ಕ್ರೈಮ್ ನ್ಯೂಸ್

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ

(ನ್ಯೂಸ್ ಕಡಬ)newskadaba.com ಜರ್ಮನ್, ಫೆ.01. 23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. ಕೌಟುಂಬಿಕ ವಿವಾದದ ಕಾರಣದಿಂದ ಶರಬನ್ ತನ್ನ ಸ್ವಂತ ಮರಣವನ್ನು ನಕಲಿ ಮಾಡಲು ಬಯಸಿದ್ದಳು. ಅದಕ್ಕಾಗಿ ಆಕೆ ತನ್ನನ್ನೇ ಹೋಲುವ ಅಲ್ಜೀರಿಯಾದ ಮಹಿಳೆ ಖಾದಿಡ್ಜಾ ನನ್ನು ಕೊಂದು ಇದೀಗ ಬಂಧನಕ್ಕೊಳಗಾಗಿದ್ದಾಳೆ. ಕೊಲೆಗೆ ಬಳಸಿದ ಆಯುಧ ಇನ್ನೂ ಪತ್ತೆಯಾಗಿಲ್ಲ. ಆದರೆ ಖದೀಜಾ ಖಾದಿಡ್ಜಾ ನನ್ನು […]

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು

(ನ್ಯೂಸ್ ಕಡಬ) newskadaba.com, ನವದೆಹಲಿ. ಫೆ.1   ದೆಹಲಿಯ ಆಸ್ಪತ್ರೆಯೊಂದರಲ್ಲಿ ಸರ್ಜರಿಗೆಂದು ಅಡ್ಮಿಟ್ ಆಗಿದ್ದ 15 ವರ್ಷದ ಬಾಲಕಿಯ ಅಂಗಾಂಗಗಳನ್ನು ತೆಗೆದಿಟ್ಟುಕೊಂಡು, ಆಕೆಯ ದೇಹವನ್ನು ಪಾಲಿಥಿನ್ ಚೀಲಗಳಲ್ಲಿ ತುಂಬಿ ಕೊಂದಿರುವ ಭೀಕರ ಘಟನೆ ನಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು ಈ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ಆ ಬಾಲಕಿಯ ಶವಪರೀಕ್ಷೆ ನಡೆಸಲಾಗಿದ್ದು, ಅದರ ವರದಿ ಬಂದ ನಂತರ ಆ ಆರೋಪ ನಿಜವೋ, ಸುಳ್ಳೋ ಎಂಬುದು ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.01. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.01. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ ನಡೆದಿದೆ. ಕಾರ್ಕಳದ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ದಂಪತಿ ಮಗುವಿನ ಜೊತೆ ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ‌.ಈ ವೇಳೆ ಮಗು ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿದೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ತಂತ್ರಜ್ಞಾನ ದುರ್ಬಳಕೆ ಮಾಡಿ ನಗರದ ಶಕ್ತಿನಗರದ ರಾಷ್ಟ್ರೀಕೃತ ಬ್ಯಾಂಕೊಂದರ ಎಟಿಎಂನಿಂದ ಹಣ ತೆಗೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ತಂತ್ರಜ್ಞಾನ ದುರ್ಬಳಕೆ ಮಾಡಿ ಎಟಿಎಂ ಅನ್ನು ಟ್ಯಾಂಪರಿಂಗ್ ಮಾಡಿ ನೆಟ್ ವರ್ಕ್ ಪವರ್ ಕೇಬಲ್ ತುಂಡರಿಸಿ ಸೂಪರ್ ವೈಸರ್ ಮೋಡ್ ಗೆ ತರುವ ಮೂಲಕ 1.09 ಲ.ರೂ ತೆಗೆದು ವಂಚಿಸಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.  

ಮಂಗಳೂರು: ತಂತ್ರಜ್ಞಾನ ದುರ್ಬಳಕೆ ➤ ATM ನಿಂದ 1.09 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅತ್ಯಾಚಾರ ಪ್ರಕರಣ ➤ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ!

