ಕ್ರೈಮ್ ನ್ಯೂಸ್

ಜಾನುವಾರುಗಳಿಗೆ ಚರ್ಮಗಂಟು ರೋಗ ➤ ಆಕಳು ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 17. ಭಟ್ಕಳ ತಾಲೂಕಿನ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ. ಕಳೆದ ಹತ್ತಾರು ದಿನಗಳಿಂದ ಈ ಭಾಗದ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ. ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಮೃತಪಟ್ಟಿದೆ ಎನ್ನಲಾಗಿದೆ.

ಜಾನುವಾರುಗಳಿಗೆ ಚರ್ಮಗಂಟು ರೋಗ ➤ ಆಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆಯಾಗಿದ್ದು, ಮೃತ ಯುವತಿಯನ್ನು ಸೃಷ್ಟಿ ಮಾರುತಿ (21) ಎಂದು ಗುರುತಿಸಲಾಗಿದೆ. ಸೃಷ್ಟಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ. ಕಾಲೇಜಿಗೆ ಹೋಗಿದ್ದ ಯುವತಿ ಸಂಜೆಯಾದ್ರು ಮನೆಗೆ ಬಂದಿರಲಿಲ್ಲ, ಈ ಹಿನ್ನೆಲೆ ಪೋಷಕರು ಹುಡುಕಾಟ ನಡೆಸಿದ್ದರು ಎನ್ನಲಾಗಿದೆ. ಇದೀಗ ಸೃಷ್ಟಿ ಸಾವಿನ ಕುರಿತು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಮೃತದೇಹ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಡಿ. 17. ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ. ಮೃತರನ್ನು ದುರ್ಗಮ್ಮ (25), ಆಕೆಯ ಮಗ ಅಜ್ಜಯ್ಯ (6) ಹಾಗೂ ಮಗಳು ಸೇವಂತಿ (4) ಎಂದು ಗುರುತಿಸಲಾಗಿದೆ. ಬೋಸೇದೇವರಹಟ್ಟಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಪತಿ ಮಹಾಂತೇಶ ಕರೆತಂದು ಬಳಿಕ ಗಂಗಾ ಪೂಜೆಗೆಂದು ನಾಯಕನಹಟ್ಟಿ ಹಿರೇಕೆರೆಗೆ ಮಹಾಂತೇಶ ಕರೆದುಕೊಂಡು ಹೋಗಿದ್ದ. ಆಗ ಪತ್ನಿ ಮತ್ತು ಮಕ್ಕಳನ್ನು ಕೆರೆ ತಳ್ಳಿಗೆ ಪತಿಯೇ

ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೃಷ್ಣಾ ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್‌ ಕಡಬ) newskadaba.com ಆಂಧ್ರಪ್ರದೇಶ, ಡಿ. 17. ಕೃಷ್ಣಾ ನದಿನೀರಿನಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.   ಯನಮಲಕುದೂರು ಬಳಿ ಸ್ನಾನಕ್ಕೆಂದು ಏಳು ವಿದ್ಯಾರ್ಥಿಗಳು ನದಿಗೆ ಇಳಿದಿದ್ದು, ಐವರು ನೀರಿನಲ್ಲಿ ಮುಳುಗಿದ್ದಾರೆ ಇಬ್ಬರು ಬಾಲಕರು ಈಜಿ ದಡ ಸೇರಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿಗಳೆಲ್ಲರು ವಿಜಯವಾಡದ ಪಟಮಾತಲಂಕಾ ಮೂಲದವರಾಗಿದ್ದು, ಸ್ಥಳೀಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಈವರೆಗೆ ಎರಡು ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಮೃತದೇಹಗಳ ಶೋಧ ಕಾರ್ಯಾಚರಣೆ ನಡೆಯುತ್ತಿದೆ

ಕೃಷ್ಣಾ ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »

