ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 26. ವಿದ್ಯುತ್ ಸ್ಪರ್ಶಗೊಂಡು ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ನವೀನ್ (7) ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈತ ಬಾಟಲಿಗೆ ನೀರು ತುಂಬಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು […]

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 25. ಪಾದಾಚಾರಿ ಮಹಿಳೆಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ರವಿವಾರ ಸಂಜೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರು ಗ್ರಾಮದ ಫರ್ಲಾದಲ್ಲಿ ಭಾನುವಾರದಂದು ನಡೆದಿದೆ.   ಮೃತ ಮಹಿಳೆಯನ್ನು ನಾವೂರು ಗ್ರಾಮದ ಸೂರ ಕ್ವಾಟ್ರಸ್‌ ನಿವಾಸಿ ಉಮಾವತಿ(58) ಎಂದು ಗುರುತಿಸಲಾಗಿದೆ. ಇವರು ರವಿವಾರ ಸಂಜೆ ಮನೆಗೆ ತೆರಳುವುದಕ್ಕೆ ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ- ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 25. ಸ್ಕೂಟರ್ ಹಾಗೂ ‌ಗೂಡ್ಸ್ ವಾಹನ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಶಿಬೆಟ್ಟು ಪ್ರಸನ್ನ ಕಾಲೇಜು ಬಳಿ ಭಾನುವಾರದಂದು ನಡೆದಿದೆ. ಮೃತಪಟ್ಟವರನ್ನು ಚಾರ್ಮಾಡಿ ನಿವಾಸಿ ಪುರುಷೋತ್ತಮ‌ ಪೂಜಾರಿ(20) ಎಂದು ಗುರುತಿಸಲಾಗಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ವಿರುದ್ದ ದಿಕ್ಕಿನಿಂದ ಬಂದ ಗೂಡ್ಸ್ ವಾಹನ ಢಿಕ್ಕಿಯಾಗಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಯುವಕನನ್ನು ತಕ್ಷಣವೇ ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 25. ಕಾರು ಹಾಗೂ ಬೈಕ್ ‌ನಡುವ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಬಂಟ್ವಾಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಆರೋಪಿ ಪರಾರಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 25. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು 25,000 ರೂ. ಬೆಲೆಬಾಳುವ 100 ಕೆ.ಜಿ ದನದ ಮಾಂಸವನ್ನು ವಶಕ್ಕೆ ಪಡೆದಿರುವ ಘಟನೆ ಪಾವೂರು ಗ್ರಾಮದ ಮಲಾರ್ ಎಂಬಲ್ಲಿ ನಡೆದಿದೆ. ಮಲಾರ್ ಬದ್ರಿಯಾನಗರ ನಿವಾಸಿ ಜಾಫರ್ ಸಾದಿಕ್ ಎಂಬಾತ ತನ್ನ ಮನೆಯಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ನಡೆಸಲು ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿ, ಸುಮಾರು 25,000/- ರೂಪಾಯಿ ಅಂದಾಜು ಮೌಲ್ಯದ 100 ಕೆ.ಜಿ

