ಕ್ರೈಮ್ ನ್ಯೂಸ್

ತೆರೆದ ಬಾವಿಗೆ ಬಿದ್ದು ಎರಡು ಸಿಂಹಗಳು ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ಜ.07.  ತೆರೆದ ಬಾವಿಗೆ 5 ವರ್ಷ ಗಂಡು ಸಿಂಹ ಮತ್ತು 9 ವರ್ಷದ ಹೆಣ್ಣು ಸಿಂಹ ಬಿದ್ದು ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯಲ್ಲಿ  ವರದಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಖಂಭ  ತಾಲೂಕಿನ ಕೊಟ್ಟಾ ಗ್ರಾಮದ ರೈತರೊಬ್ಬರಿಗೆ ಸೇರಿದ ಬಾವಿಗೆ ಸಿಂಹಗಳೆರಡು ಆಕಸ್ಮಿಕವಾಗಿ ಬಿದ್ದು ಮುಳುಗಿ ಮೃತಪಟ್ಟಿವೆ ಎಂದು ಗಿರ್ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ದೀಪ್ ಸಿಂಗ್ ಜಾಲಾ ಹೇಳಿದರು .

ತೆರೆದ ಬಾವಿಗೆ ಬಿದ್ದು ಎರಡು ಸಿಂಹಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.07.  ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಪರಿಚಯಿಸಿದ ಸುಮಾರು ಆರು ತಿಂಗಳ ನಂತರ, ರಾಹುಲ್ ಗಾಂಧಿ ಅವರು ಯೋಜನೆಯ ಬಗ್ಗೆ ಟೀಕೆ ಮುಂದುವರಿಸಿದ್ದು, ಇದಕ್ಕೆ ಬಿಜೆಪಿ ಅವರನ್ನು “ಸೇನಾ ವಿರೋಧಿ” ಎಂದು ಆರೋಪಿಸಿದೆ ಎನ್ನಲಾಗಿದೆ. ತಮ್ಮ ಭವಿಷ್ಯ ಹಾಳಾಗಿದೆ ಎಂದು ಸೇನೆಯ ಯುವ ಅಭ್ಯರ್ಥಿಗಳು ತಮ್ಮ ಬಳಿ ನೋವು ತೋಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.  ಪಾಣಿಪತ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ “ಮೊದಲು ಅಗ್ನಿಪಥ್ ಯೋಜನೆ ಏನೆಂದು ನನಗೆ ಅರ್ಥ

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಗದಗ, ಜ.07.  ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದೆ. ಬಾಳೆ ಬೆಳೆ ಬಂದಿದ್ದರೆ ರೈತರನಿಗೆ ಲಾಭದಾಯಕವಾಗುತ್ತಿತ್ತು. ಆದ್ರೆ ಆಕಸ್ಮಿಕ ಬೆಂಕಿದೆ ಜಮೀನಲ್ಲಿ ಬಾಳೆ ಸುಟ್ಟು ಕರಕಲಾಗಿ ಬಿಟ್ಟಿದ್ದು, ಬಾಳೆ ಬೆಳೆ ಹಾನಿ ಕಂಡು ಅನ್ನದಾತರ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಕಸ್ಮಿಕ ಬೆಂಕಿ‌ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಾಳೆ ಬೆಳೆ ನಾಶವಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದಲ್ಲಿ ವರದಿಯಾಗಿದೆ. ದತ್ತಾತ್ರೆಯ ಕಟ್ಟಿಮನಿ ರವರ ಎರಡುವರೆ

ಅನ್ನದಾತನ ಬಾಳಲ್ಲಿ ಬಂಗಾರವಾಗಬೇಕಿದ್ದ ಬಾಳೆ ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ

 (ನ್ಯೂಸ್ ಕಡಬ) newskadaba.com ಕಲಬುಲಗಿ, ಜ.07.   ಆಳಂದ ಚೆಕ್ ಪೋಸ್ಟ್ ಹತ್ತಿರದಲ್ಲಿ ಶನಿವಾರ ಮಧ್ಯಾಹ್ನ ಜೀಪಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಚನ್ನವೀರ ಎಂದು ಗುರುತಿಸಲಾಗಿದೆ. ಇವರು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಂತೋಷ ಪಾಟೀಲ್ ದಣ್ಣೂರ ಅವರ ಸಹೋದರರಾಗಿದ್ದಾರೆ.  ಚೆನ್ನವೀರ ಪಾಟೀಲ್ ದಣ್ಣೂರ ಹಾಗೂ ಜೊತೆಗಿದ್ದ ಹುಡುಗನ ಮೇಲೆ ಫೈರಿಂಗ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೊಲೆರೋ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಚನ್ನವೀರ ಕೈಗೆ

ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್..

