ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ:  ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, . 05. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, ಪಾನ್ ಪರಾಗ್, ಮಧು, ಮಾರುತಿ, ಕೂಲ್ ಲಿಪ್ ಬೇರೆ ಬೇರೆ ರೀತಿಯ ತಂಬಾಕು ಉತ್ಪನ್ನಗಳನ್ನು ಹಾಗೂ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ, ಆರೋಗ್ಯ […]

ಸುಬ್ರಹ್ಮಣ್ಯ:  ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವಸ್ತು ಸಾಗಾಟ: ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, . 04. ಸುಮಾರು 30.22 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಯಾರು ಮಾಸ್ತಿಕುಂಡುವಿನ ಅಬ್ದುಲ್ ಶೇಖ್ (44) ಎಂದು ಗುರುತಿಸಲಾಗಿದೆ. ಕೂಡ್ಲು ರಾಮದಾಸ ನಗರ ಉಳಿಯತ್ತಡ್ಕ ಪಾರೆಕಟ್ಟೆ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್‌ನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಈತನ ಬಳಿ ಇದ್ದ 13,300 ರೂ.ವನ್ನು ವಶಪಡಿಸಿ ಕೊಳ್ಳಲಾಗಿದೆ.

ಮಾದಕ ವಸ್ತು ಸಾಗಾಟ: ಓರ್ವ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04. ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿಗಿದೆ.  

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ Read More »

ಕ್ರೈಮ್ ನ್ಯೂಸ್

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ನೇತ್ರಾವದಿ ನದಿಯಲ್ಲಿ ಈಜಾಡಲು ತೆರಳಿ ನೀರುಪಾಲಾಗಿದ್ದ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಸೋಮವಾರ ನೇತ್ರಾವತಿ ಈಜಾಡಲು ಸಂಜೆ ನದಿಯಲ್ಲಿ ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ಎಂಬಲ್ಲಿಯ ಓಡಿ ಎಂಬವರ

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಆಟೋ ಚಾಲಕನನ್ನು ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್‌( 28) ಎಂದು ಗುರುತಿಸಲಾಗಿದೆ. ನವಂಬರ್‌ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 02. ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕವಿತಾಳ ಗ್ರಾಮದ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ದೇವತಗಲ್ ಗ್ರಾಮದ ನಿವಾಸಿ ರಂಗನಾಥ ನಾಯಕ (35) ಎಂದು ಗುರುತಿಸಲಾಗಿದೆ. ಲಿಂಗಸುಗೂರು ಮೂಲಕ ರಾಯಚೂರಿಗೆ ಬರುತ್ತಿದ್ದ ಬಾದಾಮಿ ಘಟಕಕ್ಕೆ ಸೇರಿದ ವಾಯುವ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್- ಸರ್ಕಾರಿ ಬಸ್ ಡಿಕ್ಕಿ: ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ: ಮೂವರು ಕಾರ್ಮಿಕರು ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಆನೇಕಲ್, ಡಿ. 02. ಅನಿಲ ಸೋರಿಕೆಯಾಗಿ ಸಿಲಿಂಡರ್ ಬ್ಲಾಸ್ಟ್ ಆಗಿರುವ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ. ಇಂದು ಬೆಳ್ಳಂಬೆಳಿಗ್ಗೆ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಅಸ್ಸಾಂ ಮೂಲದ ಬಿದನ್ ದಾಸ್, ದಯಾಲ್ ಶಾಂತಿ ಹಾಗೂ ಗುಲಾಭ ಕರ್ಮಾಕರ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.  

ಸಿಲಿಂಡರ್ ಸ್ಫೋಟ: ಮೂವರು ಕಾರ್ಮಿಕರು ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 02. ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ನವೀನ ನಾರಾಯಣ ಬೆಳಗಾಂವಕರ್ (13) ಎಂದು ಗುರುತಿಸಲಾಗಿದೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ. ಗಂಟಲಲ್ಲಿ

ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್

ಕರ್ತವ್ಯಕ್ಕೆ ಹಾಜರಾಗುವ ವೇಳೆ ಐಪಿಎಸ್ ಅಧಿಕಾರಿ ಮೃತ್ಯು- ಜೀಪ್‌ ಚಾಲಕನ ವಿರುದ್ಧ ಎಫ್‌ಐಆರ್‌

(ನ್ಯೂಸ್ ಕಡಬ) newskadaba.com ಹಾಸನ, ಡಿ. 02. ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಮೃತಪಟ್ಟ ಘಟನೆ ಪ್ರಕರಣ ಸಂಬಂಧ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪ್‌ ಚಾಲಕ ಮಂಜೇಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ. ಮೈಸೂರಿನಿಂದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ

ಕರ್ತವ್ಯಕ್ಕೆ ಹಾಜರಾಗುವ ವೇಳೆ ಐಪಿಎಸ್ ಅಧಿಕಾರಿ ಮೃತ್ಯು- ಜೀಪ್‌ ಚಾಲಕನ ವಿರುದ್ಧ ಎಫ್‌ಐಆರ್‌ Read More »

ಕ್ರೈಮ್ ನ್ಯೂಸ್
Scroll to Top