ಕ್ರೈಮ್ ನ್ಯೂಸ್

ಪರೀಕ್ಷೆಯಲ್ಲಿ ತಪ್ಪಾಗಿ ಬರೆದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ 27. ದಲಿತ ವಿದ್ಯಾರ್ಥಿಯೋರ್ವ ಪರೀಕ್ಷೆಯಲ್ಲಿ ತಪ್ಪಾಗಿ ಬರೆದಿದ್ದಾನೆ ಎಂದು ಕೋಪಗೊಂಡ ಶಿಕ್ಷಕನೋರ್ವ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನಿಖಿತ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಶಾಲೆಯ ಶಿಕ್ಷಕನನ್ನು ಅಶ್ವಿನಿ ಸಿಂಗ್ ಎನ್ನಲಾಗಿದೆ. ನಿಖಿತ್ ಕುಮಾರ್ ಸಮಾಜ ವಿಜ್ಞಾನ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಕಾಗುಣಿತ ದೋಷ ಮಾಡಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕ ವಿದ್ಯಾರ್ಥಿಗೆ ಮನಬಂದಂತೆ […]

ಪರೀಕ್ಷೆಯಲ್ಲಿ ತಪ್ಪಾಗಿ ಬರೆದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಶಿಕ್ಷಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ➤‌ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 27. ಇಲ್ಲಿನ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆ. 26ರ ಸೋಮವಾರದಂದು ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬರ ಮೇಲೆ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯು ಹಲ್ಲೆ ನಡೆಸಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ➤‌ ಮೂವರು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 25. ಕಾರು ಹಾಗೂ ಮಿನಿ ಲಾರಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ನಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಪುತ್ತೂರು: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ➤‌ ಓರ್ವ ಅಂದರ್

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 25. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಮುರ ರೈಲ್ವೇ ಬ್ರಿಡ್ಜ್ ಸಮೀಪದಲ್ಲಿ ಇಂದು ಮುಂಜಾನೆ ನಡೆದಿದೆ. ಪುತ್ತೂರು ನಗರ ಠಾಣಾ ಪಿಎಸ್ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಗಮನಿಸಿ ವಿಚಾರಣೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಠಾಣಾ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ➤‌ ಓರ್ವ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ➤‌ ಚಾಲಕ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ. 24. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮೃತಪಟ್ಟು, ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ತಡರಾತ್ರಿ ಮೂಡಭಟ್ಕಳ ಬೈಪಾಸ್ ರಾ.ಹೆ. 66ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಾಲಕ ಅಂಜುಮನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ, ರಂಗಿನಕಟ್ಟೆ ನಿವಾಸಿ ಮುಹಮ್ಮದ್ ಉನೈಸ್ ಖತೀಬ್ (20) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಅದೇ ಕಾಲೇಜಿನ ಮುಹಮ್ಮದ್ ಫುರ್ಖಾನ್ ಗಂಗಾವಳಿ,

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಢಿಕ್ಕಿ ➤‌ ಚಾಲಕ ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಕ್ತಚಂದನ ಮರದ ದಿಮ್ಮಿ ಅಕ್ರಮ ದಾಸ್ತಾನು ಪ್ರಕರಣ ➤‌ ಆರೋಪಿಗಳ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಬೆಳ್ತಂಗಡಿ ತಾಲೂಕಿನ ಮೂಡಿಕೋಡಿ ಗ್ರಾಮ ಅಂಬಲೋಡಿ ಮೀಸಲು ಅರಣ್ಯ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ರಕ್ತಚಂದನ ಮರದ ದಿಮ್ಮಿಗಳನ್ನು ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ನ್ಯಾಯಾಲಯವು ತಿರಸ್ಕರಿಸಿದೆ. ಸೆ.12ರಂದು ಆರೋಪಿಗಳಾದ ಯಶವಂತ ಪೂಜಾರಿ ಮತ್ತು ಸಂತೋಷ್ ಭಂಡಾರಿ ಅವರು 23 ರಕ್ತಚಂದನ ದಿಮ್ಮಿಗಳು ಮತ್ತು 3 ಕಟ್ಟಿಗಳನ್ನು ಅಕ್ರಮವಾಗಿ ದಾಸ್ತಾನಿರಿಸಿದ್ದ ಕುರಿತು ಮಾಹಿತಿ ಪಡೆದ ಅರಣ್ಯ ಸಂಚಾರಿ ಪೊಲೀಸರು ಆರೋಪಿಗಳನ್ನು

