ಕ್ರೈಮ್ ನ್ಯೂಸ್

ಕಾರುಗಳ ಮೇಲೆ ಮಗುಚಿ ಬಿದ್ದ ಲಾರಿ ➤ ಪ್ರಯಾಣಿಕರು ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 05. ಭತ್ತದ ಮೂಟೆ ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಟೂರಿಸ್ಟ್ ಕಾರಿನ ಮೇಲೆಯೇ ಪಲ್ಟಿ ಹೊಡೆದ ಘಟನೆ ಉಡುಪಿಯ ಕೆಳಪರ್ಕಳ ಎಂಬಲ್ಲಿ ನಡೆದಿದೆ. ಅಪಘಾತದಿಂದಾಗಿ ಒಂದು ಕಾರು ಸಂಪೂರ್ಣ ಜಖಂಗೊಂಡಿದ್ದು, ಭತ್ತದ ಮೂಟೆ ಲಾರಿಯಿಂದ ಬೇರ್ಪಟ್ಟು ರಸ್ತೆಯಲ್ಲಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ ಈ ಭಾಗದಲ್ಲಿ ವಾಹನ ಅಪಘಾತ ಘಟನೆ ನಡೆದಿದೆ. ಹೊಸ […]

ಕಾರುಗಳ ಮೇಲೆ ಮಗುಚಿ ಬಿದ್ದ ಲಾರಿ ➤ ಪ್ರಯಾಣಿಕರು ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಆಂಬ್ಯುಲೆನ್ಸ್ ವಾಹನ ಪಲ್ಟಿ ➤ ವೈದ್ಯ ಸೇರಿದಂತೆ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 05. ನಿಯಂತ್ರಣ ತಪ್ಪಿದ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಯ ಆಂಬುಲೆನ್ಸ್, ಸೇತುವೆಯ ಬದಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವೈದ್ಯರೋರ್ವರು ಸೇರಿದಂತೆ ಮೂವರು ಗಾಯಗೊಂಡ ಘಟನೆ ಭಾನುವಾರದಂದು ರಾತ್ರಿ ನಡೆದಿದೆ.   ಗಾಯಗೊಂಡವರನ್ನು ಡಾ.‌‌ನಿತಿನ್, ಕ್ಷ-ಕಿರಣ ತಜ್ಞ ರಿತೇಶ್ ಹಾಗೂ ಲ್ಯಾಬ್ ಟೆಕ್ನೀಷಿಯನ್ ಹುಝೈರ್ ಎಂದು ಗುರುತಿಸಲಾಗಿದೆ. ಡಾ.ನಿತಿನ್ ಅವರಿಗೆ ತಲೆಗೆ ಗಾಯ ಹಾಗೂ ಕೈ ಮೂಳೆ‌ ಮುರಿತಕ್ಕೊಳಗಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಿಬ್ಬರು ಗಾಯಾಳುಗಳನ್ನು

ಬೆಳ್ತಂಗಡಿ: ಆಂಬ್ಯುಲೆನ್ಸ್ ವಾಹನ ಪಲ್ಟಿ ➤ ವೈದ್ಯ ಸೇರಿದಂತೆ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕಡಬ: ಪತ್ನಿಯೊಂದಿಗೆ ಜಗಳವಾಡಿ ನಾಪತ್ತೆಯಾಗಿದ್ದ ಪತಿ ➤ ಮೃತದೇಹ ಕಾಡಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.04. ವ್ಯಕ್ತಿಯೋರ್ವರ ಮೃತದೇಹವೊಂದು ದೋಲ್ಪಾಡಿ ಗ್ರಾಮದ ಕೊಜಂಬಾಡಿ ಅರಣ್ಯ ಪ್ರದೇಶದಲ್ಲಿ ಕವಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.   ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದಿ.ಕೊರಗಪ್ಪ ಎಂಬವರ ಪುತ್ರ ದೇವರಾಜ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕನಾಗಿದ್ದ ದೇವರಾಜ್, ಕಾಣಿಯೂರು ಗ್ರಾಮದ ನಾವೂರು ನಿವಾಸಿಯನ್ನು 13 ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ದೇವರಾಜ್ ಅಮಲು ಪದಾರ್ಥ ಸೇವಿಸಿ ಆಗಾಗ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದು,