ಉಳ್ಳಾಲ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಆರೋಪಿ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೀರು ತುಂಬಿದ್ದ ಬಕೆಟ್ ಗೆ ಬಿದ್ದು 11 ತಿಂಗಳ ಕಂದಮ್ಮ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 25. ಹನ್ನೊಂದು ಹಸುಗೂಸೊಂದು ಬಕೆಟ್ ನ ನೀರಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕಾಞಂಗಾಡ್ ಅಂಬಲತ್ತರ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಅಬ್ದುಲ್ ಜಬ್ಬಾರ್ ಹಾಗೂ ರಝಿಯಾ ದಂಪತಿ ಪುತ್ರ ಮಹಮ್ಮದ್ ರಿಝ್ವಾನ್ ಎಂದು ಗುರುತಿಸಲಾಗಿದೆ. ತಾಯಿ ಮಗುವಿಗೆ ಆಹಾರ ತಯಾರಿಸಲೆಂದು ಅಡುಗೆ ಕೋಣೆಗೆ ಹೋದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ನೀರು ತುಂಬಿದ್ದ ಬಕೆಟ್ ಗೆ ಬಿದ್ದು 11 ತಿಂಗಳ ಕಂದಮ್ಮ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಡಾನೆ ದಾಳಿ- ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 25. ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾದ ದಾರುಣ ಘಟನೆ ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ನಡೆದಿದೆ. ಮೃತ ರೈತನನ್ನು ಈರಪ್ಪ ಎಂದು ಗುರುತಿಸಲಾಗಿದೆ. ಇವರು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಕಾಡಾನೆ ದಾಳಿಗೆ ರೈತ ಮೃತಪಟ್ಟ ಹಿನ್ನೆಲೆ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ- ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಮನೆ ಬೆಂಕಿಗಾಹುತಿ ➤ ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 25. ಮನೆಯ ಮೇಲಂತಸ್ತು ಬೆಂಕಿಗಾಹುತಿಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಕಡವಿನ ಬಾಗಿಲು ಎಂಬಲ್ಲಿ ನಡೆದಿದೆ. ಇಲ್ಲಿನ ಬಿ.ಕೆ. ಇಸ್ಮಾಯಿಲ್ ಎಂಬವರಿಗೆ ಸೇರಿದ ಮನೆಯ ಮೇಲಂತಸ್ತು ಬೆಂಕಿಗಾಹುತಿಯಾಗಿದ್ದು, ಪರಿಣಾ. ಬೆಲೆಬಾಳುವ ಸೋಫಾಸೆಟ್, ಟಿಫಾಯಿ, ಬಟ್ಟೆ ಬರೆ, ಕಿಟಕಿ ಹಾಗೂ ಬಾಗಿಲು ಸುಟ್ಟು ಹೋಗಿವೆ. ಅಲ್ಲದೇ, ಮನೆಯ ಒಂದು ಬದಿಯ ಗೋಡೆ ಕೂಡಾ ಬಿರುಕು ಬಿಟ್ಟಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಬೆಂಕಿ

ಉಪ್ಪಿನಂಗಡಿ: ಮನೆ ಬೆಂಕಿಗಾಹುತಿ ➤ ಅಪಾರ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಕುದುರೆಗೆ ಬಸ್ ಢಿಕ್ಕಿ ➤ ಕುದುರೆ ಹಾಗೂ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 25. ಕುದುರೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಕುದುರೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಪದುಮಲೆ ಎಂಬಲ್ಲಿ ಭಾನುವಾರದಂದು ಬೆಳಗ್ಗೆ ನಡೆದಿದೆ.   ಗಾಯಗೊಂಡವರನ್ನು ಕುದುರೆ ಸವಾರಿ ನಡೆಸುತ್ತಿದ್ದ ಸಚಿನ್ ಪೆಲಪ್ಪಾರ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಕುದುರೆ ಕೂಡಾ ಗಂಭೀರ ಗಾಯಗೊಂಡಿದ್ದು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ: ಕುದುರೆಗೆ ಬಸ್ ಢಿಕ್ಕಿ ➤ ಕುದುರೆ ಹಾಗೂ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುನೀತ್ ರಾಜ್‍ಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ➤ ಪುನೀತ್ ಕೆರೆಹಳ್ಳಿಗೆ ಹಿಗ್ಗಾಮುಗ್ಗ ಥಳಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 25. ಕರ್ನಾಟಕ ರತ್ನ ಡಾ‌. ರಾಜ್‌ಕುಮಾರ್ ಕುಟುಂಬ ಹಾಗೂ ಪುನೀತ್ ರಾಜ್ ಕುಮಾರ್ ಕುರಿತು ಬೇಕಾಬಿಟ್ಟಿಯಾಗಿ ಮಾತಾಡಿದ್ದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಬಗ್ಗೆ ದಿ. ಪುನೀತ್ ರಾಜಕುಮಾರ್ ವಿರುದ್ಧ ಪುನೀತ್ ಕೆರೆಹಳ್ಳಿ ಹಗುರವಾಗಿ ಮಾತನಾಡಿದ್ದ ಎಂದು ಕನ್ನಡಪರ ಹೋರಾಟಗಾರ ಶಿವಕುಮಾರ್ ಮತ್ತಿತರರು ಆರೋಪಿಸಿದ್ದು, ಕ್ಷಮೆ ಕೇಳುವಂತೆ

ಪುನೀತ್ ರಾಜ್‍ಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ➤ ಪುನೀತ್ ಕೆರೆಹಳ್ಳಿಗೆ ಹಿಗ್ಗಾಮುಗ್ಗ ಥಳಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top