ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                        Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್!

(ನ್ಯೂಸ್ ಕಡಬ) newskadaba.com ಥಾಣೆ, ಜ.13.  36 ವರ್ಷದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಆಗಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 22.67 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಥಾಣೆಯಲ್ಲಿ ವರದಿಯಾಗಿದೆ. ಆನ್‌ಲೈನ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ, ಫೆಬ್ರವರಿ 2022 ರಲ್ಲಿ ಪುರುಷನಿಂದ ಬಂದಿದ್ದ ಸ್ನೇಹದ ವಿನಂತಿಯನ್ನು ಒಪ್ಪಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಇಬ್ಬರೂ ನಿಯಮಿತವಾಗಿ ಆನ್‌ಲೈನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದರು. ಈ ವೇಳೆ ಆ ವ್ಯಕ್ತಿ ತನ್ನ ತಾಯಿಯ ಚಿಕಿತ್ಸೆಗೆ ತುರ್ತಾಗಿ ಹಣದ ಅಗತ್ಯವಿದೆ ಎಂದು ಹೇಳಿದ್ದಾನೆ.

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿವಮೊಗ್ಗ ಅಕ್ರಮ ಕಸಾಯಿಖಾನೆ ➤7 ಹಸುಗಳ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com, ಶಿವಮೊಗ್ಗ, ಜ. 13.ಅಕ್ರಮ ಕಸಾಯಿಖಾನೆಯಲ್ಲಿ ಏಳು ಹಸುಗಳ ಕತ್ತುಕೊಯ್ದು ಹತ್ಯೆ ನಡೆಸಿದ ಘಟನೆ ಶಿವಮೊಗ್ಗ ಹೊರವಲಯದ ಸೂಳೇಬೈಲಿನಲ್ಲಿ ನಡೆದಿದೆ. ಸೂಳೆಬೈಲಿನ ಅಜೀಜ್ ಎಂಬುವರ ಮನೆಯಲ್ಲಿ ಮಾಂಸಕ್ಕಾಗಿ ಗೋವುಗಳ ಹತ್ಯೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ತುಂಗಾ ನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದಾರೆ. ಈ ವೇಳೆ ಏಳು ಹಸುಗಳನ್ನು ಪಾಪಿಗಳು ಕೊಂದಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಜೀಜ್, ಬಾಬು, ಅಬ್ದುಲ್ ಸತ್ತರ್

ಶಿವಮೊಗ್ಗ ಅಕ್ರಮ ಕಸಾಯಿಖಾನೆ ➤7 ಹಸುಗಳ ಬರ್ಬರ ಹತ್ಯೆ! Read More »

ಕ್ರೈಮ್ ನ್ಯೂಸ್

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.13. ಶಿವಮೊಗ್ಗ ಹೊರವಲಯದಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.  

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆಯೊಬ್ಬರು 10 ಲಕ್ಷ ರೂ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಲಾಟರಿ ಹೆಸರಲ್ಲಿ ಮಹಿಳೆಗೆ ಖದೀಮರು ಲಕ್ಷ-ಲಕ್ಷ ಪಂಗನಾಮ ಹಾಕಿದ್ದಾರೆ. ಅರುಣ ಎಂಬ ಮಹಿಳೆಗೆ ವಂಚಿಸಿರುವ ಆನ್ಲೈನ್ ಖದೀಮರು ಲಾಟರಿಯಲ್ಲಿ ಕಾರು ಬಂದಿದೆ ಎಂದು ಪತ್ರ ಕಳುಹಿದ್ದರು. ಟೀ ಶರ್ಟ್ ಜೊತೆ ವಂಚಕರು  ಪೋಸ್ಟ್ ಕಾರ್ಡ್, ಸ್ಕ್ರಾಚ್ ಕಾರ್ಡ್, ಲೇಟರ್  ಕಳುಹಿಸಿದ್ದರು. ಲೇಟರ್ ನಲ್ಲಿ ಲಾಟರಿ ಮೂಲಕ ಕಾರು ಬಹುಮಾನ

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕೇರಳ, ಜ. 13.   ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರದಂದು  ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು,

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!!

(ನ್ಯೂಸ್ ಕಡಬ) newskadaba.com ತುಮಕೂರು, ಜ.13. ಯುವಕನೋರ್ವ ರೈಲಿನಲ್ಲಿ ಸಿಗರೇಟ್ ಸೇದಿ ಪುಂಡಾಟ ಮೆರೆದಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಸಾರ್ವಜನಿಕರು ಯುವಕ ಬಳಿ ತೆರಳಿ , ಇದು ಸಾರ್ವಜನಿಕ ಸ್ಥಳ. ಇಲ್ಲಿ ಸಿಗರೇಟ್ ಸೇದಬಾರದು ಎಂದು ತಿಳಿ ಹೇಳಿದ್ದಾರೆ. ಆದರೆ ಈ ಯುವಕ ಮಾತ್ರ ಇದ್ಯಾವುದಕ್ಕೂ ಕ್ಯಾರೆ ಅನ್ನದೇ ಸಾರ್ವಜನಿಕರ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವಕ ಪ್ರಯಾಣಿಕರಿಗೆ ಆವಾಜ್ ಹಾಕಿ ಬೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಭಟ್ಕಳ ರೈಲು ನಿಲ್ದಾಣದ ಬಳಿ ಮೃತದೇಹ ಪತ್ತೆ!

(ನ್ಯೂಸ್ ಕಡಬ) newskadaba.com, ಭಟ್ಕಳ, ಜ. 13.  ಭಟ್ಕಳ ರೈಲು ನಿಲ್ದಾಣದ ಬಳಿಯ ಚರಂಡಿಯ ದಡದಲ್ಲಿ ವ್ಯಕ್ತಿಯೊಬ್ಬರ  ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು  ಹರಿಯಾಣ ಮೂಲದ ಬಾಲ ಚಂದ್ರಾನಂದ್ (58) ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ

➤ಭಟ್ಕಳ ರೈಲು ನಿಲ್ದಾಣದ ಬಳಿ ಮೃತದೇಹ ಪತ್ತೆ! Read More »

ಕ್ರೈಮ್ ನ್ಯೂಸ್

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13.  ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಉತ್ತಮ ವೇತನ ನೀಡುವುದಾಗಿ ಮನವೊಲಿಸಿದ್ದ ಬಮನ ಪಹಡಿಯಾ ಮತ್ತು ಮೈಸ ಪಹಡಿಯಾ ಎಂಬ ಇಬ್ಬರ ವ್ಯಕ್ತಿಗಳು ತಮ್ಮ ಜೊತೆಗೆ ಉತ್ತರ ಭಾರತದಿಂದ ರೈಲಿನಲ್ಲಿ 14 ಮತ್ತು 15 ವರ್ಷದೊಳಗಿನ 11 ಅಪ್ರಾಪ್ತೆಯರು ಮತ್ತು 17 ವರ್ಷದ ಅಪ್ರಾಪ್ತನನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ ಎಂದು ತಿಳಿದುಬಂದಿದೆ. ಹೌರಾ

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ

ಆಲಂಕಾರು: ರಿಕ್ಷಾ ಮತ್ತು ಬೈಕ್  ನಡುವೆ ಅಪಘಾತ ! ➤  ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top