ಕ್ರೈಮ್ ನ್ಯೂಸ್

➤ ಗಡಿ ಪ್ರವೇಶಿಸಿದ ಪಾಕ್‌ ನುಸುಳುಕೋರನ ಹತ್ಯೆ..!

ನ್ಯೂಸ್ ಕಡಬ) newskadaba.com. ನವದೆಹಲಿ  ಜ. 03 ಗಡಿ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಒಳನುಸುಳುಕೋರನನ್ನು ಇಂದು ಬೆಳಗ್ಗೆ 8.30 ರ ಸುಮಾರಿಗೆ ಬಿಎಸ್‌ಎಫ್ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುರುದಾಸ್‌ಪುರ ಸೆಕ್ಟರ್‌ನ ಬಾರ್ಡರ್ ಔಟ್‌ಪೋಸ್ಟ್ ಚನ್ನಾ ಅಡಿಯಲ್ಲಿ ಬಿಎಸ್‌ಎಫ್ ಪಡೆಗಳು ಒಳನುಗ್ಗುವವರ ಶಂಕಿತ ಚಲನವಲನವನ್ನು ಗಮನಿಸಿ ಬೇಲಿ ಕಡೆಗೆ ಚಲಿಸುತ್ತಿದ್ದಾಗ ಬಿಎಸ್‌ಎಫ್ ಪಡೆ ಗುಂಡು ಹಾರಿಸಿದೆ ಎಂದು ತಿಳಿದುಬಂದಿದೆ.

➤ ಗಡಿ ಪ್ರವೇಶಿಸಿದ ಪಾಕ್‌ ನುಸುಳುಕೋರನ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com .   ಮೂಲ್ಕಿ, ಜ. 03:  ಬಸ್ ಹರಿದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮೂಲ್ಕಿಯ ಕಿನ್ನಿಗೋಳಿ ಬಳಿಯ ಉಲ್ಲಂಜೆಯಲ್ಲಿ ವರದಿಯಾಗಿದೆ. ಮೃತಬಾಲಕನನ್ನು ಉಲ್ಲಂಜೆಯ ನಿವಾಸಿ ಗಣೇಶ್ ಅವರ ಪುತ್ರ ಚರಣ್ (15) ಎಂದು ಗುರುತಿಸಲಾಗಿದೆ. ಈತ ಶ್ರೀದುರ್ಗಾಪರಮೇಶ್ವರಿ ದೇವಳದ ಪ್ರೌಢಶಾಲೆ 9ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಮೃತಬಾಲಕ ಶಾಲೆ ಬಿಟ್ಟುಮನೆಯತ್ತ ತೆರಳುವಾಗ ಸ್ಕೂಟರ್ ಸವಾರರೊಬ್ಬರಲ್ಲಿ ಲಿಫ್ಟ್ ಕೇಳಿದ್ದು, ಅವರೊಂದಿಗೆ ಸಾಗುವಾಗ ತಿರುವಿನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ  ಬಿದ್ದಿದೆ. ಈ ವೇಳೆ

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಕೊಪ್ಪಳ, ಜ.03. ಆಟೊವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಹಾಗೂ ಆರು ಮಂದಿ ಗಾಯಗೊಂಡ ಘಟನೆ ಕೊಪ್ಪಳ ಸಮೀಪದ ಒಜೋನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಮೃತಪಟ್ಟವರನ್ನು ಅನ್ನಪೂರ್ಣಮ್ಮ (38) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೌಂಡಿ ಕೆಲಸ ಮಾಡುವ ಕಾರ್ಮಿಕರ ಆಟೊದಲ್ಲಿ ತೆರಳುವಾಗ ಪ್ರಾಣಿಯೊಂದು ಅಡ್ಡ ಬಂದಿದ್ದರಿಂದ ಪಲ್ಟಿಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ಜ.03. ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಸಂಭವಿಸಿದೆ. ಮೃತರನ್ನು ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (51) ಎಂದು ಗುರುತಿಸಲಾಗಿದೆ.      ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.    

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!!

(ನ್ಯೂಸ್ ಕಡಬ) newskadaba.com .   ಚೆನ್ನೈ, ಜ. 03:  ಆರು ವಾಹನಗಳ ಸರಣಿ ಅಪಘಾತದಿಂದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ವರದಿಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ವಾಹನದ ಆರ್‌ಸಿ ಪರಿಶೀಲನೆ ವೇಳೆ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ಬೆಳಕಿಗೆ ಬಂದಿದೆ ಎಂದರು. ಎರಡು ಬಸ್‌ಗಳು, ಎರಡು ಟ್ರಕ್‌ಗಳು ಮತ್ತು ಎರಡು

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                   

(ನ್ಯೂಸ್ ಕಡಬ) newskadaba.com  ಪುತ್ತೂರು, ಜ.03. ರಸ್ತೆ ಬದಿ ರಾಶಿ ಹಾಕಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಕುಂಬ್ರ ಕೆ.ಇ.ಬಿ ಕಛೇರಿ ಮುಂಭಾಗ ಸಂಭವಿಸಿದೆ. ಸಾರೆಪುಣಿ ಮೂಲದ ಕುಟುಂಬವೊಂದು ಮಂಗಳೂರಿಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.    

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!!

 (ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜ.03.  ದನಕರುಗಳನ್ನು ಖರೀದಿ ಮಾಡಿದ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ವಾಹನವನ್ನು ಅಡ್ಡಗಟ್ಟಿ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ,ರೂ.51 ಸಾವಿರ ಹಾಗೂ ಏಳು ದನಕರುಗಳನ್ನು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಬಾಗೇಪಲ್ಲಿ ವರದಿಯಾಗಿದೆ. ಬಂಧಿತರನ್ನು ಚಿಂತಮಾಕಲದಿನ್ನೆಯ ನವೀನ್, ಇಂದೋಕೊರೊಳ್ಳಪಲ್ಲಿಯ ಅಭಿ, ಕಲ್ಲಿಪಲ್ಲಿಯ ಮಹೇಶ್, ಸಜ್ಜಲವಾರಿಪಲ್ಲಿಯ ಮಣಿಕಂಠ, ದೇವನಹಳ್ಳಿಯ ಗಣೇಶ್ ಗಾಹೂ ಸುಧಾಕರ್ ಎಂದು ಗುರುತಿಸಲಾಗಿದೆ. ಚಿಂತಾಮಣಿ ತಾಲೂಕಿನ ಭತ್ತಲಪಲ್ಲಿ ಗ್ರಾಮದ ಸುರೇಶ, ಶ್ರೀರಾಮಪ್ಪ, ಶ್ರೀನಿವಾಸ ಎಂಬುವರು

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಸುಂದರಿ ಎಂಬವರು ವಿಷ ಸೇವಿಸಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು   

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.03. ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕೊಣಾಲು ಗ್ರಾಮದ ನಿವಾಸಿ ಚೆನ್ನಮ್ಮ (70) ಎಂದು ಗುರುತಿಸಲಾಗಿದೆ. ಚೆನ್ನಮ್ಮರವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.      

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03.   ಪೊಲೀಸರ ವೇಷದಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಅಡಿಕೆ ಮಂಡಿ ಮಾಲಿಕನ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹೆದರಿಸಿ .80 ಲಕ್ಷ ರೂಪಾಯಿವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ತುಮಕೂರು ಜಿಲ್ಲೆಯ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌(28) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಕಲಿ ಪೊಲೀಸರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top