ಕ್ರೈಮ್ ನ್ಯೂಸ್

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 18. ಬಿಳಿನೆಲೆ ಗ್ರಾಮದ ಚೆಂಡೆಹಿತ್ತು ನಿವಾಸಿ ದಿ.ಮೇದಪ್ಪ ಗೌಡರ ಪುತ್ರ, ರಿಕ್ಷಾ ಚಾಲಕ ಚೇತನ್ ರವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚೇತನ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೆಲ ದಿನಗಳ ಹಿಂದೆ ಕಡಬದ ಆಸ್ಪತ್ರೆಯೊಂದರಲ್ಲಿ ತಪಾಸಣೆ ವೇಳೆ ಜಾಂಡೀಸ್ ಇರುವುದು ಪತ್ತೆಯಾಗಿದೆ. ನಂತರ ಅವರು ಅವರು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕರಡಿ ದಾಳಿ- ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 18. ಜಗತ್ತಿನಲ್ಲಿ ಮಾನವ ಹಾಗೂ ಪ್ರಾಣಿ ಸಂಘರ್ಷ ಇಂದು ನಿನ್ನೆಯದಲ್ಲ. ಆದರೆ, ಇತ್ತೀಚೆಗೆ ಮನುಷ್ಯ ತನ್ನ ಸ್ವಾರ್ಥಕ್ಕೋಸ್ಕರ ಅರಣ್ಯ ಸಂಪತ್ತಿಗೆ ಹೆಚ್ಚು ಹಾನಿ ಉಂಟು ಮಾಡುತ್ತಿದ್ದಂತೆ ಕಾಡು ಪ್ರಾಣಿಗಳು ಊರಿನ ಕಡೆ ಲಗ್ಗೆಯಿಡಲು ಪ್ರಾರಂಭಿಸಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾಗುತ್ತಿದೆ. ಇದರಿಂದ ಸಾರ್ವಜನಿಕರು ಹೈರಾಣಾಗಿ ಹೋಗಿದ್ದಾರೆ. ಅದೇ ರೀತಿ ಇದೀಗ ಕರಡಿಯೊಂದು ವ್ಯಕ್ತಿಯೋರ್ವನ ಮೇಲೆ ದಾಳಿ ನಡೆಸಿ ಭೀಕರ ಗಾಯಗೊಳಿಸಿದ ಘಟನೆ ಮಡಿಕೇರಿಯ ಪೊನ್ನಂಪೇಟೆ ತಾಲೂಕು, ಬಾಳಲೆ

ಕರಡಿ ದಾಳಿ- ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಎಸಿ ಸ್ಫೋಟ- ಕೇರಳದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 18. ಕೊಠಡಿಯಲ್ಲಿನ ಎಸಿ ಸ್ಫೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಮೂಲದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಎರ್ನಾಕುಲಂನ ಪರವೂರ್‌ ಮಂಜಲಿ ನಿವಾಸಿ ಬಶೀರ್ ಅವರ ಪುತ್ರ ಜಿಯಾದ್ ಎಂದು ಗುರುತಿಸಲಾಗಿದೆ.

ಎಸಿ ಸ್ಫೋಟ- ಕೇರಳದ ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ 9 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಜೂ. 18. ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಓಡಿಳ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ದಾಳಿ ಸಂದರ್ಭ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಜೊತೆಗೆ ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778

ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ 9 ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಅಪಘಾತ- ಯುವಕರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತ ದುರ್ದೈವಿಗಳನ್ನು ಕದ್ರಿ‌ ನಿವಾಸಿ ಅಮನ್ ರಾವ್ ಹಾಗೂ ಓಂ ಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಮೋರಿಗೆ ಬಡಿದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಕಾರು ಅಪಘಾತ- ಯುವಕರಿಬ್ಬರು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.  ಈ ಕುರಿತು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಫರ್ವೀಜ್‌ ಎಂಬವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ   ವರದಿಯ ಪ್ರಕಾರ, ಫರ್ವಿಜ್‌ ಅವರು ತಮ್ಮ ಲಾರಿಗೆ ಅಸಾಸುದ್ದೀನ್‌ ಫೈರೋಜ್‌ ಎಂಬಾತನನ್ನು ಚಾಲಕನಾಗಿ ನೇಮಿಸಿದ್ದರು. ಮಾ. 29 ರಂದು ಸರಕು ಸಾಗಾಟದ ಉದ್ದೇಶಕ್ಕೆಂದು ಲಾರಿಯನ್ನು ಚಾಲಕ ಪಡೆದಿದ್ದು, ನಂತರ ಲಾರಿಯಾಗಲಿ,

ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅನ್ಯ ವ್ಯಕ್ತಿ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ನೀಚ ತಂದೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 14. ಬೇರೊಬ್ಬನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹೆತ್ತ ತಂದೆಯೇ ಮಗಳಿಗೆ ಬಲವಂತ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯು ತಂದೆಯ ಒತ್ತಾಯಕ್ಕೆ ಸಹಕರಿಸದೇ ಇದ್ದಾಗ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ. ನಂತರ ಬಲವಂತವಾಗಿ ರೂಮಿನಲ್ಲಿ ಕೂಡಿ ಹಾಕಿ, ತಾನು ಹೇಳಿದಂತೆ ಮಾಡದಿದ್ದರೆ ಊಟ ತಿಂಡಿ ಕೊಡುವುದಿಲ್ಲ ಎಂದು ಬೆದರಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಬಾಲಕಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು,

ಅನ್ಯ ವ್ಯಕ್ತಿ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ನೀಚ ತಂದೆ- ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..!

(ನ್ಯೂಸ್ ಕಡಬ) newskadaba.com ಜೂ. 14. ಒಂದು ದಿನದ ನವಜಾತ ಹಸುಗೂಸೊಂದು ಆಸ್ಪತ್ರೆಯಲ್ಲೇ ಕಳ್ಳತನವಾಗಿರುವ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮಾಬೂಬು ಎಂಬವರ ಒಂದು ದಿನದ ಮಗುವನ್ನು ನರ್ಸ್ ಸೋಗಿನಲ್ಲಿ ಬಂದ ಕಳ್ಳಿಯೊಬ್ಬಳು ಮಗುವಿಗೆ ಕಫ ಇದೆ ನಾನು ಅದನ್ನು ತೆಗೆದುಕೊಂಡು ಬರುತ್ತೇನೆಂದು ಹೇಳಿ ಹೋದವರು ಮತ್ತೆ ಬಾರದೇ ಮಗುವನ್ನು ಕದ್ದೊಯ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಂಟೇನರ್ ಲಾರಿಗೆ ಬೆಂಕಿ ತಗುಲಿ 10ಕ್ಕೂ ಅಧಿಕ ಫ್ರಿಡ್ಜ್ ಗಳಿಗೆ ಹಾನಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ರೆಫ್ರಿಜರೇಟರ್ ಸಾಗಿಸುತ್ತಿದ್ದ ಕಂಟೈನರ್ ಲಾರಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಘಟನೆ ಕಾಸರಗೋಡು – ಕಾಞಾಂಗಾಡ್ ರಾಜ್ಯ ಹೆದ್ದಾರಿಯ ಕೂವತ್ತೊಟ್ಟಿ ಎಂಬಲ್ಲಿ ನಡೆದಿದೆ. ಲಾರಿಯ ಮೇಲ್ಭಾಗಕ್ಕೆ ವಿದ್ಯುತ್ ತಂತಿ ತಗಲಿದ ಪರಿಣಾಮ ಬೆಂಕಿ ತಗಲಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ನೊಳಗಿದ್ದ ಹತ್ತಕ್ಕೂ ಅಧಿಕ ರೆಫ್ರಿಜರೇಟರ್ ಭಾಗಶಃ ಹಾನಿಗೊಳಗಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾದರು.

ಕಂಟೇನರ್ ಲಾರಿಗೆ ಬೆಂಕಿ ತಗುಲಿ 10ಕ್ಕೂ ಅಧಿಕ ಫ್ರಿಡ್ಜ್ ಗಳಿಗೆ ಹಾನಿ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ- ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಹೊತ್ತಿ ಉರಿದ ಘಟನೆ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗದಲ್ಲಿ ನಡೆದಿದೆ. ಗುಜಿರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ಆವರಿಸಿಕೊಂಡಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಬೆಂಕಿಯಿಂದಾಗಿ ಸೊತ್ತು ಹಾನಿಯಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಹರಸಾಹಸ

ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ- ಅಪಾರ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top