ಕ್ರೈಮ್ ನ್ಯೂಸ್

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com  ಪಣಜಿ, ಜ. 21. ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ. ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ […]

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿಡಲಾಗಿದ್ದ ಶೇಷಾದ್ರಿಪುರ ಠಾಣೆ ಮೇಲೆ ರಾಜ್ಯ ಮಾನವ ಹಕ್ಕು ಆಯೋಗದ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಶೇಷಾದ್ರಿಪುರ ಠಾಣೆ ಇನ್‌ಸ್ಪೆಕ್ಟರ್ ಹೇಮಂತ್‌ ಕುಮಾರ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ (ಎಸ್‌ಎಚ್‌ಆರ್‌ಸಿ) ದಾಖಲಾಗಿದ್ದ ಪ್ರಕರಣದಲ್ಲಿ ಡಿ.ವೈ.ಎಸ್ಪಿ ಕೇಶವ್ ನೇತೃತ್ವದ ತಂಡ ಈ ದಾಳಿ ಮಾಡಿದೆ. ‘ಸ್ಥಳೀಯ ನಿವಾಸಿ ಆರ್. ಶ್ರೀಧರ್ ಎಂಬುವರನ್ನು ಪೊಲೀಸರು ಅಕ್ರಮ ಬಂಧನದಲ್ಲಿರಿಸಿದ್ದರು. ಯಾವುದೇ ದೂರು ಹಾಗೂ ಎಫ್‌ಐಆರ್ ಇಲ್ಲದಿದ್ದರೂ ಠಾಣೆಯಲ್ಲಿ

ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.21. ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ  ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.  

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸಕರಿಗೇ ಬಿಗ್ ಶಾಕ್ ನೀಡಿದ ಭೂಕಳ್ಳರು ➤  ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಸೇರಿದಂತೆ ಮೂವರು ಶಾಸಕರ ನಿವೇಶನಗಳನ್ನು ಕಬಳಿಸಲಾಗಿದೆ. ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ತಮಗೆ ಮಂಜೂರಾಗಿದ್ದ ಬಿಡಿಎ ನಿವೇಶನ ಕಬಳಿಸಿದ್ದಾಗಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ನೀಡಿದ ದೂರಿನ ಮೇರೆಗೆ ಹಲಸೂರು ನಿವಾಸಿ ರಾಮಮೂರ್ತಿ, ಅನುರಾಧ, ದೀಪಿಕಾ, ನಿವೇದಿತಾ, ಸಾಚ್ಯಮಾಟೆ ಡೆವಲಪರ್ಸ್, ಜೆಪಿ ನಗರದ ಜೆಮ್ಮಿ ರಾಹೂರ್, ಮಲ್ಲೇಶ್ವರಂ ನ ಶ್ರೀಕೃಷ್ಣ ಕನ್ಸ್ಟ್ರಕ್ಷನ್ ಇಂಡಿಯಾ ಕಂಪನಿ, ಮಂಜೇಗೌಡ,

ಶಾಸಕರಿಗೇ ಬಿಗ್ ಶಾಕ್ ನೀಡಿದ ಭೂಕಳ್ಳರು ➤  ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜ.21. ನೇಣುಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಲಿಯಲ್ಲಿ ನಡೆದಿದೆ.ಮಜಯ ಪೂಜಾರಿ (48) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ವಿಳ್ಯದೆಲೆ ಖರೀದಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ಹೋದವರು ವಾಪಾಸ್ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಬೆಳ್ಸಾರ್‌ ಬೆಟ್ಟು ನರ್ಸರಿ ಎಂಬಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಪರೀತ ಮದ್ಯ ಸೇವನೆಯ ಚಟವೊಂದಿದ್ದ ಅವರು ಕಳೆದು ಏಳು ತಿಂಗಳಿಂದ ಕುಡಿತದ ಚಟದಿಂದ ಮುಕ್ತರಾಗಿದ್ದರು. ಯಾವುದೋ ಘಟನೆಯಿಂದಾಗಿ ಮಾನಸಿಕವಾಗಿ

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ 21. ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ನಾಗನ ಗೌಡರೊಂದಿಗೆ ಗಸ್ತು ನಿರತರಾಗಿದ್ದಾಗ ತುಪ್ಪೆಕಲ್ಲಿನ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಮಾರುತಿ ಸುಝುಕಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಅಪರಿಚಿತರು ನಿಂತಿದ್ದರು. ಮತ್ತು ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ. ಗಸ್ತು ಕರ್ತವ್ಯದಲ್ಲಿದ್ದ

ಮಂಗಳೂರು: ಗಸ್ತು ನಿರತ ಪೊಲೀಸರ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ !

(ನ್ಯೂಸ್ ಕಡಬ)newskadaba.com ಪುತ್ತೂರು, ಜ.21. ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಆತನ ಸಹೋದರನಿಗೆ ಕೊಲೆ‌ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ. ಕೊಯಿಲ ನಿವಾಸಿ ನಿಝಾಮ್ ಅವರು ಹಲ್ಲೆ ಸಂತ್ರಸ್ತ. ಅವರನ್ನು ಮಂಗಳೂರಿನ ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಅವರು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.  ಹಣ ಕೊಡದಿದ್ದರೆ ಶಾರೂಕ್ ನನ್ನು

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು !

(ನ್ಯೂಸ್ ಕಡಬ)newskadaba.com ವಿಜಯಪುರ, ಜ.21. ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು. ಬಳಿಕ ಸಂಬಂಧಿಕರ ಮನೆಯಲ್ಲಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.    

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 21. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖೋಟಾ ನೋಟು ಜಾಲ ಪತ್ತೆ  !! ➤  ಖತರ್ನಾಕ್ ಗ್ಯಾಂಗ್ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚಿಕ್ಕಬಳ್ಳಾಪುರ, ಜ.20. ಜಿಲ್ಲೆಯಲ್ಲಿ ಖೋಟಾ ನೋಟಿನ ಜಾಲ ಪತ್ತೆಯಾಗಿದ್ದು, 2000 ರೂಪಾಯಿ ಮುಖಬೆಲೆಯ 1.29 ಕೋಟಿ ಮೌಲ್ಯದ ನಕಲಿ ನೋಟುಗಳನ್ನ ಚಿಂತಾಮಣಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಚಿಂತಾಮಣಿ ತಾಲೂಕು ಊಲವಾಡಿ ಗ್ರಾಮದ ಬಾರ್ನ್ ಫೌಂಡೇಶನ್ ಕಟ್ಟಡದಲ್ಲಿ ನಡೆಯುತ್ತದ್ದ ನಕಲಿ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶೇಖ್ ಹಿದಾಯತ್, ದಾವೂದ್ ವಾಸಿಮ್ ಹಾಗೂ ಶಿವಣ್ಣ ಬಂಧಿತ ಆರೋಪಿಗಳು. ಕಟ್ಟಡದ ಕೋಣೆಯೊಂದರಲ್ಲೇ ನಕಲಿ ನೋಟುಗಳನ್ನು ಪ್ರಿಂಟ್​ ಮಾಡುತ್ತಿದ್ದರು.    

ಖೋಟಾ ನೋಟು ಜಾಲ ಪತ್ತೆ  !! ➤  ಖತರ್ನಾಕ್ ಗ್ಯಾಂಗ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top