ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು
(ನ್ಯೂಸ್ ಕಡಬ)newskadaba.com ಮಂಜೇಶ್ವರ, ಫೆ.07. ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು ನಗದು ಮತ್ತು 11 ಸಾವಿರ ರೂ. ಮೌಲ್ಯದ ಬೆಲೆ ಬಾಳುವ ವಾಚ್ ಕಳವುಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಹಮೀದ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ ಎಂದು ತಿಳಿದುಬಂದಿದೆ. ಹಮೀದ್ ಮತ್ತು ಕುಟುಂಬಸ್ಥರು ಮನೆಗೆ ಬೀಗ ಹಾಕಿ ನಾಲ್ಕು ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಈ ನಡುವೆ ಕಳವು ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್