ಕಡಬ: ಪತ್ನಿಯೊಂದಿಗೆ ಜಗಳವಾಡಿ ನಾಪತ್ತೆಯಾಗಿದ್ದ ಪತಿ ➤ ಮೃತದೇಹ ಕಾಡಿನಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಫಾಲ್ಸ್ ಗೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ಸ್ನೇಹಿತರೊಂದಿಗೆ ದಿಡುಪೆ ಸಮೀಪದ ಎರ್ಮಾಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ.     ಮೃತ ವಿದ್ಯಾರ್ಥಿಯನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿವೇಕ್ (17) ಎಂದು ಗುರುತಿಸಲಾಗಿದೆ. ಈತನ ಸಹಿತ 7 ವಿದ್ಯಾರ್ಥಿಗಳು ಮಲವಂತಿಗೆ ಬಳಿಯ ಎರ್ಮಾಯಿ ಫಾಲ್ಸ್ ಗೆ ಶನಿವಾರದಂದು ಮದ್ಯಾಹ್ನದ ವೇಳೆಗೆ ತೆರಳಿದ್ದು, ಈ ಸಂದರ್ಭ ವಿವೇಕ್ ಎಂಬಾತ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಜೊತೆಯಲ್ಲಿದ್ದವರು ಆತನ ರಕ್ಷಣೆಗೆ ಪ್ರಯತ್ನಿಸಿದರಾದರೂ ಸಾಧ್ಯವಾಗದೇ ಇದ್ದಯ, ತಕ್ಷಣವೇ

ಬೆಳ್ತಂಗಡಿ: ಫಾಲ್ಸ್ ಗೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗ ಸಂಭವಿಸಿದೆ.   ಗಾಯಗೊಂಡವರನ್ನು ಪೆರುವಾಯಿ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಘಟನೆಯಿಂದ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ವಿಟ್ಲ: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಯಕ್ಷಗಾನದ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 03. ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್ ನ್ನು ಯಾರೋ ದುಷ್ಕರ್ಮಿಗಳ ಗುಂಪೊಂದು ಹರಿದು ವಿಕೃತಿ ಮೆರೆದ ಘಟನೆ ವರದಿಯಾಗಿದೆ.   ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ ಗಳನ್ನು ಅಳವಡಿಸಲಾಗಿತ್ತು. ಆದರೆ ಏಕಾಏಕಿ ಕಳೆದ ರಾತ್ರಿ ಬ್ಯಾನರ್ ನ್ನು ದುಷ್ಕರ್ಮಿಗಳು ಹರಿದಿದ್ದಾರೆ. ವಿಕೃತಿ ಮೆರೆದವರು ಯಾರೇ ಆದರೂ ತಪ್ಪೊಪ್ಪಿಕೊಳ್ಳದೇ

ಬೆಳ್ತಂಗಡಿ: ಯಕ್ಷಗಾನದ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನಿವೃತ್ತ ಫಾರೆಸ್ಟರ್ ಅಧಿಕಾರಿಯ ಪುತ್ರ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಬೆಳಗ್ಗೆ ಸುಳ್ಯದಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡವರನ್ನು ಪರಿವಾರಕಾನ ನಿವಾಸಿ ನಿವೃತ್ತ ಫಾರೆಸ್ಟರ್ ಮೋನಪ್ಪ ಗೌಡ ಎಂಬವರ ಮಗ ಸೋಮಶೇಖರ (45) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಹಿಂಬದಿಯ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ

ಸುಳ್ಯ: ನಿವೃತ್ತ ಫಾರೆಸ್ಟರ್ ಅಧಿಕಾರಿಯ ಪುತ್ರ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಕ್ರಮ ಗೋಸಾಗಾಟ ತಡೆಹಿಡಿದ ಬಜರಂಗದಳ ಕಾರ್ಯಕರ್ತರು ➤ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03. ಅಕ್ರಮ ಗೋಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಬಜರಂಗದಳ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿ, ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಸಜೀಪ ಕಂದೂರಿನಲ್ಲಿ ನಡೆದಿದೆ.   ಆಪೆ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಒಂದು ಜಾನುವಾರನ್ನು ರಕ್ಷಿಸಿ, ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಟ್ವಾಳ: ಅಕ್ರಮ ಗೋಸಾಗಾಟ ತಡೆಹಿಡಿದ ಬಜರಂಗದಳ ಕಾರ್ಯಕರ್ತರು ➤ ಗೋವುಗಳ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 03. ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ತೃತೀಯ ಬಿ.ಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಮೋದ್ ಮುತಾಲಿಕ್ ಗೆ ಬೆದರಿಕೆ ಕರೆ ಹಿನ್ನೆಲೆ ➤ ಪುತ್ತೂರಿನ ಯುವಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿರುವ ಬಗ್ಗೆ ವರದಿಯಾಗಿದೆ.   ನನಗೆ ಮೊಬೈಲ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಅವರು ಧಾರವಾಡ ಉಪನಗರ ಠಾಣೆಗೆ ನೀಡಿದ ದೂರಿನನ್ವಯ ಇದೀಗ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಲು ನ್ಯಾಯಾಲಯವು ಅನುಮತಿ ನೀಡಿದೆ. ಈ ಬಗ್ಗೆ

ಪ್ರಮೋದ್ ಮುತಾಲಿಕ್ ಗೆ ಬೆದರಿಕೆ ಕರೆ ಹಿನ್ನೆಲೆ ➤ ಪುತ್ತೂರಿನ ಯುವಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top