ಕ್ರೈಮ್ ನ್ಯೂಸ್

➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು  ಡಿ. 17 ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡ ಮೇಲಿನಿಂದ ಕೆಳಕೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಡಿ. 19ರಂದು ನಡೆದಿದೆ. ಬೆಂಗಳೂರಿನ ನಿವಾಸಿ 23ವರ್ಷದ ವಾಣಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆಕೆ ಬರೆದಿರುವ ಡೆತ್ ನೋಟ್ ನಲ್ಲಿ ಪ್ರೇಮ ವೈಫಲ್ಯ ಆಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಮೃತದೇಹವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.  

➤ ಬೆಂಗಳೂರು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು!

(ನ್ಯೂಸ್ ಕಡಬ) newskadaba.com, ಲಂಡನ್ ಡಿ. 17  ಉದ್ಯೋಗ ನಿಮಿತ್ತ ಲಂಡನ್ ಗೆ ತೆರಳಿದ್ದ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಪೂರ್ವ ಇಂಗ್ಲೆಂಡ್ ನ ನಾರ್ಥಾಂಪ್ಪನ್ ಪ್ರದೇಶದಲ್ಲಿ ನಡೆದಿದೆ. ಭಾರತೀಯ ಮೂಲದ ಮಹಿಳೆ ಮತ್ತು ಅವರ ಇಬ್ಬರು ಮಕ್ಕಳು ಮನೆಯಲ್ಲಿ ಗಂಭೀರವಾದ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಕೊಟ್ಟಾಯಂನ 40 ವರ್ಷದ  ನರ್ಸ್,  ಆರು ವರ್ಷದ ಮಗ, ಹಾಗೂ ನಾಲ್ಕು ವರ್ಷದ ಮಗಳು ಕೊಲೆಗಿಡಾದವರು ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು

➤ ಲಂಡನ್ ಕೇರಳ ಮೂಲದ ನರ್ಸ್ ಮತ್ತು ಇಬ್ಬರು ಮಕ್ಕಳ ನಿಗೂಢ ಸಾವು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

➤ ಸುಳ್ಯ ಜುವೆಲರ್ಸ್ ಮಾಲಕನ ಅಪಹರಣ ಯತ್ನ!

 (ನ್ಯೂಸ್ ಕಡಬ) newskadaba.com ಸುಳ್ಯ , ಡಿ. 20 ಸುಳ್ಯ ಕಾಮಧೇನ್ ಜುವೆಲರ್ಸ್ ಮಾಲಕ ನವೀನ್ ಎಂಬವರನ್ನು ಅಪರಿಚಿತ ತಂಡವೊಂದು ಅಪಹರಿಸಿರುವ ಘಟನೆ ಸೋಮವಾರ ಮಧ್ಯಾಹ್ನ ಬೆಳ್ಳಾರೆಯಲ್ಲಿ ನಡೆದಿದೆ. ಈ ಘಟನೆ ಸಂಧರ್ಭ ಉದ್ಯಮಿಯ ತಾಯಿ ಗಾಯಗೊಂಡಿದ್ದಾರೆ. ತಕ್ಷಣದಲ್ಲಿ ಪೊಲೀಸರಿಗೆ ಮಾಹಿತಿಸಿಕ್ಕ ಹಿನ್ನೆಲೆಯಲ್ಲಿ ಬೆಳ್ಳಾರೆಯಿಂದ ಹೋದ ಅಪರಿಚಿತ ತಂಡವನ್ನು ತಡೆದು ನವೀನ್ ರವರನ್ನುರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.    

➤ ಸುಳ್ಯ ಜುವೆಲರ್ಸ್ ಮಾಲಕನ ಅಪಹರಣ ಯತ್ನ! Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!  

(ನ್ಯೂಸ್ ಕಡಬ) newskadaba.com  ವಿಜಯಪುರ, ಡಿ.20 ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾದ ಘಟನೆ ವಿಜಯಪುರ ನಗರದ ದೇವಗಿರಿ ಎಂಬಲ್ಲಿ ಸಂಭವಿಸಿದೆ. ಸ್ಮಶಾನದ ಬಾವಿಯಲ್ಲಿನ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಶಿಶುವಿನ ಶವ ಪತ್ತೆಯಾಗಿದ್ದು, ಪಾಪಿಗಳು ಆಗತಾನೆ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಬಾವಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣು ಮಗುವಾಗಿದೆ ಎಂಬ ಕಾರಣಕ್ಕೆ ಯಾರು ಬಾವಿಯಲ್ಲಿ ಬಿಸಾಕಿ ಹೋಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಆದರ್ಶ ನಗರ ಪಿಎಸ್ಐ ಯತೀಂದ್ರ ಭೇಟಿ ನೀಡಿ

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ..!         

(ನ್ಯೂಸ್ ಕಡಬ) newskadaba.com  ಕೊಪ್ಪಳ, ಡಿ.20  ದೋಷಪೂರಿತ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿಯ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದೆ. ಊಟ ಮಾಡಿದ್ದ ಕೆಲವರು ನಿತ್ರಾಣರಾಗಿದ್ದು, ವಾಂತಿಯಾಗಿ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿತ್ತು ಎನ್ನಲಾಗಿದೆ. ಕೆಲವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ, ಇನ್ನೂ ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ..!          Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಸಿದು ಬಿದ್ದು ಚಾಲಕ ಮೃತ್ಯು!

