ಕ್ರೈಮ್ ನ್ಯೂಸ್

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!    

(ನ್ಯೂಸ್ ಕಡಬ)newskadaba.com  ಹಾಸನ, ಜ.07. ಬೆಳಗಿ ಹಳ್ಳಿ ಗೇಟ್ ಬಳಿ ಬೈಕ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ  ಎಂದು ವರದಿಯಾಗಿದೆ. ಅಪಘಾತದಲ್ಲಿ ಸುನಿಲ್‌ (23) ಮತ್ತು ಪತ್ನಿ ದಿವ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದ್ದು, ಎಂಟು ವರ್ಷದ ಮಗ ಅಜಿತ್‌ ಮತ್ತು ಪುಟ್ಟ ಮಗಳು ಗಾಯಗೊಂಡಿದ್ದರು. ಇಬ್ಬರು ಮಕ್ಕಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗಾಯಗೊಂಡಿದ್ದ ಎಂಟು ವರ್ಷದ ಬಾಲಕ ಅಜಿತ್ ಚಿಕಿತ್ಸೆ ಫಲಿಸದೆ […]

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಭರಣ ಕಳುವಾಗಿದೆ ಎಂದು ದೂರು ನೀಡಿದ್ದ ಮಹಿಳೆಯೇ ಕಳ್ಳಿ..!

 (ನ್ಯೂಸ್ ಕಡಬ) newskadaba.com ಬೇತಮಂಗಲ, ಜ.07.  ಮದುವೆ ಆಮಂತ್ರಣ ಕೊಡುವ ನೆಪದಲ್ಲಿ ಬಂದ ಇಬ್ಬರು ಮಹಿಳೆಯರು ಮನೆಯವರನ್ನೆಲ್ಲಾ ಪ್ರಜ್ಞೆ ತಪ್ಪಿಸಿ 200 ಗ್ರಾಂ ಆಭರಣ ದೋಚಿದ್ದರು ಎಂದು ದೂರು ದಾಖಲಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಬೇತಮಂಗಲ ಪಟ್ಟಣದ 2ನೇ ಬ್ಲಾಕ್ ನಿವಾಸಿ ನೂರ್ ಅಮೀನ್ ಎಂಬಲ್ಲಿ ವರದಿಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಣಿದೇವಿ ಮಾಲಗತ್ತಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಶ್ವಾನದಳ ಸೇರಿದಂತೆ ಇತರ ವಿಶೇಷ ಪೊಲೀಸ್ ತಂಡಗಳು ಪರಿಶೀಲನೆ

ಆಭರಣ ಕಳುವಾಗಿದೆ ಎಂದು ದೂರು ನೀಡಿದ್ದ ಮಹಿಳೆಯೇ ಕಳ್ಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ಮಾಗಡಿ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ತಮ್ಮ ನಾಯಿಯನ್ನು ಕಚ್ಚಿದ್ದಕ್ಕೆ ಇಬ್ಬರು ಸೇರಿ ಇನ್ನೊಂದು ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರುದಾರರ ನಾಯಿಯು ಆರೋಪಿಗಳಲ್ಲಿ ಒಬ್ಬನ ನಾಯಿಯನ್ನು ಕಚ್ಚಿದೆ ಎಂದು ಹೇಳಲಾಗಿದ್ದು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಆದರೆ, ಆರೋಪಿಗಳು ನಾಯಿಗೆ ತಕ್ಕ ಪಾಠ ಕಲಿಸಬೇಕೆಂದುಕೊಂಡಿದ್ದಾರೆ. ನಂತರ ಆರೋಪಿಗಳಿಬ್ಬರು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಆರೋಪಿಗಳಿಬ್ಬರ ವಿರುದ್ಧ ಶಸ್ತ್ರಾಸ್ತ್ರ

ಕ್ಷುಲ್ಲಕ ಕಾರಣಕ್ಕೆ ನಾಯಿಯನ್ನು ಶೂಟ್ ಮಾಡಿ ಕೊಂದ ಪಾಪಿಗಳು ➤ಇಬ್ಬರು ಆರೋಪಿಗಳು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಜ. 06. ಮೀನುಗಾರಿಕೆ ನಡೆಸಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ವಿಟ್ಲ ಮೂಲದ ಮೀನುಗಾರನ ಮೃತದೇಹವು ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತರನ್ನು ವಿಟ್ಲ ಪೆರುವಾಯಿ ಮೂಲದ ಆನಂದ ಎಂದು ಗುರುತಿಸಲಾಗಿದೆ. ಇವರು ಜ. 04 ರಂದು ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು      