ನ್ಯೂಸ್ ಕಡಬ) newskadaba.com, ಗಾಂಧಿನಗರ. ಜ.31. 2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್‌ನ ಗಾಂಧಿನಗರದ ನ್ಯಾಯಾಲಯವು 2013 ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 2013ರಲ್ಲಿ ಮಾಜಿ ಮಹಿಳಾ ಶಿಷ್ಯೆಯೊಬ್ಬರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ 81 ವರ್ಷದ ವ್ಯಕ್ತಿಗೆ ಶಿಕ್ಷೆ ವಿಧಿಸಲಾಗಿತ್ತು. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ ಕೆ ಸೋನಿ ಅವರು ಶಿಕ್ಷೆಯ ಪ್ರಮಾಣದ ಬಗ್ಗೆ ವಾದ

ಅತ್ಯಾಚಾರ ಪ್ರಕರಣ ➤ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ)newskadaba.com ದೆಹಲಿ, ಜ.31. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ದೆಹಲಿಯ ಪಶ್ಚಿಮ ವಿಹಾರದಲ್ಲಿ ನಡೆದಿದೆ. ಮೃತರನ್ನು ಜ್ಯೋತಿ(32) ಎಂದು ಗುರುತಿಸಲಾಗಿದೆ. ಫ್ಲಿಪ್‌ಕಾರ್ಟ್‌ನ ಕೊರಿಯರ್ ಇಲಾಖೆಯಲ್ಲಿ ಕೆಲಸ ಮಾಡುವ ಜ್ಯೋತಿ ಕೆಲಸ ಮುಗಿಸಿ ಸ್ಕೂಟರ್‌ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಬೈಕ್‌ ಹಾಗೂ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಗಂಭೀರ ಗಾಯಗೊಂಡ ಜ್ಯೋತಿ ಅವರನ್ನು ಆಸ್ಪತ್ರೆಗೆ

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗುಂಡಿನ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜ.31. ಹುಡುಗಿ ಪ್ರೀತಿಸಿ ಕೈ ಕೊಟ್ಟಳೆಂದು ಮನನೊಂದ ಯುವಕ ಚೆನ್ನೈನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಸಂಗಮೇಶ್ವರ ಬಡಾವಣೆಯ ಕಾರ್ತಿಕ್ (26)ಮೃತಪಟ್ಟ ಯುವಕ. ಕಾರ್ತಿಕ್ ಕಳೆದ 4 ವರ್ಷದಿಂದ ಹೊಳೆನರಸೀಪುರ ತಾಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಯುವತಿ ಕರೆಮಾಡಿ ತಾನು ಚೆನ್ನೈನಲ್ಲಿದ್ದು, ಅಲ್ಲಿಗೆ ಬರುವಂತೆ ಹೇಳಿದ್ದಾಳೆ. ಆಕೆಯ ಮಾತು ನಂಬಿ ಅಲ್ಲಿಗೆ ಕಾರ್ತಿಕ್ ಹೋಗಿದ್ದಾನೆ. ಬಳಿಕ ಯುವತಿ ತಾನು ಹಾಸನದಲ್ಲಿಯೇ ಇದ್ದೇನೆ ಎಂದು ಯುವತಿ ಹೇಳಿದ್ದಾಳೆ. ಇದರಿಂದ ಮನನೊಂದ

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ನಗರದಲ್ಲಿ ಕಳ್ಳತನ, ದೌರ್ಜನ್ಯ, ಸುಲಿಗೆ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನ ರಾಜಗೋಪಾಲ ನಗರ ಪೊಲೀಸ್‌ ಠಾಣೆಯಲ್ಲಿ ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬ್ರಾರ್‌ ಅಲಿಯಾಸ್‌ ಬಾಷ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಆಗಿದ್ದಾನೆ.ಪೊಲೀಸ್ ಕಾನ್‌ ಸ್ಟೇಬಲ್‌ ಪ್ರಕಾಶ್‌ ಅವರು ಆರೋಪಿ ಅಬ್ರಾರ್‌ ನ ಹ್ಯಾಂಡ್‌ ಕಪ್‌ ಹಾಗೂ ಲೀಡಿಂಗ್‌ ಚೈನ್‌ ಹಾಕಿ ಶೌಚಾಲಯಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಶೌಚಕ್ಕೆ ಹೋಗುವಂತೆ ಒಳ ಹೋದ ಆರೋಪಿ ಅಲ್ಲಿಂದ ಫಿನಾಯಿಲ್‌

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ – ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಮುಂದೆನೆ

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top