(ನ್ಯೂಸ್ ಕಡಬ) newskadaba.com  ಸೋಮವಾರಪೇಟೆ  , ಡಿ 20 :  ಟ್ಯಾಕ್ಸಿ ಚಾಲಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಆಯತಾನ ರೆಸಾರ್ಟ್ ಬಳಿ ಸಂಭವಿಸಿದೆ. ಮೃತರನ್ನು ಈರಣ್ಣ (36) ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ನಿವಾಸಿ, ಸ್ನಾನ ಮುಗಿಸಿ ಹೊರಬಂದು ಕೊಠಡಿಯಲ್ಲಿ ಕುಳಿತಿದ್ದ ಸಂದರ್ಭ ದಿಢೀರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಪತ್ನಿ ಸೇರಿದಂತೆ ಎರಡು ವರ್ಷದ ಮಗುವನ್ನು ಅಗಲಿದ್ದಾರೆ.

ಕುಸಿದು ಬಿದ್ದು ಚಾಲಕ ಮೃತ್ಯು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ              

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20  ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 8 ಲಕ್ಷದ 10 ಸಾವಿರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಜೂಜಾಟ ಧಂಧೆಗಳು

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ               Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ನವಜಾತ ಅಂಗವೈಕಲ್ಯ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು

(ನ್ಯೂಸ್ ಕಡಬ) newskadaba.com ಕಾರವಾರ , ಡಿ. 20  ನವಜಾತ ಅಂಗವಿಕಲ ಶಿಶುವೊಂದನ್ನು ಬಾಕ್ಸ್ ನಲ್ಲಿ ಹಾಕಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಗುಡ್ಡೆಕೊಪ್ಪಕ್ಕೆ ತೆರಳುವ ತ್ಯಾರ್ಸಿ-ತಡಕೇರಿ ತಿರುವಿನಲ್ಲಿ ಮಗುವನ್ನು ಬಿಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನವಜಾತ ಮಗು ಸಿಕ್ಕಿರುವ ಜಾಗಕ್ಕೆ ಪೊಲೀಸರು ಬಂದು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರಿಗೆ ಮಾಹಿತಿ ನೀಡಿದ್ದಾರೆ. ರಸ್ತೆ ಬದಿಯಲ್ಲಿ ಸಿಕ್ಕಿರುವ ಮಗು ಅಂಗವೈಕಲ್ಯ

➤ ನವಜಾತ ಅಂಗವೈಕಲ್ಯ ಶಿಶುವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು Read More »

ಕ್ರೈಮ್ ನ್ಯೂಸ್
Theft, crime, Robbery

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!    

(ನ್ಯೂಸ್ ಕಡಬ) newskadaba.com ರಾಯಚೂರು, ಡಿ.20  ಶ್ರೀ ಸಿದ್ದಲಂಗೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದ ಖದೀಮರು ಹುಂಡಿ ಹೊತ್ತೊಯ್ದಿದ್ದಾರೆ.  ದೇವಸ್ಥಾನದ ಒಳಗಿರುವ ಹುಂಡಿಯ ಬೀಗವನ್ನು ಮುರಿದು ಹಣ ಕಳವು ಮಾಡಿರುವ ಘಟನೆ ತಾಲೂಕಿನ ಮನ್ಸಲಾಪುರದ ದೇವಸ್ಥಾನದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ದೇವಸ್ಥಾನ ದಲ್ಲಿ ಇದು ದೊಡ್ಡ ಹುಂಡಿಯಾಗಿದ್ದು, ಐದಾರು ಜನ ಸೇರಿ ಕಳವು ಮಾಡಿದ್ದಾರೆ ಎಂಬ ಶಂಕೆ ಕೇಳಿಬರುತ್ತಿದೆ.  ಕೆಲ ದಿನಗಳ ಹಿಂದೆಯಷ್ಟೇ ಜಾತ್ರೆ ನಡೆದಿದ್ದು, ಹುಂಡಿಗೆ ಲಕ್ಷಾಂತರ ಹಣ ಸಂಗ್ರಹಗೊಂಡಿತ್ತು. ಹುಂಡಿ ಹಣ ಎಣಿಕೆ

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ  , ಡಿ 20 :  ರಾಷ್ಟ್ರ ರಾಜಧಾನಿ ಮತ್ತು ಉತ್ತರ ಭಾರತದಲ್ಲಿ ಈ ಋತುವಿನನಲ್ಲಿ ಮೊದಲ ಬಾರಿಗೆ   ಮುಂಜಾನೆ ದಟ್ಟ ಮಂಜು ಆವರಿಸಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು.  ಕೇವಲ 150 ಮೀಟರ್ ಗಿಂತ ದೂರದ ವಸ್ತುಗಳು ಕೂಡಾ ಕಾಣಿಸದಷ್ಟು ದಟ್ಟವಾಗಿ ಮಂಜು ಕವಿದಿತ್ತು. ಉತ್ತರ ರಾಜ್ಯ ಗಳಲ್ಲಿ ದಟ್ಟ ಮಂಜಿನಿಂದಾಗಿ ಸಂಭವಿಸಿದ ಅಪಘಾತಗಳು ಮತ್ತು ವಾಹನಗಳ ದಟ್ಟಣೆಯಿಂದಾಗಿ ಕನಿಷ್ಕ 11 ಮಂದಿ ಮೃತಪಟ್ಟಿದ್ದಾರೆ. ಹಾಗೂ ಉತ್ತರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top