ಕ್ರೈಮ್ ನ್ಯೂಸ್

crime, arrest, suspected

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆ.ಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ ಜಾಫರ್‌ ಯಾನೆ ಹಮೀದ್ (48) ಎಂದು ಗುರುತಿಸಲಾಗಿದೆ. ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ […]

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..??

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ವಿದ್ಯಾರ್ಥಿನಿಯೋರ್ವಳು ಯೂಟ್ಯೂಬ್ ನೋಡಿ ಪ್ರಯೋಗ ಮಾಡುತ್ತಿದ್ದ ವೇಳೆ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಉಡುಪಿಯ ಬ್ರಹ್ಮಗಿರಿಯ ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ(11) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಯೂಟ್ಯೂಬ್ ನಲ್ಲಿ ಬರುವ ವಿಡಿಯೋಗಳನ್ನು ನೋಡಿ ಅದನ್ನು ಪ್ರಯೋಗ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಳು. ಅದರಂತೆ ಬಾತ್ರೂಮ್ ನಲ್ಲಿ ಬಟ್ಟೆ ಕಟ್ಟಿ ಯಾವುದೋ ಪ್ರಯೋಗ ಮಾಡುವ ವೇಳೆ ಕುತ್ತಿಗೆಗೆ ಬಟ್ಟೆ ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..?? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com  ಉಡುಪಿ, ಜ..16. ಅಡಿಕೆ ಕೀಳುತ್ತಿದ್ದ ವ್ಯಕ್ತಿಯೊಬ್ಬರು ಮರ ಮುರಿದು ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ನಗರದ ಬಸ್ ನಿಲ್ದಾಣದ ಸಮೀಪದ ಮತ್ತದಬೆಟ್ಟು ನಿವಾಸಿ ಶ್ಯಾಮ್ ಅಂಚನ್ (59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶ್ಯಾಮ್ ಅವರು ಮರದಿಂದ ಅಡಿಕೆ ಕೀಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಮೃತಪಟ್ಟರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಪರ್ಕಳದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಸೆರೆಹಿಡಿಯಲಾಗಿದೆ.

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೋಣಿ ಗ್ರಾಮದ ಕಟ್ಕೇರಿಯಲ್ಲಿ ವರದಿಯಾಗಿದೆ. ಚಂದ್ರಕುಮಾರ್ (68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರದೀಪ್ ಎಂಬವರು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳ್ಳೂರಿನ ಕಾರೆಬೈಲು ನಿವಾಸಿ ಚಂದ್ರಕುಮಾರ್ ಅವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಚಂದ್ರಕುಮಾರ್ ಅವರನ್ನು ಕೂಡಲೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆ

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ)newskadaba.com  ಗದಗ, ಜ.15. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನಿಗೆ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಕಳಸಾಪುರ ರಸ್ತೆಯಲ್ಲಿ ಸಂಭವಿಸಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಯುವಕನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯರು ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಯಕರ್ತನೋರ್ವನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ..!!

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.15. ಕಾರ್ಯಕರ್ತನೊಬ್ಬನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ(17) ಮೃತ ಬಾಲಕಿ. ಕಾರ್ಯಕರ್ತ ಹಿತೇಶ್ (25) ಅಪ್ರಾಪ್ತ ಬಾಲಕಿ ದೀಪ್ತಿಯನ್ನ ಪ್ರೀತಿಸಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ನೊಂದ ದೀಪ್ತಿ ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿ ಆಹ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳೂರಿನ ಏ.ಜೆ.ಆಸ್ಪತ್ರೆಯಲ್ಲಿ ದೀಪ್ತಿ ಮೃತಪಟ್ಟಿದ್ದಾಳೆ.

ಕಾರ್ಯಕರ್ತನೋರ್ವನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.15. ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ವಿಮಾನವು ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನನ್ನು ವಿಮಾನ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ‘ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಪ್ರಯಾಣಿಸುತ್ತಿದ್ದಾಗ

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!!

(ನ್ಯೂಸ್ ಕಡಬ)newskadaba.com  ನಾಗ್ಪುರ, ಜ.15. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಬೆಳಗಾವಿ ಜೈಲಿನಲ್ಲಿರುವುದಾಗಿ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ  ಜಯೇಶ್ ಕಾಂತ ಎಂಬಾತ ಸಚಿವ ಗಡ್ಕರಿ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ. ಈತ ಕುಖ್ಯಾತ ದರೋಡಕೋರ ಹಾಗೂ ಕೊಲೆ ಆರೋಪಿಯಾಗಿದ್ದು, ಬೆಳಗಾವಿ ಜೈಲಿನಲ್ಲಿದ್ದಾನೆ. ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಬಳಕೆ ಮಾಡಿಕೊಂಡು ಗಡ್ಕರಿ ಅವರ ಕಚೇರಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಚಿವರಿಗೆ ಜೀವ

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.15. ನಗರವನ್ನೇ ಬೆಚ್ಚಿ ಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದರು. ಇದೀಗ ನಿರಂತರ ಸರಿ ಸುಮಾರು ಎರಡು ತಿಂಗಳ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರದ ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್ತು. ಇದರಲ್ಲಿ ಆರೋಪಿ ಮುಹಮ್ಮದ್ ಶಾರೀಕ್ ಮತ್ತು ರಿಕ್ಷಾ ಚಾಲಕ

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ..! ➤  ರಿಕ್ಷಾ ಚಾಲಕ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top