ರಕ್ತಚಂದನ ಮರದ ದಿಮ್ಮಿ ಅಕ್ರಮ ದಾಸ್ತಾನು ಪ್ರಕರಣ ➤‌ ಆರೋಪಿಗಳ ಜಾಮೀನು ಅರ್ಜಿ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಯರಿಗೆ ಕಿರುಕುಳ ಆರೋಪ ➤‌ ದೂರು ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಕಲ್ಲೇಗ ಶೇವಿರೆ ಸಮೀಪ ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿಯೋರ್ವಳು ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ ಘಟನೆ ವರದಿಯಾಗಿದೆ. ಯುವತಿಯರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಯುವಕರ ತಂಡವೊಂದು ಯುವತಿಯರನ್ನು ಅಡ್ಡಗಟ್ಟಿ ಚುಡಾಯಿಸಿ, ಕಿರುಕುಳ ನೀಡಿರುವುದಾಗಿ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಮಹಿಳಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪುತ್ತೂರು: ಯುವತಿಯರಿಗೆ ಕಿರುಕುಳ ಆರೋಪ ➤‌ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿ ➤‌ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 24. ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೇಪು ಎಂಬಲ್ಲಿ ವರದಿಯಾಗಿದೆ. ಮೃತರನ್ನು ಬದಿಯಡ್ಕ ನಿವಾಸಿ ಸಂದೇಶ್ (33) ಎಂದು ಗುರುತಿಸಲಾಗಿದೆ. ಬಿಜೆಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಇವರು ಸೆ. 23ರಂದು ಸಂಜೆ ವೇಳೆ ವಿಟ್ಲದಿಂದ ಬದಿಯಡ್ಕದ ಕಡೆಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರ

ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿ ➤‌ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಕ್ಕಡ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤‌ ಆರೋಪಿಗೆ ಜೈಲುಶಿಕ್ಷೆ

(ನ್ಯೂಸ್ ಕಡಬ) newskadaba.com ಕೊಕ್ಕಡ, ಸೆ 24. ಅಪ್ರಾಪ್ತೆ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ಕೊಕ್ಕಡದ ಪದ್ಮನಾಭ ಎಂಬಾತ ಶಿಕ್ಷೆಗೊಳಗಾದವ. ಈತ 2019ರ ಆಗಸ್ಟ್ 17ರಂದು ಮಧ್ಯಾಹ್ನ ತರಗತಿ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ, ಆಕೆಯ ಮಾನಕ್ಕೆ ಕುಂದುಂಟಾಗುವಂತೆ ಆಕೆಯ ಕೈ ಹಿಡಿದು ಎಳೆದಿದ್ದ. ಈ ವೇಳೆ ನೊಂದ ಬಾಲಕಿ

ಕೊಕ್ಕಡ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤‌ ಆರೋಪಿಗೆ ಜೈಲುಶಿಕ್ಷೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಪರ್ಸ್ ಕದ್ದ ವೃದ್ಧೆ ➤‌ ಬಸ್ಸಿಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ, ವೃದ್ಧೆ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರೋರ್ವರ ಪರ್ಸ್‌ ಅನ್ನು ವೃದ್ಧೆಯೋರ್ವರು ಎಗರಿಸಿದ್ದ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿಯವರು ಮಂಗಳವಾರದಂದು ಖಾಸಗಿ ಬಸ್ ನಲ್ಲಿ ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ವೇಳೆ ಬ್ಯಾಗ್ ನಲ್ಲಿದ್ದ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಯೋಜನಾಧಿಕಾರಿಯವರು ಪುತ್ತೂರು ನಗರ ಪೊಲೀಸ್ ಠಾಣೆಗೆ

ಪುತ್ತೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಪರ್ಸ್ ಕದ್ದ ವೃದ್ಧೆ ➤‌ ಬಸ್ಸಿಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ, ವೃದ್ಧೆ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top