ಕ್ರೈಮ್ ನ್ಯೂಸ್

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ಜಿಮ್ ಮಾಲಕರೊಬ್ಬರನ್ನು ಶೂಟ್ ಮಾಡಿ ಹತ್ಯೆಗೈದ ಘಟನೆ ದೆಹಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ. ಹತ್ಯೆಯಾದವರನ್ನು ಮಹೇಂದ್ರ ಅಗರ್ವಾಲ್ ಎಂದು ಗುರುತಿಸಲಾಗಿದೆ. ಅಗರ್ವಾಲ್ ಎನರ್ಜಿ ಜಿಮ್, ಸ್ಪಾ ಹಾಗೂ ಜಿಮ್ ಗೆ ಸಂಬಂಧಿಸಿದ ಅಂಗಡಿಯನ್ನು ಹೊಂದಿದ್ದು, ಶುಕ್ರವಾರದಂದು ರಾತ್ರಿ ಎಂಟು ಗಂಟೆಯ ವೇಳೆ ಗನ್ ಹಿಡಿದುಕೊಂಡು ಬಂದ ಅಪರಿಚಿತರು ಶೂಟ್ ಮಾಡಿ ಹತ್ಯೆಗೈದಿದ್ದಾರೆ. ಅಲ್ಲದೇ ಪೊಲೀಸರ ಹಾದಿ ತಪ್ಪಿಸಲು ಘಟನಾ ಸ್ಥಳದಲ್ಲಿನ ಸಿಸಿಟಿವಿಯನ್ನು ದುಷ್ಕರ್ಮಿಗಳು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ.

ಶೂಟ್ ಮಾಡಿ ಜಿಮ್ ಮಾಲೀಕನ ಹತ್ಯೆ ➤ ಪೊಲೀಸರ ಹಾದಿ ತಪ್ಪಿಸಲು ಸಿಸಿಟಿವಿಯನ್ನೇ ಹೊತ್ತೊಯ್ದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.!

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್, ಡಿ. 31. ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಅಮೇರಿಕಾದ ನೆವಡಾ ರಾಜ್ಯದಿಂದ ವರದಿಯಾಗಿದೆ‌. ಮೃತ ಬಾಲಕನನ್ನು ಕ್ಯಾಲಿಫೋರ್ನಿಯಾದ ಐರ್ವಿನ್ ನಲ್ಲಿ ವಾಸವಾಗಿದ್ದ ಆರವ್ ಮುತ್ಯಾಲ ಎಂದು ಗುರುತಿಸಲಾಗಿದೆ. ರಸ್ತೆ ಅಪಘಾತದಲ್ಲಿ ಈತನ ತಲೆಗೆ ಗಂಭೀರ ಗಾಯವಾಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಮೇರಿಕಾದಲ್ಲಿ ರಸ್ತೆ ಅಪಘಾತ ➤ ಭಾರತೀಯ ಮೂಲದ ಮಗು ಮೃತ್ಯು.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 31. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾದ ಪರಿಣಾಮ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ. 28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್ ➤ 9 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನರ್ಸ್ ನಿರ್ಲಕ್ಷ ➤4 ತಿಂಗಳ ಮಗು ಮೃತ್ಯು..!

ನ್ಯೂಸ್ ಕಡಬ) newskadaba.com.ಚಿಕ್ಕಮಂಗಳೂರು,  ಡಿ. 23.  ಚಿಕ್ಕಮಂಗಳೂರು ನರ್ಸ್ ಒಬ್ಬರ ನಿರ್ಲಕ್ಷ್ಯದಿಂದ 4 ತಿಂಗಳ ಮಗು ಮೃತಪಟ್ಟಿರುವ ಘಟನೆ ಚಿಕ್ಕಮಂಗಳೂರು ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಹಾಸನದ ಬೇಲೂರು ಸಮೀಪದ ಸೂರಾಪುರ ಗ್ರಾಮದ ಗೋಪಾಲ್ ಹಾಗೂ ಮೀನಾಕ್ಷಿ ದಂಪತಿಯ 4 ತಿಂಗಳ ಮಗು ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದೆ.  ವೈದ್ಯರು ಮತ್ತು ನರ್ಸ್  ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರ್ಸ್ ನಿರ್ಲಕ್ಷ ➤4 ತಿಂಗಳ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರ ಹಾಗೂ ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 30. ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಅಂಡಾರು ಗ್ರಾಮದ ಕೊಂದಲ್ಕೆ ನಿವಾಸಿ ನಿತ್ಯಾನಂದ ಕುಲಾಲ್( 32) ಹಾಗೂ ಅವರೊಂದಿಗೆ ಇದ್ದ ಮೂರು ವರ್ಷದ ಮಗು ಕೂಡ ಗಂಭೀರ ಗಾಯಗೊಂಡಿದೆ. ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿತ್ಯಾನಂದೆವರು ತನ್ನ ಸಹೋದರಿಯ ಮಗುವನ್ನು ಬೈಕ್‌

