ಕ್ರೈಮ್ ನ್ಯೂಸ್

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಫೆ.07. ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು ನಗದು ಮತ್ತು 11 ಸಾವಿರ ರೂ. ಮೌಲ್ಯದ ಬೆಲೆ ಬಾಳುವ ವಾಚ್ ಕಳವುಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಹಮೀದ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ ಎಂದು ತಿಳಿದುಬಂದಿದೆ. ಹಮೀದ್ ಮತ್ತು ಕುಟುಂಬಸ್ಥರು ಮನೆಗೆ ಬೀಗ ಹಾಕಿ ನಾಲ್ಕು ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಈ ನಡುವೆ ಕಳವು ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಅಕ್ರಮ ಗಾಂಜಾ ಮಾರಾಟ  ➤  ಆರೋಪಿ ಬಂಧನ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.07. ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಪಾಂಡೇಶ್ವರ ಪೊಲೀಸರು ಗಸ್ತಿನಲ್ಲಿದ್ದಾಗ ಸೆಂಟ್ರಲ್ ರೈಲ್ವೇ ನಿಲ್ದಾಣದ ಮುತ್ತಪ್ಪ ಗುಡಿಯ ಜಂಕ್ಷನ್ ಬಳಿ ಫಾರೂಕ್ ಸುಮಾರು 1 ಕೆ.ಜಿ. ಗಿಂತಲೂ ಅಧಿಕ ಪ್ರಮಾಣದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ತನ್ನ ವಶದಲ್ಲಿ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮಂಗಳೂರು: ಅಕ್ರಮ ಗಾಂಜಾ ಮಾರಾಟ  ➤  ಆರೋಪಿ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಮರದ ಮೇಲೆಯೇ ಹೃದಯಾಘಾತವಾಗಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ನಾರಾಯಣಪ್ಪ (60) ಎಂದು ಗುರುತಿಸಲಾಗಿದೆ.  ತೆಂಗಿನ ಕಾಯಿ ಕೀಳುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ  ಎಂದು ವರದಿ ತಿಳಿಸಿದೆ. ಮರದ ಮೇಲೆ ಇದ್ದ ಅವರನ್ನು ಹಲವು ಬಾರಿ ಕರೆದರೂ ಪ್ರತಿಕ್ರಿಯಿಸದ ಕಾರಣ ತಕ್ಷಣ ಅಗ್ನಿಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಂದು ಮೃತದೇಹ ಕೆಳಗಿಳಿಸಿದ್ದಾರೆ.      

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಯುವಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವರಾಜ್‌( 33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವರಾಜ್‌ ಅವರು ಜೂಜಾಟಕ್ಕೆ ರೇಣುಕಾರಾಧ್ಯ ಎಂಬ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದಿದ್ದ. ಈ ಮಧ್ಯೆ ರೇಣುಕಾರಾಧ್ಯ ಅವರಿಗೆ ಶಿವರಾಜ್‌ ಹಣ ವಾಪಸ್‌ ನೀಡದಿದ್ದಾಗ, ರೇಣುಕರಾಧ್ಯ ಅವರು ಶಿವರಾಜ್‌ ಅವರ ಬೈಕ್‌ ತೆಗೆದುಕೊಂಡು ಹೋಗಿದ್ದರು. ಇದರಿಂದ ನೊಂದಿದ್ದ ಶಿವರಾಜ್‌ ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯೋರ್ವರ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಪುಷ್ಪದಾಮಿ ಎಂಬ ಮಹಿಳೆಯ ಮೇಲೆ ಹುಳಿಮಾವು ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲು ಮಾಡಲಾಗಿತ್ತು. ಆದರೆ, ಇದೀಗ ಮಹಿಳೆಯ ಅಸ್ತಿಪಂಜರ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಡೆತ್ ಸೀಕ್ರೆಟ್ ಭೇಧಿಸಲು ಇದೀಗ ಪೊಲೀಸರು ಬೆನ್ನತ್ತಿದ್ದಾರೆ.  

