ಕ್ರೈಮ್ ನ್ಯೂಸ್

➤ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅತ್ಮಹತ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.4. ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ  ಸಿಆರ್ ಪಿಎಫ್ ಎಎಸ್ ಐ ಒಬ್ಬರು  ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತರನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಜಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಗುಪ್ತಚರ ಬ್ಯೂರೋ ನಿರ್ದೇಶಕರ ನಿವಾಸದಲ್ಲಿ ಗಾರ್ಡ್ ಆಗಿ ಅವರನ್ನು ನಿಯೋಜಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. […]

➤ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಅಗ್ನಿ ಅನಾಹುತಕ್ಕೆ ಸುಟ್ಟು ಭಸ್ಮವಾದ ಗ್ಯಾರೆಜ್

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಭಾರೀ ಬೆಂಕಿ ಅನಾಹುತಕ್ಕೆ ಗ್ಯಾರೆಜ್ ಒಂದು ಸುಟ್ಟು ಭಸ್ಮವಾದ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್‌ಫರ್ಮರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದೆ ಎಂಬ ಪ್ರಾರ್ಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ

ಭಾರೀ ಅಗ್ನಿ ಅನಾಹುತಕ್ಕೆ ಸುಟ್ಟು ಭಸ್ಮವಾದ ಗ್ಯಾರೆಜ್ Read More »

ಕರಾವಳಿ, ಕ್ರೈಮ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ!

(ನ್ಯೂಸ್ ಕಡಬ)newskadaba.com ಹಾಸನ, ಫೆ.04. ಬೆಂಗಳೂರಿನ ಟ್ರಾಫಿಕ್‌ನಿಂದಾಗಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಆಂಬ್ಯುಲೆನ್ಸ್‌ನಲ್ಲೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬುಲೇರೊ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಂದೆ ಅಹಮದ್, ತಾಯಿ ರುಕ್ಸಾನಾಗೆ ಗಂಭೀರ ಗಾಯಗಳಾಗಿತ್ತು. ಮಗುವಿಗೂ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದ ಹಿಮ್ಸ್‌ಗೆ ತಿಪಟೂರು ವೈದ್ಯರು ಕಳಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಸ್ಥಳಾಂತರಿಸಲು ಯತ್ನಿಸಲಾಗಿತ್ತು. ಆದರೆ ನೆಲಮಂಗಲದಿಂದ ಟ್ರಾಫಿಕ್ ನಡುವೆ ಆಂಬ್ಯುಲೆನ್ಸ್ ಸಿಲುಕಿಕೊಂಡು,

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಹಾಡಹಗಲೇ ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ಸಿಬ್ಬಂದಿಯನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ‌ಮಂಗಳೂರು ನಗರದ ಹಂಪನಕಟ್ಟೆ ಬಳಿ‌ ನಡೆದಿದೆ. ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಘಟನೆ ನಡೆದಿದ್ದು, ಜ್ಯುವೆಲ್ಲರಿ ಸಿಬ್ಬಂದಿ, ಅತ್ತಾವರ ನಿವಾಸಿ ರಾಘವೇಂದ್ರ(50) ಹತ್ಯೆಯಾದವರು ಎಂದು ತಿಳಿದುಬಂದಿದೆ.‌ ಕೇಶವ ಆಚಾರ್ಯ ಎಂಬವರಿಗೆ ಸೇರಿದ ಶಾಪ್ ಇದಾಗಿದ್ದು, ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಒಬ್ಬನೇ ಇದ್ದ ಸಿಬ್ಬಂದಿ ರಾಘವೇಂದ್ರ ಮೇಲೆ ದಾಳಿ ನಡೆಸಲಾಗಿದೆ. ಮಾಸ್ಕ್ ಮತ್ತು

ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಪುತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.4. ದತ್ತು ಪುತ್ರನೊಬ್ಬ ತನ್ನ ತಾಯಿಯನ್ನು ಸುಟ್ಟುಹಾಕಿದ್ದು, ತನ್ನ ತಂದೆಗೂ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತಮ್ ಕುಮಾರ್ ಎಂದು ಗುರುತಿಸಲಾಗಿದೆ. ಮಂಜುನಾಥ್ ಮತ್ತು ಆತನ ಪತ್ನಿಯು ತಮಗೆ ಮಕ್ಕಳಿಲ್ಲದ ಕಾರಣ ಆರೋಪಿಯನ್ನು ದತ್ತು ಪಡೆದಿದ್ದರು ಎಂದು ತಿಳಿದು ಬಂದಿದೆ. ಆದರೆ, ಉತ್ತಮ್ ಕುಮಾರ್ ಪೋಷಕರಿಗೆ ಅಗೌರವ ತೋರಿ ಅವರ ಮೇಲೆ ದ್ವೇಷ ಬೆಳೆಸಿಕೊಂಡಿದ್ದನು. 2018ರಲ್ಲಿ ತನ್ನ ದತ್ತು ಪಡೆದ ತಾಯಿಯನ್ನು ಸುಟ್ಟು ಹಾಕಿದ್ದ

➤ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಪುತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ! ➤ ಮಂಗಳೂರಿನ ಮೂವರು ಯುವಕರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾದ, ಫೆ.04. ರಿಯಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರಾವಳಿ ಮಂಗಳೂರಿನ ಮೂವರು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.‌ ಅಕೀಲ್, ನಾಸಿರ್, ರಿಝ್ವಾನ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯಲ್ಲಿ ಇವರು ತೆರಳುವಾಗ ಒಂಟೆಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಕೀಲ್ ಅವರು ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ! ➤ ಮಂಗಳೂರಿನ ಮೂವರು ಯುವಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮುಲ್ಕಿ: ಅಪಘಾತ ಪ್ರಕರಣ ! ➤ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಅರೆಸ್ಟ್

(ನ್ಯೂಸ್ ಕಡಬ)newskadaba.com ಮುಲ್ಕಿ, ಫೆ.04. ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ ವರದಿಯಾಗಿದೆ. ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ

ಮುಲ್ಕಿ: ಅಪಘಾತ ಪ್ರಕರಣ ! ➤ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ರಾಯಚೂರು, ಫೆ.04. ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಶವ ಪತ್ತೆಯಾಗಿದ್ದು, ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗಸೂಗೂರು ‌ಪೊಲೀಸ್

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಬಿದಿರೆ: ನಿಧಾನವಾಗಿ ಹೋಗು ಎಂದದ್ದಕ್ಕೆ ಟಿಪ್ಪರ್ ಚಲಾಯಿಸಿ ಹತ್ಯೆ..!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.04. ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಹತ್ಯೆಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಪಯಾಜ್ ಕೋಟೆಬಾಗಿಲು ಮಸೀದಿಗೆ ನಮಾಝ್ ಗೆ ತೆರಳುವ ಸಂಧರ್ಭ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಎಂಬಾತ ಅತೀ ವೇಗದಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ್ದು ಆಗ ಅಲ್ಲೇ

ಮೂಡಬಿದಿರೆ: ನಿಧಾನವಾಗಿ ಹೋಗು ಎಂದದ್ದಕ್ಕೆ ಟಿಪ್ಪರ್ ಚಲಾಯಿಸಿ ಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆಂದು ಹೂಡಿಕೆ ಮಾಡಿಸಿಕೊಂಡು 3 ಕೋ.ರೂ. ವಂಚಿಸಿರುವ ಬಗ್ಗೆ ಕಣ್ಣೂರು ಬೋರುಗುಡ್ಡೆಯ ನಿವಾಸಿಯೊಬ್ಬರು ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಹಮ್ಮದ್ ಶಫದ್ ಸಿ.ಕೆ. ಮತ್ತು ಮುಹಮ್ಮದ್ ಅಫೀದ್ ಸಿ.ಕೆ. ಆರೋಪಿಗಳು ಎಂದು ಗುರುತಿಸಲಾಗಿದೆ. ದೂರುದಾರ ಕಣ್ಣೂರು ಬೋರುಗುಡ್ಡೆಯ ದೂರುದಾರ ವ್ಯಕ್ತಿಯ ಬಳಿ ಪರಿಚಯದ ಮುಹಮ್ಮದ್ ಶಫದ್ ಎಂಬಾತ ತಾನು ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಸಂಪಾದಿಸಿದ್ದು, ಯಾರಾದರೂ ಒಳ್ಳೆಯ ಹೂಡಿಕೆದಾರರು ಇದ್ದರೆ ತಿಳಿಸಿ

ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top