ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.    

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 27. ಮೀನು ಹಿಡಿಯಲೆಂದು ಹೋಗಿ ನೇತ್ರಾವತಿ ನದಿಯಲ್ಲಿ ಡಿ. 26ರಂದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಮೊಗ್ರು ದಂಡುಗ ನಿವಾಸಿ ಜನಾರ್ಧನ ಎಂದು ಗುರುತಿಸಲಾಗಿದೆ. ಜನಾರ್ಧನ ಹಾಗೂ ಮಹೇಶ್ ಎಂಬವರು ಮುಗೇರಡ್ಕದ ಕಾಮಗಾರಿ ಹಂತದ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲೆಂದು ಹೋಗಿದ್ದ ಸಂದರ್ಭ ಜನಾರ್ಧನ ರವರು ನೀರುಪಾಲಾಗಿದ್ದರು. ಆದರೆ ಜೊತೆಗಿದ್ದ ಮಹೇಶ್ ವಿಷಯ ಯಾರಿಗೂ ತಿಳಿಸದೇ ತನ್ನ ಪಾಡಿಗೆ ವಾಪಸ್ ಬಂದಿದ್ದರು.

ನೆಲ್ಯಾಡಿ: ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಡಿ. 27. ಒಂದು ವರ್ಷದ ಹೆಣ್ಣು ಮಗುವಿನ ಗಂಟಲಲ್ಲಿ ಚಾಕಲೇಟ್ ಸಿಲುಕಿ‌ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸತಾರದಲ್ಲಿ ವರದಿಯಾಗಿದೆ. ಮೃತಪಟ್ಟ ಮಗುವನ್ನು ಶಾರ್ವರಿ ಸುಧೀರ್ ಜಾಧವ್ ಎಂದು ಗುರುತಿಸಲಾಗಿದೆ. ಮಗು ಚಾಕೊಲೇಟ್​ ನುಂಗಿ ಒದ್ದಾಡಿ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದು, ಇದನ್ನು ಕಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಕುಟುಂಬದ ರೋಧನ ಮುಗಿಲು ಮುಟ್ಟಿದೆ.  

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು 

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 27. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ನಗ-ನಗದು ದೋಚಿ ಪರಾರಿಯಾದ ಘಟನೆ ತಾಲೂಕಿನ ಮೊಗ್ರು ಗ್ರಾಮದ ಮುರ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಮೀನಾಕ್ಷಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲ ಮೂಲಕ ಒಳನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿರಿಸಿದ್ದ ಎರಡೂವರೆ ಪವನ್ ಚಿನ್ನದ ಸರ ಹಾಗೂ 32,500 ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನಾಕ್ಷಿಯವರು ಗುರುವಾಯನಕೆರೆಯಲ್ಲಿರುವ ತನ್ನ ಮಗಳ ಮನೆಗೆ ತೆರಳಿ, ವಾಪಸ್ ಬಂದಾಗ

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 27. ಯುವಕನೋರ್ವ ಮಗಳ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಬಿಎಸ್ ಎಫ್ ಯೋಧನೋರ್ವನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.   ನದಿಯಾಡ್‌ನ ಚಕ್ಲಾಸಿ ಗ್ರಾಮದಲ್ಲಿ ಬಿಎಸ್‌ಎಫ್‌ ಯೋಧರೊಬ್ಬರ ಅಪ್ರಾಪ್ತ ಮಗಳ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಯೋಧ ಬಾಲಕನ‌ ಮನೆಗೆ ತೆರಳಿ ಪ್ರಶ್ನಿಸಿದ್ದು, ಈ ವೇಳೆ ಬಾಲಕನ ಕುಟುಂಬಸ್ಥರು ಕೊಡಲಿ ಹಾಗೂ ದೊಣ್ಣೆಗಳಿಂದ ಯೋಧ ಮತ್ತು ಅವರ

