ಕ್ರೈಮ್ ನ್ಯೂಸ್

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!!

(ನ್ಯೂಸ್ ಕಡಬ) newskadaba.com  ಹಾವೇರಿ, ಡಿ.09. ಚಿರತೆಯೊಂದು ಹಸುವನ್ನು ತಿಂದು ಹಾಕಿದ ಆತಂಕಕಾರಿ ಘಟನೆ ರಾಣೆಬೆನ್ನೂರಿನಲ್ಲಿ ಸಂಭವಿಸಿದೆ.   ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿದ ಚಿರತೆಯು ಹಸುವನ್ನು ತಿಂದಿರುವ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಪ್ರದೇಶದಲ್ಲಿ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಬೋನ್ ಇರಿಸಿ ಸೆರೆಹಿಡಿಯಬೇಕೆಂದು ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.09. ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ದುರ್ವಾಸನೆಯಿಂದ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ನಿಲ್ದಾಣ ತಲುಪಿದ ತಕ್ಷಣ ರೈಲ್ವೆ ರಕ್ಷಣಾ ಪಡೆ ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯೋರ್ವ ಹಳದಿ ಗೋಣಿಚೀಲದಲ್ಲಿ 30ರ ಆಸುಪಾಸಿನ ಮಹಿಳೆಯ ಮೃತದೇಹವನ್ನು ಸೀರೆ ಮತ್ತು ಕಂಬಳಿಯಲ್ಲಿ ಸುತ್ತಿ ಇಡಲಾಗಿತ್ತು ಎನ್ನಲಾಗಿದೆ. ಮಹಿಳೆಯ ಮೃತದೇಹ ವನ್ನು ತನಿಖೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಮಕ್ಕೆ ತಿರುಗಿದ ಇನ್ಸ್ಟಾಗ್ರಾಮ್ ಪರಿಚಯ ➤ ಲೈಂಗಿಕ ದೌರ್ಜನ್ಯ- ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ 09. ಇನ್‌ ಸ್ಟಾಗ್ರಾಮ್‌ ಮೂಲಕ ಪರಿಚಯವಾದ ಕಾನೂನು ಸಂಘರ್ಷಕ್ಕೊಳಗಾಗಿದ್ದ ಬಾಲಕನೋರ್ವ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಎಸೆಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯೋರ್ವಳಿಗೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಇನ್‌ಸ್ಟಾ ಗ್ರಾಮ್‌ ಮೂಲಕ ಪರಿಚಯವಾಗಿದ್ದು, ಬಳಿಕ ಆಗಾಗ್ಗೆ ಆತ ಬಾಲಕಿ ಮನೆಗೆ ಹೊಗಿ ಬರುತ್ತಿದ್ದ ಎನ್ನಲಾಗಿದೆ. ಕಳೆದ ಡಿ.02ರಂದು ರಾತ್ರಿ 8.30ರ ಸುಮಾರಿಗೆ ಬಾಲಕಿಯ ಮನೆಗೆ ಬಂದ ಆತ ಆಕೆಯನ್ನು ಸ್ಕೂಟರ್‌ನಲ್ಲಿ

ಪ್ರೇಮಕ್ಕೆ ತಿರುಗಿದ ಇನ್ಸ್ಟಾಗ್ರಾಮ್ ಪರಿಚಯ ➤ ಲೈಂಗಿಕ ದೌರ್ಜನ್ಯ- ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 09. ತನ್ನ ಹೆಂಡತಿಗೆ ಬೈದನೆಂದು ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ನಡೆದಿದೆ. ಕೊಲೆಯಾದವರನ್ನು ಬಸವರಾಜು ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿದ್ದ ಈತ ಸ್ನೇಹಿತ ಅಭಿಷೇಕ್ ಹಾಗೂ ಅತನ ಪತ್ನಿಯನ್ನುಅವಾಚ್ಯವಾಗಿ ಬೈಯುತ್ತಿದ್ದ, ಎಂಬ ಕಾರಣಕ್ಕೆ ಅಭಿಷೇಕ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ಅಭಿಷೇಕ್ ಹಾಗೂ ಬಸವರಾಜ್ ಎರಡು ವರ್ಷಗಳಿಂದ ಒಟ್ಟಿಗೆ ಕೆಲಸಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com  ದಾವಣಗೆರೆ ಡಿ.09. ಆನ್ಲೈನ್ ಶಾಪಿಂಗ್ ಕಂಪೆನಿಯಿಂದ ಉಡುಗೊರೆ ಬಂದಿದೆ ಎಂದು ನಂಬಿಸಿ ರೂ. 92,000 ವಂಚನೆ ಮಾಡಿದ ಘಟನೆ ದಾವಣಗೆರೆಯಲ್ಲಿ ವರದಿಯಾಗಿದೆ. ವಂಚನೆಗೊಳಗಾದವರನ್ನು ಊರ್ಮಿಳಾ ಕುಮಾರಿ ಎಂದು ಗುರುತಿಸಲಾಗಿದೆ. ಇವರಿಗೆ ಮಿಶೊ ಕಂಪೆನಿಯಿಂದ ಉಡುಗೊರೆ ಬಂದಿದೆ ಬೇಕಾದಲ್ಲಿ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಎಂದು ಪತ್ರ ಬಂದಿತ್ತು. ಅದನ್ನು ನಂಬಿದ ಊರ್ಮಿಳಾ ಅವರು ಕರೆ ಮಾಡಿದಾಗ ವ್ಯಕ್ತಿಯೊಬ್ಬ ಕಂಪೆನಿಯ ಅಧಿಕಾರಿಯೆಂದು ಹೇಳಿ, ತೆರಿಗೆ ಕಟ್ಟುವಂತೆ ಹೇಳಿದ್ದಾರೆ. ನಂತರ ಹಂತ ಹಂತವಾಗಿ ಸುಮಾರು ರೂ.92,000ವನ್ನು

