ಕ್ರೈಮ್ ನ್ಯೂಸ್

ಸುಳ್ಯ: ಇಲಿಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 11. ಇಲಿ ಜ್ವರಕ್ಕೆ ತುತ್ತಾಗಿ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಜಯನಗರ ಎಂಬಲ್ಲಿ ವರದಿಯಾಗಿದೆ. ಮೃತ ಯುವಕನನ್ನು ನಿತ್ಯಾದರ್ ಸಮುದಾಯದ ಜುಲಿಯಾನ ಡಿಸೋಜಾರವರ ಮಗ ಆಕರ್ಷ್ ಎಲೋಸಿಯಸ್ ಕ್ರಾಸ್ತ(35) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಂಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಇಲಿಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ➤‌ ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮೂರು ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಕಲ್ಲಾಪಿನಲ್ಲಿ ಇಂದು ರಾತ್ರಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ಮೂರು ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ➤‌ ಹಲವರು ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 09. ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟ ಘಟನೆ ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರದಂದು ನಡೆದಿದೆ. ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಳಗ್ಗೆ ಸುಮಾರು 8.50ರ ಹೊತ್ತಿಗೆ ಕಟ್ಟಡ ಕುಸಿದು ಬಿದ್ದಿದ್ದು, ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ ➤ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಲೈನ್ ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ ಮೃತ ವ್ಯಕ್ತಿಯನ್ನು ಕಡಬ ಸಮೀಪದ ಕುಂತೂರು ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ. ಮನೋಜ್ ಅವರು ಮರದ ಕೊಂಬೆಯೊಂದನ್ನು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತು. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.

ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಲೈನ್ ತಗುಲಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತಿ- ಪತ್ನಿಯ ನಡುವೆ ಜಗಳ ಕೊಲೆಯಲ್ಲಿ ಅಂತ್ಯ ➤ ಪತ್ನಿಯ ಕತ್ತು ಕೊಯ್ದ ಪತಿರಾಯ- ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 07. ದಂಪತಿಗಳಿಬ್ಬರ ನಡುವೆ ಜಗಳ ನಡೆದು, ತಾರಕಕ್ಕೇರಿ ಬಳಿಕ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಿಯಾಂಕಾ ಲೇಜೌಟ್ ನಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಪತಿ ದಿನೇಶ್ ಕೊಲೆ ಆರೋಪಿ. ಮೆಸ್ಕಾಂ ಉದ್ಯೋಗಿಯಾಗಿರುವ ದಿನೇಶ್ ತನ್ನ ಪತ್ನಿ ಮಂಜುಳಾರವರ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಲ್ಲದೇ, ತಾನೂ ಕೂಡ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ

ಪತಿ- ಪತ್ನಿಯ ನಡುವೆ ಜಗಳ ಕೊಲೆಯಲ್ಲಿ ಅಂತ್ಯ ➤ ಪತ್ನಿಯ ಕತ್ತು ಕೊಯ್ದ ಪತಿರಾಯ- ಪತ್ನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಮನೆಗೆ ಬೆಂಕಿಬಿದ್ದು ಯಜಮಾನ ಜೀವಂತ ದಹನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 07. ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಧಾಕರ್ ಅವರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಸುಟ್ಟು ಹಾಕಿದೆ. ಸುಧಾಕರರು ಅಸೌಖ್ಯಕ್ಕೀಡಾಗಿರುವ ಹಿನ್ನಲೆ

ಸುಳ್ಯ: ಮನೆಗೆ ಬೆಂಕಿಬಿದ್ದು ಯಜಮಾನ ಜೀವಂತ ದಹನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಚಪ್ಪಲಿಯಲ್ಲಿ ಅಕ್ರಮ ಚಿನ್ನ ಸಾಗಾಟ ➤ 55.39 ಲಕ್ಷ ರೂ. ಮೌಲ್ಯದ ಚಿನ್ನ ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಮತ್ತು ಮಂಗಳವಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 55.39 ಲಕ್ಷ ರೂ ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವರದಿಯಾಗಿದೆ. ಸೋಮವಾರದಂದು ದುಬೈನಿಂದ ಬಂದಿದ್ದ ಮೂವರು ಚಪ್ಪಲಿ ಮತ್ತು ಬನಿಯಾನ್ ನಲ್ಲಿ ಪೇಸ್ಟ್ ರೂಪದಲ್ಲಿ 24 ಕ್ಯಾರೆಟ್ ಪರಿಶುದ್ದತೆಯ 897 ಗ್ರಾಂ. ತೂಕದ 45,65,730 ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು

ಮಂಗಳೂರು: ಚಪ್ಪಲಿಯಲ್ಲಿ ಅಕ್ರಮ ಚಿನ್ನ ಸಾಗಾಟ ➤ 55.39 ಲಕ್ಷ ರೂ. ಮೌಲ್ಯದ ಚಿನ್ನ ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 06. ತೆಂಗಿನಕಾಯಿ ಕೀಳಲು ಮರವೇರಿದ ವೇಳೆ ಗೂಡುಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ ಹಾಗೂ ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಉಳ್ಳಾಲ ಬೈಲು ನಿವಾಸಿ ಜಿತನ್‌ ರೆಸ್ಕಿನ(40), ಪ್ರವೀಣ್ ಪೂಜಾರಿ ಹಾಗೂ ಅವರ ಮಗಳು ದೃತಿ ಎಂದು ಗುರುತಿಸಲಾಗಿದೆ. ಜಿತನ್ ಅವರು ವೃತ್ತಿಪರ ತೆಂಗಿನಕಾಯಿ

ಉಳ್ಳಾಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಗರದ ವಿವಿಧ ಕಡೆಗಳಲ್ಲಿ ಮಹಿಳೆಯರ ಸರ ದೋಚುತ್ತಿದ್ದ 3 ಜನ ಆರೋಪಿಗಳನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಿಲಿಕುಲ ನಿಸರ್ಗಧಾಮ ನಗರದ ಜಗದೀಶ್(39), ಉರ್ವ ಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ(40), ಮಂಗಳೂರಿನ ಪದವಿನಂಗಡಿ ನಿವಾಸಿ ಸುರೇಶ್ ರೈ(39) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ

ಮಂಗಳೂರು: ಮಹಿಳೆಯರ ಸರಗಳ್ಳತನ ಪ್ರಕರಣ ➤ ಮೂವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರಿನಲ್ಲೇ ಹೃದಯಾಘಾತ- ಬಿಜೆಪಿ ಶಾಸಕ ನಿಧನ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 06. ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರವಿಂದ್ ಗಿರಿ(65) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಸಕ ಅರವಿಂದ್ ಅವರು ಇಂದು ಬೆಳಗ್ಗೆ ಲಕ್ನೋ ಗೆ ತೆರಳುತ್ತಿದ್ದ ವೇಳೆ ತಮ್ಮ ಕಾರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅರವಿಂದ್ ಗಿರಿ 1993 ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿ 2006 ರಲ್ಲಿ ಎಸ್ ಪಿ ಅಭ್ಯರ್ಥಿಯಾಗಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಶಾಸಕ ಅರವಿಂದ್ ನಿಧನಕ್ಕೆ ಮುಖ್ಯಮಂತ್ರಿ

ಕಾರಿನಲ್ಲೇ ಹೃದಯಾಘಾತ- ಬಿಜೆಪಿ ಶಾಸಕ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top