ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 05. ಕೆಎಸ್‌ಆರ್‌ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ನೀಲಸಂದ್ರದ ನಿವಾಸಿ ಮಹಮ್ಮದ್ ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಮಹಮ್ಮದ್ ಅಜರ್ ಪಾಷಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಜಿ ರಸ್ತೆಯ ಮೈಸೂರು ಬ್ಯಾಂಕ್ ಜಂಕ್ಷನ್ ಬಳಿ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ […]

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಕೆಲ ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಮನೆಗೆ ಹೋಗುವ ಸಂಧರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಜು. 05. ಯುವತಿಯೋರ್ವರು ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಮರಕ್ಕೆ ಸಿಲುಕಿ ರಾತ್ರಿಯಿಡಿ ಒದ್ದಾಡಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ.   ಆತ್ಮಹತ್ಯೆಗೆ ಯತ್ನಿಸಿದ ಯವತಿಯನ್ನು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ಎಂದು ಗುರುತಿಸಲಾಗಿದ್ದು, ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು ಎನ್ನಲಾಗಿದೆ.     ವಿಚಾರ ತಿಳಿದು ಸ್ಥಳಕ್ಕೆ ಬಂದ

ಯುವತಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 05. ಟ್ರೇಡಿಂಗ್‌ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭವನ್ನು ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮಾರ್ಚ್ 1ರಂದು ಶಿವಶಂಕರ ಎಂಬವರಿಗೆ ಅಪರಿಚಿತ ವ್ಯಕ್ತಿಯು ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣವನ್ನು ಗಳಿಸಬಹುದೆಂದು ನಂಬಿಸಿದ್ದು, ಅದರಂತೆ ದೂರುದಾರ ಆರೋಪಿತರ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 7 ಲಕ್ಷ ರೂ. ಹಣವನ್ನು ಮೇ 19ರಿಂದ ಮೇ

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 04. ಕೋಪಗೊಂಡ ವ್ಯಕ್ತಿಯೋರ್ವ ಮನೆಯ ಶೋಕೇಸ್ ನ ಗಾಜನ್ನು ಕೈಯ್ಯಲ್ಲೇ ಒಡೆದ ಪರಿಣಾಮ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ಮಾಡೂರು ಸೈಟ್ ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.   ಮೃತರನ್ನು ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ರವರ ಪುತ್ರ ನಿತೇಶ್ ನಾಯಕ್‌(38) ಎಂದು ಗುರುತಿಸಲಾಗಿದೆ. ಮೃತ ನಿತೇಶ್ ಹಾಗೂ ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ದರು. ಗುರುವಾರದಂದು ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಕೋಟೆಕಾರು ಬೀರಿ

ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಜು. 04. ಕಾಣೆಯಾಗಿದ್ದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೇ ಹಳಿಗಳ ಮೇಲೆ ಶುಕ್ರವಾರದಂದು ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತ ಯುವಕನನ್ನು ಕೋಟೆಕಾರ್‌ ಬೀರಿ ನಿವಾಸಿ ಮೋಹನ್‌ದಾಸ್ ಅಮೀನ್ ಅವರ ಪುತ್ರ ತೇಜಸ್ (25) ಎಂದು ಗುರುತಿಸಲಾಗಿದೆ.   ವರದಿಗಳ ಪ್ರಕಾರ, ತೇಜಸ್ ಜುಲೈ 2ರಂದು ರಾತ್ರಿ ತನ್ನ ಕೋಣೆಯಿಂದ ಕಾಣೆಯಾಗಿದ್ದು, ತೇಜಸ್ ಕಾಣೆಯಾದ ಬಳಿಕ ಅವರ ತಂದೆ ಉಳ್ಳಾಲ

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.   ಮನೆ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ನಡೆದಿದೆ.   ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ಕಾರೊಂದು ತಡರಾತ್ರಿ ಸುಮಾರು 2 ಗಂಟೆಗೆ ನಾರ್ಲಪದವು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಅವಘಡದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿದ್ದ ಚಾಲಕ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

20ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ- ವಿಷಪ್ರಾಶನ ಶಂಕೆ

(ನ್ಯೂಸ್ ಕಡಬ) newskadaba.com ಜು. 02. ಇತ್ತೀಚೆಗಷ್ಟೇ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳ ಸಾವಿನ ಪ್ರಕರಣದ ಬೆನ್ನಲ್ಲೇ ಇದೀಗ 20ಕ್ಕೂ ಹೆಚ್ಚು ಕೋತಿಗಳ ಮಾರಣ ಹೋಮ ನಡೆದಿರುವುದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಕೊಡಸೋಗೆ ಬಳಿ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ರಾಶಿ ರಾಶಿ ವಾನರಗಳ ಕಳೇಬರಗಳು ಬಿದ್ದಿದ್ದು, ವಿವಿಧೆಡೆಗಳಲ್ಲಿ ಸೆರೆ ಹಿಡಿದ ಕೋತಿಗಳಿಗೆ ವಿಷವಿಕ್ಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಕೋತಿಗಳನ್ನು ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ

20ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ- ವಿಷಪ್ರಾಶನ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಜು. 02. ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್​ ಪುರದಲ್ಲಿ ನಡೆದಿದೆ.   ವರದಿಯ ಪ್ರಕಾರ, ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿಯನ್ನು ಆಕೆಯ ಮಾವ ಶಿವೈಪಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದಿದ್ದರು. ಆ ಮಾಂತ್ರಿಕ ಆಕೆಯ ಕುಟುಂಬಸ್ತರನ್ನು ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.  

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top