ಮಹಿಳೆಯೋರ್ವರ ಅಸ್ಥಿಪಂಜರ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಕಳೆ ನಾಶಕ ಸಿಂಪಡಿಸಿ ಮೆಣಸಿನ ಗಿಡಗಳ ನಾಶ ಪಡಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.6.  ಹಾಸನ  ರೈತರೊಬ್ಬರು ಬೆಳೆದ ಮೆಣಸಿನ ಗಿಡಗಳನ್ನು ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿ ನಾಶ ಪಡಿಸಿರುವ ಘಟನೆ ಅರಕಲಗೂಡು ತಾಲೂಕಿನ ಮದಲಾಪುರ ಗ್ರಾಮದಲ್ಲಿ ನಡೆದಿದೆ. ರೋಹಿತ್ ಗೌಡ ಅವರು ಒಂದು ಎಕರೆಯಲ್ಲಿ ಮೆಣಸಿನ ಗಿಡಗಳನ್ನು ಬೆಳೆದಿದ್ದರು. ಇದಕ್ಕಾಗಿ ಅವರು ಜಮೀನು ಸಮತಟ್ಟುಗೊಳಿಸಿ ಹನಿ ನೀರಾವರಿ ಅಳವಡಿಸಿ ಸಾವಿರಾರು ರೂ ಖರ್ಚು ಮಾಡಿ ಮೆಣಸಿನ ಗಿಡಗಳನ್ನು ಬೆಳೆದಿದ್ದರು. ಆದರೆ ದುಷ್ಕರ್ಮಿಗಳು ಕಳೆ ನಾಶಕ ಸಿಂಪಡಿಸಿ ಸಂಪೂರ್ಣ ನಾಶ ಮಾಡಿದ್ದಾರೆ. ಇದರಿಂದ ಅಪಾರ ನಷ್ಟ ಅನುಭವಿಸಿದ

➤ಕಳೆ ನಾಶಕ ಸಿಂಪಡಿಸಿ ಮೆಣಸಿನ ಗಿಡಗಳ ನಾಶ ಪಡಿಸಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಬಸ್ ಢಿಕ್ಕಿ  ➤  ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ರಸ್ತೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಢಿಕ್ಕಿ ಹೊಡೆದ ಪರಿಣಾಮ ಚಾಲಕನೋರ್ವ ಸ್ಥಳದಲ್ಲಿ ಮೃತಪಟ್ಟಿದ್ದು, ಇತರೆ 9 ಜನರಿಗೆ ಗಾಯಗಳಾದ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತಕ್ಕೀಡಾದ ಬಸ್ ಬಳ್ಳಾರಿಯಿಂದ ಬೀದರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಠಾಣೆ ಪಿಎಸ್‌ಐ ತಿಳಿಸಿದ್ದಾರೆ.  

ನಿಂತಿದ್ದ ಲಾರಿಗೆ ಬಸ್ ಢಿಕ್ಕಿ  ➤  ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.06. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ. ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಐದು ವರ್ಷಗಳಿಂದ ವಿಚಾರಣೆಗೆ ಒಳಗಾಗಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆರೋಪಿ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಇದೀಗ ಪುತ್ತೂರು ನಗರ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮೊಹಮ್ಮದ್ ಬಶೀರ್ ನನ್ನು ಬಂಧಿಸಲಾಗಿದೆ.  

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.06. 7.8 ತೀವ್ರತೆಯ ಭೂಕಂಪವು ಟರ್ಕಿಯನ್ನು ಬೆಚ್ಚಿಬೀಳಿಸಿದ್ದು, ಇದರ ಬೆನ್ನಲ್ಲೇ ಮತ್ತೊಂದು ಪ್ರಬಲ ಭೂಕಂಪವು ಪ್ರದೇಶದ ಹಲವಾರು ಪ್ರಾಂತ್ಯಗಳಲ್ಲಿ ಸಂಭವಿಸಿದೆ. ಹಲವಾರು ಕಟ್ಟಡಗಳು ನೆಲಸಮವಾಗಿವೆ ಎಂದು ವರದಿಗಳು ತಿಳಿಸಿದೆ. ನೂರ್ಡಗಿ ಪಟ್ಟಣದಿಂದ ಸುಮಾರು 26 ಕಿಲೋಮೀಟರ್ (16 ಮೈಲಿ) ದೂರದಲ್ಲಿರುವ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಎರಡು ದೇಶಗಳ ನಡುವಿನ ಗಡಿಯ ಸಮೀಪ ಆಗ್ನೇಯ ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪ

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.06. ಕೃಷಿ ಕಾರ್ಯಕ್ಕಾಗಿ ಹಾಗೂ ನೀರಾವರಿ ಅನುಕೂಲಕ್ಕಾಗಿ ಜಮೀನಿನಲ್ಲಿ‌ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ನಾಗರಾಜ ಎಂಬುವರ ಕೃಷಿ ಹೊಂಡದಲ್ಲಿ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಅಭಿಶೇಕ್ (15), ಜಿತೇಂದ್ರ (10) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಉಪತಹಸೀಲ್ದಾರ ಶಂಕ್ರಪ್ಪ ಹಾಗೂ ಎಎಸ್ ಐ ಕರಿವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೃಷಿ ಹೊಂಡ ಬಳಿ ಚಪ್ಪಲಿಗಳು

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top