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಇಲ್ಲಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿರುವುದಾಗಿ ತಿಳಿದುಬಂದಿದೆ. ಬೆಂಗಳೂರಿನ ರಾಜಾಜಿನಗರದ ಎನ್.​ಪಿ.ಎಸ್ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಾಲಾ ಆವರಣದಲ್ಲಿ

NPS ಶಾಲೆಯಲ್ಲಿ ಬಾಂಬ್ ಭೀತಿ  ➤ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆ, ಶ್ವಾನ ದಳ ಸಿಬ್ಬಂದಿಗಳು       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜ. 06. ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರಂ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ (48), ಪತ್ನಿ ಸುಲಜಾ ಕುಮಾರಿ (46) ಮತ್ತು ಪುತ್ರಿ ರೇಷ್ಮಾ (23) ಎಂದು ಗುರುತಿಸಲಾಗಿದೆ. ರಮೇಶನ್ ಎಂಬವರು ವಿವಿಧ ಉದ್ದೇಶಗಳಿಗಾಗಿ ಖಾಸಗಿ ವ್ಯಕ್ತಿಗಳಿಂದ 12 ಲಕ್ಷ ರೂ. ಸಾಲ ಮಾಡಿದ್ದು, ಬಡ್ಡಿ ಸೇರಿ 40 ಲಕ್ಷ ರೂಪಾಯಿ ಕಟ್ಟುವಂತೆ ಒತ್ತಾಯಿಸಲಾಗಿತ್ತು. ಆಸ್ತಿ, ಮನೆ ಮಾರಿ ಸಾಲ ತೀರಿಸಲು ಯತ್ನಿಸಿದರೂ 

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!! Read More »

ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!!

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.06. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಈ ಕುರಿತು ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಅವರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಲಾರಿ ಮತ್ತು ಸ್ಕೂಟರ್ ಢಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಕೇರಳದ ಕಾಸರಗೋಡು

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!!

(ನ್ಯೂಸ್ ಕಡಬ) newskadaba.com  ಭೋಪಾಲ್, ಜ.06. ತರಬೇತಿ ವೇಳೆ ಲಘು ವಿಮಾನವೊಂದು ದೇವಾಸ್ಥಾನದ ಮೇಲಿನ ಗರ್ಭಗುಡಿಗೆ ಢಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂಧರ್ಭದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಎಂಬಲ್ಲಿ ಸಂಭವಿಸಿರುವುದಾಗಿ ವರದಿಯಾಗಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿರುವ ದೇವಸ್ಥಾನದ ಗರ್ಭಗುಡಿಯ ಶಿಖರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಇನ್ ಸ್ಟಾಗ್ರಾಂ ಪರಿಚಯ – ಅನ್ಯಕೋಮಿನ ಯುವಕನ ಭೇಟಿಗೆ ಬಂದ ಯುವತಿ ➤ ಯುವಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 06. ಇನ್ ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಹಿಂದೂ ಯುವತಿಯನ್ನು ಅನ್ಯಕೋಮಿನ ಯುವಕನೋರ್ವ ಭೇಟಿಯಾಗಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ವರದಿಯಾಗಿದೆ. ಇನ್ ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಕಲ್ಲುಗುಂಡಿಯ ಅನ್ಯಕೋಮಿನ ಯುವಕ ಮತ್ತು ಸುಬ್ರಮಣ್ಯದ ಹಿಂದೂ ಯುವತಿ ಹಲವು ದಿನಗಳ ಕಾಲ ಫೋನ್ ಮೂಲಕ ಮಾತನಾಡುತ್ತಿದ್ದು, ಭೇಟಿಯಾಗಲು ಪ್ಲಾನ್ ಮಾಡಿ, ಅದರಂತೆ ಸುಬ್ರಹ್ಮಣ್ಯ ಬಸ್ ಸ್ಟಾಂಡ್ ನಲ್ಲಿ ಭೇಟಿಯಾಗಿದ್ದರು. ಈ ವಿಚಾರ ತಿಳಿದ ಗುಂಪೊಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಪರಿಣಾಮ ಯುವಕನ ತಲೆ

ಸುಬ್ರಹ್ಮಣ್ಯ: ಇನ್ ಸ್ಟಾಗ್ರಾಂ ಪರಿಚಯ – ಅನ್ಯಕೋಮಿನ ಯುವಕನ ಭೇಟಿಗೆ ಬಂದ ಯುವತಿ ➤ ಯುವಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಲಾರ, ಜ. 06. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಮನೆಯವರು ಈತನಿಗೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಕೊಡುವಂತೆ ಬುದ್ದಿವಾದ ಹೇಳಿದ್ದರಿಂದ ಮನನೊಂದು ಬಾಲಕ ವಿಷ ಸೇವಿಸಿದ್ದು, ಕೂಡಲೇ ಉದಯ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು

ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top