ಕ್ರೈಮ್ ನ್ಯೂಸ್

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ದೆಹಲಿಯ ಕಾಂಜಾವಾಲಾ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಕಾರಿನ ಮಾಲೀಕನಾಗಿರುವ ಆಶುತೋಷ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ. “ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ […]

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!           

(ನ್ಯೂಸ್ ಕಡಬ) newskadaba.com ಗಜಿಯಾಬಾದ್, ಜ. 05. ನಾಪತ್ತೆಯಾಗಿದ್ದ ಇಬ್ಬರು ಬಾಲ್ಯ ಸ್ನೇಹಿತರು 800 ಮೀಟರ್ ಅಂತರದ ಎರಡು ಜಮೀನಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಿಲಾ ಮೋರ್ ಎಂಬಲ್ಲಿ ವರದಿಯಾಗಿದೆ. ಮೃತರನದನು ಗೌರವ್ ಮತ್ತು ದುರ್ಗೇಶ್ ಎಂದು ಗುರುತಿಸಲಾಗಿದೆ. ಎರಡೂ ಮೃತದೇಹದ ಮುಖಗಳು ಆ್ಯಸಿಡ್‌ನಿಂದ ಭಾಗಶಃ ಸುಟ್ಟುಹೋಗಿದ್ದವು ಎನ್ನಲಾಗಿದೆ. ಗೌರವ್ ಮತ್ತು ದುರ್ಗೇಶ್ ತಮ್ಮ ಮನೆಯಿಂದ ಭೋಪುರಕ್ಕೆ ಹೋಗಲು ನೆರೆಹೊರೆಯವರ ಬೈಕನ್ನು ಪಡೆದಿದ್ದು, ಬೈಕ್‌ನಲ್ಲಿ ತೆರಳಿದ್ದ ಇಬ್ಬರ ಪೋನ್ ಆ ಬಳಿಕ ಸ್ವಿಚ್ಢ್ ಆಫ್ ಆಗಿತ್ತು. ಬಳಿಕ

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 05. ವಿದ್ಯುತ್ ಸರ್ಕ್ಯೂಟ್ ನಿಂದಾಗಿ ಟೈಲರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು  ಕರಕಲಾದ ಘಟನೆ ಚಾಮರಾಜನಗರ ಪಟ್ಟಣದ ಸಂತೇಮರಳ್ಳಿ ವೃತ್ತದ ಸಮೀಪವಿರುವ ಜಾಮಿಯಾ ಮಸೀದಿ ಬಳಿ ನಡೆದಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಟೈಲರ್ ಮೆಷಿನ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಡಿ ದಾಳಿ- ರೈತನಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಜ.05. ರೈತನೋರ್ವನ ಮೇಲೆ ಕರಡಿಯೊಂದು ದಾಳಿ ಮಾಡಿದ ಪರಿಣಾಮ ರೈತ ಗಾಯಗೊಂಡ ಘಟನೆ ಕಾಕುಬಾಳ ಗ್ರಾಮದ ಹೊರವಲಯದ ಬಳಿ ವರದಿಯಾಗಿದೆ. ಗಾಯಗೊಂಡವರನ್ನು ಮೂಷ್ಟರಪ್ಪ (58) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಹೊಲಕ್ಕೆ ಹೋಗಿದ್ದ ಸಂದರ್ಭ ಕರಡಿಯೊಂದು ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಈ ಕುರಿತು ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಡಿ ದಾಳಿ- ರೈತನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 05. ಹಳೆ ವೈಷಮ್ಯದ ಹಿನ್ನೆಲೆ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿಯ ಭವಾನಿ ನಗರದಲ್ಲಿ ವರದಿಯಾಗಿದೆ. ಕೊಲೆಯಾಗಿರುವ ಯುವಕನನ್ನು ಪ್ರಶಾಂತ್ ಕುಂಬಾರ (30) ಎಂದು ಗುರುತಿಸಲಾಗಿದೆ. ಹಲ್ಲೆ ಆರೋಪಿಯನ್ನು  ಮಂಜುನಾಥ ಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದ್ದು, ಈ ಬಗ್ಗೆ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ಜ. 05. ಶವಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಪಟ್ಟಣದ ಕಾರಡಗಿ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಚಾಲಕ ಮುಸ್ತಾಕ್ ಅಹಮದ್ ಚೀಲಪಟೇದ (27), ಲಾಲ್ ಸಾಬ್ ಬುಡ್ಡಿಮನಿ (62), ಮೆಹಬೂಸಾದ್ ಕುಂದಗೋಳ (52), ರಹಬ್ಬಾನಿ ಹವಾಲ್ದಾರ್ (52) ಎಂದು ಗುರುತಿಸಲಾಗಿದೆ. ಇವರು ಕುಂದಗೋಳ ತಾಲೂಕಿನ ಕಮಡೊಳ್ಳಿ ಸವಣೂರು ಮಾರ್ಗವಾಗಿ ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮಕ್ಕೆ

