ಕ್ರೈಮ್ ನ್ಯೂಸ್

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ

(ನ್ಯೂಸ್ ಕಡಬ)newskadaba.com ಆಸ್ಟ್ರೇಲಿಯಾ, ಜ.30. 60 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಅವರ ಪತ್ನಿಯ ಕಣ್ಣೆದುರಲ್ಲೇ ಹಾವು ಕಚ್ಚಿದ್ದು, ವೈದ್ಯಕೀಯ ಸಿಬ್ಬಂದಿ ಆಗಮಿಸುವ ಮುನ್ನವೇ ಅವರು ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ನ್ಯೂ ಝೀಲ್ಯಾಂಡ್ ಹೆರಾಲ್ಡ್‌ನಲ್ಲಿ ಕುರಿತು ವರದಿ ಪ್ರಕಟವಾಗಿದೆ. ಇಲ್ಲಿನ ಕ್ವೀನ್ಸ್‌ಲ್ಯಾಂಡ್‌ನ ತಮ್ಮ ಖಾಸಗಿ ನಿವೇಶನದಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯ ಕೈಗೆ ಹಾವು ಕಚ್ಚಿತು. ಕೂಡಲೇ ಇವರ ಪತ್ನಿ ಆರೋಗ್ಯ ನೆರವಿಗಾಗಿ ತುರ್ತು ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ ಹೊತ್ತಿಗೆ ವೃದ್ಧ ವ್ಯಕ್ತಿ ಸಾವನ್ನಪ್ಪಿದ್ದರು. […]

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.30. ರೈಲು ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ-ಬೆಂಗಳೂರು ಡೆಮೋ ರೈಲು ಮಧ್ಯಾಹ್ನ 1-30 ಕ್ಕೆ ಭದ್ರಾವತಿಯ ಹುತ್ತಾ ಕಾಲೋನಿಯ ಬಳಿ ಚಲಿಸುವಾಗ ಹಳಿ ದಾಟುತ್ತಿದ್ದ 34 ವರ್ಷದ ಯುವಕನ ಮೇಲೆ ಹರಿದು ಹೋಗಿದೆ. ರೈಲಿಗೆ ಸಿಲುಕಿ ಸಾವನ್ನಪ್ಪಿದ ಯುವಕನನ್ನ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಗೆ ಕಣ್ಣು ಕಾಣಿಸುತ್ತಿರಲಿಲ್ಲ. ಕಿವಿ ಸಹ ಮಂದವಾಗಿತ್ತು ಎಂದು ಹೇಳಲಾಗುತ್ತಿದೆ. ಈತ ಉಜ್ಜೈನಿಪುರದ 8 ನೇ ತಿರುವಿನ ನಿವಾಸಿಯಾಗಿದ್ದಾನೆ.

ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.30. ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19) ಎಂದು ಗುರುತಿಸಲಾಗಿದೆ. ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಕುಂಬಳೆ ಬಂಬ್ರಾಣದ ಅಬ್ದುಲ್ ರುಮೈಸ್ (27) ಮತ್ತು ಉಪ್ಪಳ ಪೆರಿಂಗಡಿಯ ಎಂ.ಕೆ ಮುಸ್ತಾಫಾ (39) ಬಂಧಿತರು ಎಂದು ತಿಳಿದುಬಂದಿದೆ. ಇವರಿಂದ 69 ಗ್ರಾಂ. ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಉಪ್ಪಳ ಪೇಟೆಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿದೆ. ಇನ್ನು ಬಂಧಿತ ರುಮೈಸ್ ಐದು ವರ್ಷಗಳ ಹಿಂದೆ ನಡೆದ ಕೊಲೆ

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಜೇಶ್ವರ: 30 ಕಿಲೋ ಗಾಂಜಾ ವಶ ! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಜ.30. ಮಂಜೇಶ್ವರ ಮೀಯಪದವಿನ ನಿರ್ಮಾಣ ಹಂತದಲ್ಲಿರುವ ಮನೆಯಿಂದ ಸುಮಾರು 30 ಕಿಲೋ ಗಾಂಜಾ ವನ್ನು ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು ,ಓರ್ವನನ್ನು ಬಂಧಿಸಿದ್ದಾರೆ. ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮನೆ ಮಾಲಕ ಮುಸ್ತಾಫ ಎಂಬಾತನನ್ನು ಬಂಧಿಸಲಾಗಿದೆ. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ದಾಳಿ ನಡೆಸಲಾಗಿದೆ.