ಕಾರು- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರ ಹಾಗೂ ಮಗು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳಿಗೆ ಮಧುಮೇಹ ಖಾಯಿಲೆ ➤ ಮಕ್ಕಳನ್ನು ನದಿಗೆಸೆದು ದಂಪತಿ ಆತ್ಮಹತ್ಯೆ

(ನ್ಯೂಸ್  ಕಡಬ) newskadaba.com ಚೆನ್ನೈ, ಡಿ. 30. ಮಧುಮೇಹ ಅಥವಾ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ದಂಪತಿ ತಮ್ಮಿಬ್ಬರು ಅಪ್ರಾಪ್ತ ಮಕ್ಕಳನ್ನು ನದಿಗೆ ದೂಡಿ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಮೃತರನ್ನು ಯುವರಾಜ್ (41), ಅವರ ಪತ್ನಿ ವನ್ವಿಜಿ (38) ಮತ್ತು ಅವರ ಮಕ್ಕಳಾದ ನಿತಿಶಾ (7), ಅಪ್ಸರಾ (4) ಎಂದು ಗುರುತಿಸಲಾಗಿದೆ. ದನ ಮೇಯಿಸುವವರು ನದಿಯಲ್ಲಿ ನಾಲ್ಕು ಶವ ತೇಲುತ್ತಿರುವುದನ್ನು ನೋಡಿ ಆತಂಕಗೊಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಸ್ಥಳೀಯ ಈಜುಗಾರರ ನೆರವಿನಿಂದ ಪೊಲೀಸರು

ಮಕ್ಕಳಿಗೆ ಮಧುಮೇಹ ಖಾಯಿಲೆ ➤ ಮಕ್ಕಳನ್ನು ನದಿಗೆಸೆದು ದಂಪತಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನೆ ದಾಳಿ- ಮಹಿಳೆ ಮೃತ್ಯು..!

(ನ್ಯೂಸ್  ಕಡಬ) newskadaba.com ಹುಣಸೂರು, ಡಿ. 30. ಮಹಿಳೆಯ ಮೇಲೆ ಒಂಟಿ ಸಲಗವೊಂದು ದಾಳಿ ನಡೆಸಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಯಜಮಾನ ಸಿದ್ದೇಗೌಡರ ಪತ್ನಿ ಚಿಕ್ಕಮ್ಮ (57) ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ ಎನ್ನಲಾಗಿದೆ. ಸ್ಥಳಕ್ಕೆ ಶಾಸಕ ಜಿ.ಟಿ.ದೇವೆಗೌಡ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಆನೆಯನ್ನು ಶೀಘ್ರವಾಗಿ ಹಿಡಿಯುಂತೆ

ಆನೆ ದಾಳಿ- ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..!

(ನ್ಯೂಸ್  ಕಡಬ) newskadaba.com ಉಳ್ಳಾಲ, ಡಿ. 30. ತಲೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಆಶ್ವಿತ್ ಎಂದು ಗುರುತಿಸಲಾಗಿದೆ. ಉಚ್ಚಿಲ ಬೋವಿ ಆಂಗ್ಲ ಮಾಧ್ಯಮದಲ್ಲಿ ಆರನೇ ತರಗತಿ ಓದುತ್ತಿದ್ದ ಬಾಲಕ ಮೆದುಳು ಜ್ವರದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮೃತ ಬಾಲಕನ ತಂದೆ ಎರಡು ವರ್ಷಗಳ ಹಿಂದೆ ಅವಘಡವೊಂದರಲ್ಲಿ ಮೃತಪಟ್ಟಿದ್ದರು. ಆಶ್ವಿನ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿಗೆ ಪಾತ್ರನಾಗಿದ್ದ ಎಂದು ತಿಳಿದು ಬಂದಿದೆ.  

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 30. ವ್ಯಕ್ತಿಯೊಬ್ಬರಿಗೆ ಪರಿಚಿತ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಮ್ದೇಲು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿತೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಅವರಿಗೆ ಲೋಕೇಶ್, ರೋಷನ್, ಸುಜಿತ್ ಹಾಗೂ ಸುಮಂತ್ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳೆಲ್ಲ ನಿತೇಶ್ ಅವರಿಗೆ ಪರಿಚಿತರಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ವ್ಯಕ್ತಿಗೆ ಪರಿಚಿತ ಗ್ಯಾಂಗ್ ನಿಂದ ಹಲ್ಲೆ ➤ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಕಲ್ಲು ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸರೋಜ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಕುಟುಂಬಸ್ಥರು ಮಂಜುನಾಥ್ ಬಾಳಪ್ಪ ಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಪ್ಪ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ ಹಾಗೂ ಕಾಶಿನಾಥ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆದರೆ ಪ್ರಮುಖ

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top