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                  

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05. ವಿಧಾನಸೌಧದಲ್ಲಿ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಸುಮಾರು 10.50 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ  ಬೆಂಗಳೂರಿನಲ್ಲಿ ವರದಿಯಾಗಿದೆ. ವಿಧಾ‌ಸೌಧದ ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಓರ್ವ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಈತನ ಬಳಿ ಹಣದ ಮೂಲದ ಕುರಿತು ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ನೀಡದೇ ಇದ್ದ ಹಿನ್ನೆಲೆ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು,

ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ  ➤ ಓರ್ವನ ಬಂಧನ..!!!                                   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಥಾಣೆ, ಜ. 05.    ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಮಾಲ್ ಬಳಿ ವರದಿಯಾಗಿದೆ. ಮೃತ ಮಹಿಳೆಯನ್ನು ಸುನೀತಾ ಕಾಂಬಳೆ (37) ಎಂದು ಗುರುತಿಸಲಾಗಿದೆ. ಪಿಲ್ಲರ್‌ ನಿರ್ಮಾಣಕ್ಕೆಂದು ಅಗೆದ ಹೊಂಡದ ಸಮೀಪ ಈ ಅವಘಡ ಸಂಭವಿಸಿದ್ದು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಆರ್‌ಡಿಎಂಸಿಯ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಹೊಂಡದಿಂದ ಹೊರತೆಗೆದಿದ್ದಾರೆ.

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಭಟ್ಕಳ, ಜ. 05. ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ  ಗಾಯಗೊಂಡ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಭಟ್ಕಳ ತಾಲೂಕಿನ ನೂಜ್ ಕೆಕ್ಕೋಡ ನಿವಾಸಿ ದುರ್ಗು ಮರಾಠಿ (37) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಜಗುಲಿಯಲ್ಲಿ ಮಲಗಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಅವರ ಕೈಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದ ವ್ಯಕ್ತ ಕಿರುಚಿಕೊಂಡಿದ್ದು, ಜನರು ಬರುತ್ತಿದ್ದಂತೆಯೇ ಚಿರತೆ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಆರ್‌ಎಫ್‌ಒ ಶರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು        

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ,  ಜ. 05. ಯುವಕನಿಗೆ ಚೂರಿಯಿಂದ ಇರಿದಿರುವ ಕುರಿತು ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ಚೂರಿಯಿಂದ ಇರಿತಕ್ಕೊಳಗಾದವರನ್ನು ತೌಸೀಫ್ ಸಗೀರ್ ಅಹ್ಮದ್ ಮುಲ್ಲಾ (32)  ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಆತನನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಶಾಲ್  ಹಾಗೂ ಪ್ರಮೋದ್ ಎಂಬವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಕೃತ್ಯ ನಡೆದಿದೆ ಎಂದು ವರದಿಯಾಗಿದೆ.  

ಯುವಕನಿಗೆ ಚೂರಿಯಿರಿತ ➤ ಗಾಯಾಳು ಆಸ್ಪತ್ರೆಗೆ ದಾಖಲು         Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top