ಕ್ರೈಮ್ ನ್ಯೂಸ್

ಬೋನಿಗೆ ಬಿದ್ದ ಚಿರತೆ  ➤ ನಿಟ್ಟುಸಿರು ಬಿಟ್ಟ ಸ್ಥಳೀಯರು                       

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 17. ಮೈಸೂರಿನ ಜನರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟು ಮಾಡಿತ್ತು ಎನ್ನಲಾಗಿದೆ. ಸುರೇಂದ್ರ ಕುಮಾರ್ ಹಾಗೂ ವಿಜಯ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿ ಗ್ರಾಮದಲ್ಲಿ ಒಂದು ಬೋನ್ ಅನ್ನು ಇರಿಸಲಾಗಿತ್ತು. ಸದ್ಯ ಈ ಬೋನಿಗೆ ಚಿರತೆ ಬಿದ್ದಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಬೋನಿಗೆ ಬಿದ್ದ ಚಿರತೆ  ➤ ನಿಟ್ಟುಸಿರು ಬಿಟ್ಟ ಸ್ಥಳೀಯರು                        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಡಿ. 17. ವೇಗವಾಗಿ ಬಂದ ಲಾರಿಯೊಂದು ತಿರುವಿನಲ್ಲಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿ, ಬೆಜ್ಜರಹಳ್ಳಿ ಕಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಮೃತಪಟ್ಟವರನ್ನು ಸುಗ್ಗನಹಳ್ಳಿ ಗ್ರಾಮದ ನಿವಾಸಿ ಮಲ್ಲೇಶಯ್ಯ (52) ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಮಾಗಡಿಗೆ ತೆರಳುವ ವೇಳೆ ಎಂದಿನಂತೆ ತಮ್ಮ ಮಗಳನ್ನು ಬೆಜ್ಜರಹಳ್ಳಿ ಕಟ್ಟೆ ಗ್ರಾಮದ ಬಳಿ ಡ್ರಾಪ್ ಮಾಡಲು ಮಲ್ಲೇಶಯ್ಯ ಅವರು ದ್ವಿಚಕ್ರ ವಾಹನದಲ್ಲಿ

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ     

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 17. ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಯಜಮಾನ ಸೇರಿದಂತೆ ಒಂದೇ ಕುಟುಂಬದ ಆರು ಜನರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಮನೆಯ ಯಜಮಾನ ಶಿವಯ್ಯ (50), ಪತ್ನಿ ಪದ್ಮಾ (45) ಹಾಗೂ ಇಬ್ಬರು ಮಕ್ಕಳು, ಪದ್ಮಾರವರ ಅಕ್ಕನ ಮಗಳು ಮೌನಿಕ ಸೇರಿ ಶಾಂತಯ್ಯ ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಡರಾತ್ರಿ ಭೀಕರ ಅಗ್ನಿ ಅವಘಢ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 16. ಹೆಜ್ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಓರ್ವ ಮೃತಪಟ್ಟರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಪ್ರಕರಣ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆ ಬೀಚ್ ಬಳಿ ನಡೆದಿದೆ. ಮೃತಪಟ್ಟವರನ್ನು ವಾಸುದೇವ ಡಿ. ಸಾಲಿಯಾನ್ (65) ಹಾಗೂ ಗಾಯಾಳುವನ್ನು ಚಂದ್ರಶೇಖರ್(65) ಎಂದು ಗುರುತಿಸಲಾಗಿದೆ. ಪಡುಬಿದ್ರೆ ಬೀಚ್ ಬಳಿ ಅಡ್ಡಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಹೆಜ್ಜೇನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ದೂರು ಸಲ್ಲಿಸಿದ್ದಾರೆ.

ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು          

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 16. 5 ವರ್ಷದ ಬಾಲಕನೋರ್ವನ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಹೂಡ್ಕೋ ಬಡಾವಣೆಯ ಶ್ರೇಯಸ್ (5) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಗ್ರರ ದಾಳಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 16. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ನಾಗರಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪೊಲೀಸರು, ರಕ್ಷಣಾ ಪಡೆಗಳು ಮತ್ತು ನಾಗರಿಕ ಆಡಳಿತ ಅಧಿಕಾರಿ ಸ್ಥಳದಲ್ಲಿದ್ದರು ಎಂದು ಸೇನಾ ಘಟಕ ಮಾಹಿತಿ ನೀಡಿದೆ.

ಉಗ್ರರ ದಾಳಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top