ಬಸ್ ನಿಂದ ಬಿದ್ದು ಪ್ರಯಾಣಿಕ ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06. ಕೆಎಸ್ಸಾರ್ಟಿಸಿ ಬಸ್ನಿಂದ ಪ್ರಯಾಣಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಕೆಮ್ಮಾಯಿ ಸಮೀಪ ನಡೆದಿದೆ. ಮೃತರನ್ನು ಕೆದಿಲ ಗ್ರಾಮದ ಮುದ್ರಾಜೆ ನಿವಾಸಿ ಪ್ರಸ್ತುತ ಕೆಮ್ಮಾಯಿಯಲ್ಲಿ ಬಾಡಿಗೆ ಮನೆಯಲ್ಲಿರುವ ಸೋಮಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಉಪ್ಪಿನಂಗಡಿಯ ಹಳೆನೇರಂಕಿ ಕಡೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಕೆಮ್ಮಾಯಿ ಬಳಿ ಬಸ್ ನಿಲುಗಡೆ ವೇಳೆ ಬಸ್ನಿಂದ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬಸ್ ನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್