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್   ➤ ಮಾಲಿಕನಿಗೆ ಗಂಭೀರ ಗಾಯ                    

(ನ್ಯೂಸ್ ಕಡಬ) newskadaba.com ಹಾಸನ, ಡಿ. 27. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಸಬ್ ರಿಜಿಸ್ಟರ್ ಕಛೇರಿ ರಸ್ತೆಯಲ್ಲಿರುವ ಕೊರಿಯರ್ ಶಾಪ್ ಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿರುವ ಘಟನೆ ಸಂಭವಿಸಿದೆ. ಎರಡು ದಿನಗಳ ಹಿಂದೆ ಮಿಕ್ಸಿ ಕೊರಿಯರ್​​ ಬಂದಿದ್ದು, ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಆ ವ್ಯಕ್ತಿ ಸೂಕ್ತ ವಿಳಾಸದಿಂದ ಬಂದಿಲ್ಲವೆಂದು ವಾಪಸ್ ಮಾಡಿದ್ದರು. ವಾಪಸ್ ಪಡೆಯುವ ವೇಳೆ ಕೊರಿಯರ್ ಮಾಲೀಕ ಮಿಕ್ಸಿ ಆನ್ ಮಾಡಿ ಪರಿಶೀಲನೆ ನಡೆಸುವಾಗ ಮಿಕ್ಸಿ ಬ್ಲಾಸ್ಟ್ ಆಗಿದೆ.

ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್   ➤ ಮಾಲಿಕನಿಗೆ ಗಂಭೀರ ಗಾಯ                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 27. ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕಲ್ಮಂಜ ಗ್ರಾಮದಲ್ಲಿ ವರದಿಯಾಗಿದೆ. ರಬ್ಬರ್ ಸ್ಮೋಕ್ ಹೌಸ್ ನಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು, ಸುಮಾರು 7,000 ಕ್ಕಿಂತ ಅಧಿಕ ತೆಂಗಿನಕಾಯಿ, 2 ಕ್ವಿಂಟಾಲ್ ಗಿಂತಲೂ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದ್ದಲ್ಲದೇ ಬೆಂಕಿಯ ತೀವ್ರತೆಗೆ ಕೊಟ್ಟಿಗೆಯ ಛಾವಣಿ ಹಾಗೂ ಗೋಡೆಗೂ ಹಾನಿ ಉಂಟಾಗಿದ್ದು, ಸುಮಾರು 3 ಲಕ್ಷ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ        

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 27. ಖಾಸಗಿ ಬಸ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿಯಾಗಿ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಕಾರ್ಕಳದಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದ್ದು, ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ

ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 27. ಬಂಟ್ವಾಳ ನಗರ ಠಾಣಾ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ನಿವಾಸಿ ಮೊಹಮ್ಮದ್‌ ಇರ್ಫಾನ್‌ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಸಮೀಪದ ಗಾಣದಪಡುವಿನಲ್ಲಿ ಹೋಲ್‌ಸೇಲ್ ಅಂಗಡಿಯೊಂದರ ಶಟರ್ ಬೀಗ ಮುರಿದು 20 ಸಾವಿರ ರೂ. ಮೌಲ್ಯದ 2 ಮೊಬೈಲ್‌ಗ‌ಳು ಹಾಗೂ 10 ಸಾವಿರ ರೂ. ನಗದನ್ನು ಕಳವುಗೈದಿದ್ದ ಕುರಿತು

ಬಂಟ್ವಾಳದ ವಿವಿಧೆಡೆ ಕಳ್ಳತನ ➤ ಕಡಬದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯ ಲಕ್ಷ್ಮೀದೇವಿ ನಗರದಲ್ಲಿ ವರದಿಯಾಗಿದೆ. ಗಾಯಾಳುಗಳನ್ನು ಬಾಲಕಿ ನೂರಿನ್ ಫಲಕ್ ಮತ್ತು ಈಕೆ ತಂದೆ ಫಕ್ರುದ್ದೀನ್‌ ಎಂದು ಗುರುತಿಸಲಾಗಿದೆ. ಬಿಬಿಎಂಪಿಯ ಆರಂಭಿಕ ವರದಿಗಳ ಪ್ರಕಾರ, ನೂರಿನ್ ಫಲಕ್ ಎಂಬ ಬಾಲಕಿಯು ತನ್ನ ತಂದೆಯ ಜೊತೆ ಹೊರಗೆ ಹೋಗುತ್ತಿದ್ದಾಗ ನಾಯಿಯು ಆಕೆಯನ್ನು ಹಿಂಬಾಲಿಸಿ ದಾಳಿ ಮಾಡಿದ್ದು, ಇದನ್ನು ತಪ್ಪಿಸಲು

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top