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ. 09. ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ರಾ.ಹೆ 75ರ ಗೋಳಿತೊಟ್ಟು ಸರಕಾರಿ ಶಾಲೆಯ ಮುಂಭಾಗದಲ್ಲಿ ನಡೆದಿದೆ. ಇಲ್ಲಿನ ಪಿ.ಎಸ್.ಸ್ಟೋರ್ ಮಾಲಕ ಪಿ.ಎಸ್ ಮುಹಮ್ಮದ್ ಎಂಬವರು ಉಪ್ಪಿನಂಗಡಿಯಿಂದ ಮರಳಿ ಗೋಳಿತೊಟ್ಟು ಕಡೆಗೆ ಬರುತ್ತಿದ್ದ ವೇಳೆ ರಸ್ತೆಗೆ ಅಡ್ಡಬಂದ ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಕಾರು ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಪಲ್ಟಿ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ ) newskadaba. com  ನೆಲ್ಯಾಡಿ .ಡಿ.09.  ಬೈಕ್ ಪಲ್ಟಿಯಾದ ಪರಿಣಾಮ ಸಹ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಗಾಯಗೊಂಡ ಸಹ ಸವಾರನನ್ನು ಹರಿದಾಸನ್ ಎಂದು ಗುರುತಿಸಲಾಗಿದೆ.  ಈತ ಶಿರಾಡಿಯಿಂದ ಗುಂಡ್ಯಕ್ಕೆ ಸಿನು ಎಂಬುವರ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಗುಂಡ್ಯ ಸಮೀಪ  ಈ ಘಟನೆ ನಡೆದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬೈಕ್ ಪಲ್ಟಿ ➤ ಸಹ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಡಿ. 09. ಮನೆಯಲ್ಲಿ ಆಟವಾಡುತ್ತಿದ್ದ 8 ತಿಂಗಳ ಮಗುವೊಂದು ಅಕಸ್ಮಿಕವಾಗಿ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಮಗು ಆಟವಾಡುತ್ತಿದ್ದ ವೇಳೆ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ್ದು, ಈ ವಿಷಯ ಪೋಷಕರಿಗೂ ತಿಳಿದಿರಲಿಲ್ಲ. ಆದರೆ, ಒಂದು ವಾರದ ಬಳಿಕ ಮಗುವಿನ ಗಂಟಲಿನಲ್ಲಿ ಶಿಳ್ಳೆಯ ರೀತಿಯಲ್ಲಿ ಸೌಂಡ್ ಕೇಳಿ ಬಂದಿದ್ದರಿಂದ ಗಾಬರಿಗೊಂಡ ಪೋಷಕರು ಹತ್ತಿರದ ಅಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಗಂಟಲಿನಲ್ಲಿ 2 ಸೆಂ.ಮೀ

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುಣ್ಚತ್ತಾರು: ಆಕ್ಟಿವಾ ಹಾಗೂ ಬೈಕ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 09. ಬೈಕ್ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಕ್ಟಿವಾ ಸವಾರ ಗಾಯಗೊಂಡ ಘಟನೆ ಪುಣ್ಚತ್ತಾರಿನಲ್ಲಿ ನಡೆದಿದೆ. ಪುತ್ತೂರಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಬೈಕ್ ಮತ್ತು ದೋಳ್ಪಾಡಿ ಕಡೆಯಿಂದ ಪುಣ್ಚತ್ತಾರು ಕಡೆಗೆ ಬರುತ್ತಿದ್ದ ಆಕ್ಟಿವಾ ಮಧ್ಯೆಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಪುಣ್ಚತ್ತಾರು: ಆಕ್ಟಿವಾ ಹಾಗೂ ಬೈಕ್ ನಡುವೆ ಅಪಘಾತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top