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.07. ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ.  ಸೈಕಲ್​ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಕಾರು ಹರಿದಿದೆ. ಕಾರು ಚಾಲಕ ಅಪ್ರಾಪ್ತೆ ಕಾರಿನಡಿ ಸಿಲುಕಿರುವುದು ತಿಳಿದಿದ್ದರೂ ಕೆಲದೂರದವರೆಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಪರಿಣಾಮ ಚಕ್ರದಡಿ ಸಿಲುಕಿದ ಅಪ್ರಾಪ್ತೆಯನ್ನ ಕಾರು ಕೆಲದೂರ ಎಳೆದೊಯ್ದಿದೆ. ಅಪ್ರಾಪ್ತ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಕಾರು ಚಾಲಕನಿಗೆ

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಹುಬ್ಬಳ್ಳಿ, ಜ.07.  ಕೆರೆಯಲ್ಲಿ ತಾಯಿ ಮಕ್ತುಂಬಿ (38),ಮಗಳು ಸೈನಾಜ್ ( 16) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ತಾಯಿ ಮಗಳನ್ನ ಕಳೆದುಕೊಂಡು‌ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇಬ್ಬರ ಸಾವಿಗೆ ಮಕ್ತುಂಬಿ ಗಂಡನೇ ಕಾರಣ, ಯಾವಾಗಲೂ ಅನುಮಾನ ಪಡುತ್ತಿದ್ದ, ಅವನೇ ಕೊಲೆ ಮಾಡಿ ಕೆರೆಗೆ ಬೀಸಾಕಿದ್ದಾನೆ ಎಂದು ಮಕ್ತುಂಬಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಬುಸಾಬ್ ಹಾಗೂ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.   86 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಬಂದ ಶಿಕ್ಷಕ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಯಲ್ಲಿ ವರದಿಯಾಗಿದೆ. ಮೃತ ಶಿಕ್ಷಕನನ್ನು ಸಂಗನಗೌಡರ (34) ಎಂದು ಗುರುತಿಸಲಾಗಿದೆ. ಹಾವೇರಿಯ ಅಶ್ವಿನಿ ನಗರದ ಗೆಳಯರ ಬಳಗ ಶಾಲೆಯಲ್ಲಿ ಶಿಕ್ಷಕ  ಸಂಗನಗೌಡರ ವಾಸ್ತವ್ಯ ಹೂಡಿದ್ದರು, ಹೃದಯಾಘಾತವಾದ  ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಅದ್ರೆ ಚಿಕಿತ್ಸೆ ಫಲಿಸದೆ ಶಿಕ್ಷಕ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಶಿಕ್ಷಕ ಸಂಗನಗೌಡರವರು ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆಯ ಮತ್ತಿಕೇರಿ

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07.  ಮೈಸೂರುನಿಂದ ಕೇರಳಕ್ಕೆ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಸರಗೊಂಡಿನಲ್ಲಿ ವರದಿಯಾಗಿದೆ. ಘಟನೆಯಿಂದ ಗಾಯಗೊಂಡವರನ್ನು ಪೂಡಂಕಲ್ಲು ತಾಲೂಕಿನ ಆಸ್ಪತ್ರೆ ಹಾಗೂ ಕಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ  ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬ್ಬಂದಿಗಳು ಕೇರಳದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ 49 ಮಂದಿ

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಜ.07. ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಯುವತಿಯನ್ನು ಪೆರುಂಬಳಾದ ಅಂಜು ಶ್ರೀಪಾರ್ವತಿ (20)  ಎಂದು ಗುರುತಿಸಲಾಗಿದೆ. ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡು ಅಸ್ವಸ್ತಗೊಂಡ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯ ಪೋಷಕರು ನೀಡಿರುವ ದೂರಿನ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top