ಮಂಜೇಶ್ವರ: 30 ಕಿಲೋ ಗಾಂಜಾ ವಶ ! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ರಸ್ತೆಯ ಮಧ್ಯೆ ಖಾಸಗಿ ಬಸ್ ಕಂಡಕ್ಟರ್‌ಗೆ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್‌ ನಡುವೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ

ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಊಟ ಮಾಡುತ್ತಿದ್ದ ವೇಳೆ ಬಂದೆರಗಿದ ಜವರಾಯ, ಕುಳಿತಲ್ಲೇ ಕೊನೆಯುಸಿರೆಳೆದ ವ್ಯಕ್ತಿ!

(ನ್ಯೂಸ್ ಕಡಬ) newskadaba.com,ಕಲಬುರಗಿ. ಜ.30. ಊಟ ಮಾಡುತ್ತಿರುವಾಗಲೇ ವ್ಯಕ್ತಿಯೋರ್ವ  ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಲಕ್ಷ್ಮಣ‌ ಚಿಂಚನಸೂರ್ ಎಂದು ಗುರುತಿಸಲಾಗಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್  ಮೃತ ಲಕ್ಷ್ಮಣ ​ಕುಳಿತು ಊಟ ಮಾಡುತ್ತಿದ್ದ ಶೆಡ್​​ ಮೇಲೆ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು, ನಿನ್ನೆ ರಾತ್ರಿ ಮನೆ ಶೆಡ್​​ನಲ್ಲಿ ಗಂಡ ಹೆಂಡತಿ ಕುಳಿತು ಊಟ ಮಾಡುತ್ತಿದ್ದರು. ಈ ವೇಳೆ ಪತಿಗೆ ಕುಡಿಯಲು ನೀರು

➤ ಊಟ ಮಾಡುತ್ತಿದ್ದ ವೇಳೆ ಬಂದೆರಗಿದ ಜವರಾಯ, ಕುಳಿತಲ್ಲೇ ಕೊನೆಯುಸಿರೆಳೆದ ವ್ಯಕ್ತಿ! Read More »

ಕ್ರೈಮ್ ನ್ಯೂಸ್

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಬಸ್ಸು ಮತ್ತು ಪಿಕಪ್ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಅಂಬಲತ್ತರ ಪಾರಪಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಂಬಲಪಾಡಿಯ ಪನತ್ತಡಿಯ ಯೂಸಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ಸು ಮತ್ತು ಪಿಕಪ್ ನಡುವೆ ಈ ಅಪಘಾತ ನಡೆದಿದೆ.

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ !

(ನ್ಯೂಸ್ ಕಡಬ)newskadaba.com ವಿಟ್ಲ, ಜ.30. ಕನ್ಯಾನ ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಕೇರಳ ಮೂಲದ ವಿನಯನ್ (58) ಮೃತರು ಎಂದು ಗುರುತಿಸಲಾಗಿದೆ. ವಿನಯನ್ ಮೃತದೇಹವು ಕನ್ಯಾನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ವಿಟ್ಲ: ಬಸ್ ನಿಲ್ಧಾಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ ! Read More »

ಕರಾವಳಿ, ಕ್ರೈಮ್ ನ್ಯೂಸ್

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ

(ನ್ಯೂಸ್ ಕಡಬ) newskadaba.com,ಒಡಿಶಾ , ಜ.30. ಭುವನೇಶ್ವರ ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ನಬಾ ಕಿಶೋರ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಸಚಿವರ ಮೇಲೆ ಗುಂಡು

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top