಯಾಗಲೆತ್ನಿಸಿದನ್ನು ಪ್ರಶ್ನಿಸಿದ ಬಾಲಕಿಯನ್ನು ಪ್ರೇಮಿಯೊಬ್ಬ ಕತ್ತು ಹಿಸುಕಿ ಕೊಲೆಗೈದು ಡಾಬಾದ ರೆಫ್ರಿಜರೇಟರ್‌ನಲ್ಲಿಟ್ಟ ಘಟನೆ ದೆಹಲಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದೆಹಲಿಯ ಉತ್ತಮ್‌ನಗರದ ಡಾಬಾದಲ್ಲಿರಿಸಲಾಗಿದ್ದ ರೆಫ್ರಿಜರೇಟರ್‌ನಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದ್ದು, ಆರೋಪಿ ಸಾಹಿಲ್ ಗೆಹ್ಲೋಟ್ (26)ನನ್ನು ಬಂಧಿಸಲಾಗಿದೆ. ಸಾಹಿಲ್ ಮತ್ತು ಬಾಲಕಿ ಕಳೆದೈದು ವರ್ಷಗಳಿಂದ ಪ್ರೀತಿಯಲ್ಲಿದ್ದರು.

ಡಾಬಾ ಫ್ರಿಡ್ಜ್‌ನೊಳಗೆ ಬಾಲಕಿ ಮೃತದೇಹ ಪತ್ತೆ      ➤  ಆರೋಪಿ ಅರೆಸ್ಟ್.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಪ್ರೇಯಸಿಯ ಕೊಲೆ ಮಾಡಿ, ಶವವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟ ಯುವಕ

(ನ್ಯೂಸ್ ಕಡಬ) newskadaba.com. ದೆಹಲಿ, ಫೆ.15. ಶ್ರದ್ಧಾ ವಾಕರ್ ಹತ್ಯೆ ಸುದ್ದಿ ಮಾಸುವ ಮುನ್ನ ಮತ್ತೊಂದು ಭೀಕರ ಹತ್ಯೆ ನಡೆದುಬಿಟ್ಟಿದೆ. ಲಿವ್​ ಇನ್​ ಸಂಬಂಧದಲ್ಲಿದ್ದ ಸಂಗಾತಿಯನ್ನು ಹತ್ಯೆ ಮಾಡಿ ಹಾಸಿಗೆಯ  ಕೆಳಗೆ ಬಚ್ಚಿಟ್ಟಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲಘಡದಲ್ಲಿ ಈ ಘಟನೆ ನಡೆದಿದೆ, ಆರೋಪಿಯು ತನ್ನ ಪ್ರೇಯಸಿಯನ್ನು ಕೊಂದು ರಾಜ್ಯದಿಂದ ಪರಾರಿಯಾಗಲು ಯತ್ನಿಸಿದ್ದ ಎನ್ನಲಾಗಿದೆ. ಮಂಗಳವಾರ ಮಧ್ಯಪ್ರದೇಶದ ರೈಲಿನಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಲೀಸರ ಪ್ರಕಾರ, ಪಾಲಘಡ ಜಿಲ್ಲೆಯ ತುಲಿಂಜ್ ಪ್ರದೇಶದ ಮನೆಯೊಳಗೆ ಹಾಸಿಗೆಯ ಕೆಳಗೆ

➤ ಪ್ರೇಯಸಿಯ ಕೊಲೆ ಮಾಡಿ, ಶವವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟ ಯುವಕ Read More »

ಕ್ರೈಮ್ ನ್ಯೂಸ್

ಕಾಸರಗೋಡು: ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ        ➤  ಇಲಿಪಾಷಣ ಸೇವಿಸಿ ಮೃತ್ಯು ಎಂದು ದೃಢ.!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ಧ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿ ಯ ಸಾವಿಗೆ ಇಲಿ ವಿಷ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿ ಯಿಂದ ತಿಳಿದು ಬಂದಿದೆ. ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದ್ರಡಿ ಕರಿಸಿತ್ತು. ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಟ್ಟಿದ್ದಳು ಎನ್ನಲಾಗಿದೆ.  

ಕಾಸರಗೋಡು: ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ        ➤  ಇಲಿಪಾಷಣ ಸೇವಿಸಿ ಮೃತ್ಯು ಎಂದು ದೃಢ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.15. ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು 50 ಅಡಿ ಆಳದ ತೋಟಕ್ಕೆ ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸಂಟ್ಯಾರು ಬಳಿ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ.ನ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಮೃತರು ಎಂದು ಗುರುತಿಸಲಾಗಿದೆ. ಇವರು ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಜೊತೆ ಕಾರಿನಲ್ಲಿ ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮುರಳೀಧರ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.14. ಯುವಕನೊಬ್ಬ ಬೈಕ್​ನಲ್ಲಿ ವ್ಹೀಲಿಂಗ್​ ಮಾಡುತ್ತಾ ಶಾಲಾ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿರುವ ಘಟನೆ ತಿರುವನಂತಪುರಂನ ಕಲ್ಲಂಬಲಮ್​ನಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆರೋಪಿ ಯುವಕನನ್ನು 18 ವರ್ಷದ ನೌಫಲ್​ ಎಂದು ಗುರುತಿಸಲಾಗಿದೆ. ಅಪಾಯಕಾರಿ ಡ್ರೈವಿಂಗ್​ ಸಂಬಂಧಿಸಿದಂತೆ ಯುವಕನ ವಿರುದ್ಧ 6 ಪ್ರಕರಣಗಳು ಈ ಹಿಂದೆಯೇ ದಾಖಲಾಗಿವೆ.

ವ್ಹೀಲಿಂಗ್​ ಮಾಡುತ್ತಾ ಹುಡುಗಿಯರ ಮುಂದೆ ಪೋಸ್​ !     ➤ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಯುವಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14 ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎನ್‌ಐಎ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, 5 ವರ್ಷಗಳ ಸಾಮಾನ್ಯ ಜೈಲು ಶಿಕ್ಷೆಯೊಂದಿಗೆ 10,000 ರೂ. ದಂಡ ವಿಧಿಸಿದೆ. ಎಚ್ ಆರ್ ಬಿಆರ್ ಲೇಔಟ್ ನಿವಾಸಿ ಫೈಜ್ ರಶೀದ್ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿ.

ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ವೀಳ್ಯದೆಲೆ ಸೇವಿಸಿದ್ದ ವೃದ್ದೆ ಮೃತ್ಯು

(ನ್ಯೂಸ್ ಕಡಬ)newskadaba.com ಗಂಗೋಳ್ಳಿ, ಫೆ.14. ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸಾಧು ಪೂಜಾರ್ತಿ(71) ಎಂದು ಗುರುತಿಸಲಾಗಿದೆ. ಫೆ.6ರಂದು ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣವನ್ನು ಸೇರಿಸಿ ತಿಂದಿದ್ದು, ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರೂ ಫೆ.12ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ವೀಳ್ಯದೆಲೆ ಸೇವಿಸಿದ್ದ ವೃದ್ದೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top