ಕ್ರೈಮ್ ನ್ಯೂಸ್

ಮಾಣಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 01. ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ಸಂಜೆ ನಡೆದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಮಾಣಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಡ್ಡಿಯಲ್ಲಿ ಪದೇ ಪದೇ ಮೂತ್ರ ಮಾಡುತ್ತಿದ್ದ ಬಾಲಕ ➤‌ ಬೆಂಕಿ ಕಡ್ಡಿ ಹೊತ್ತಿಸಿ ಬಾಲಕನ ಖಾಸಗಿ ಅಂಗವನ್ನು ಸುಟ್ಟ ಶಿಕ್ಷಕಿ

(ನ್ಯೂಸ್ ಕಡಬ) newskadaba.com ತುಮಕೂರು, ಸೆ. 01. ಆಗಾಗ್ಗ ಪ್ಯಾಂಟ್ ಒದೆ ಮಾಡಿಕೊಳ್ಳುತ್ತಿದ್ದ ಮೂರು ವರ್ಷದ ಬಾಲಕನ ಮಾರ್ಮಾಂಗವನ್ನು ಸುಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೊಡೇಕೆರೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಾರದ ಹಿಂದೆ ನಡೆದಿದೆ. ಆರೋಪಿ ಸಹಾಯಕ ಶಿಕ್ಷಕಿ ರಶ್ಮಿ ಎಂದು ಗುರುತಿಸಲಾಗಿದೆ. ಈಕೆ ಆಗಾಗ್ಗೆ ಪ್ಯಾಂಟ್ ಒದ್ದೆ ಮಾಡುತ್ತಿದ್ದ ಎಂದು ಬೆಂಕಿ ಕಡ್ಡಿ ಹೊತ್ತಿಸಿ ಅಪ್ರಾಪ್ತ ಬಾಲಕನ ಖಾಸಗಿ ಅಂಗವನ್ನು ಸುಟ್ಟಿರುವುದಾಗಿ ವರದಿಯಾಗಿದೆ. ವಾರದ ಹಿಂದೆ ಈ ಘಟನೆ ನಡೆದಿದ್ದು, ಬಾಲಕನ ಅಜ್ಜಿಯು ಸ್ನಾನ ಮಾಡಿಸುತ್ತಿದ್ದ

ಚಡ್ಡಿಯಲ್ಲಿ ಪದೇ ಪದೇ ಮೂತ್ರ ಮಾಡುತ್ತಿದ್ದ ಬಾಲಕ ➤‌ ಬೆಂಕಿ ಕಡ್ಡಿ ಹೊತ್ತಿಸಿ ಬಾಲಕನ ಖಾಸಗಿ ಅಂಗವನ್ನು ಸುಟ್ಟ ಶಿಕ್ಷಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು ➤‌ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 01. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕಂದಕಕ್ಕೆ ಬಿದ್ದು, ನಾಲ್ವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಚಾಲಕ ಕಟ್ಟೆಮಜಲು ನಿವಾಸಿ ರಜನೀಶ್, ಪ್ರಯಾಣಿಕರಾದ ದಯಾನಂದ್, ಭವಿತಾ ಹಾಗೂ ಚೇತನಾ ಎಂದು ಗುರುತಿಸಲಾಗಿದೆ. ಇವರೆಲ್ಲ ನೆಲ್ಯಾಡಿಯಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ನೆಲ್ಯಾಡಿ: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು ➤‌ ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆಲಂಕಾರು: ಸಿಡಿಲು ಬಡಿದು ದನ ಮೃತ್ಯು

(ನ್ಯೂಸ್ ಕಡಬ) newskadaba.com ಆಲಂಕಾರು, ಸೆ. 01. ಆಲಂಕಾರು ಗ್ರಾಮದ ಕೇಪುಳು ಜನಾರ್ಧನ ಪೂಜಾರಿಯವರ ಹಟ್ಟಿಗೆ ಆ. 31 ರಂದು ಸಂಜೆ ಸಿಡಿಲು ಬಡಿದ ಪರಿಣಾಮ ದನವೊಂದು ಮೃತಪಟ್ಟ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸದಾನಂದ ಆಚಾರ್ಯ, ಗ್ರಾಮ ಸಹಾಯಕರಾದ ವಿಶ್ವನಾಥ ಹಾಗು ಪಶುಸಂಗೋಪನೆ ಇಲಾಖೆಯ ವೈದ್ಯರಾದ ಡಾ|ಅಜಿತ್, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಗಣೇಶ್ ರೈ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಲಂಕಾರು: ಸಿಡಿಲು ಬಡಿದು ದನ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಂದಿ ಜ್ವರಕ್ಕೆ ತುಂಬು ಗರ್ಭಿಣಿ ಬಲಿ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 01. ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ ಬಲಿಯಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ. ಇವರಿಗೆ 4 ವರ್ಷದ ಗಂಡು ಮಗು ಇದ್ದು, ಇದೀಗ 2ನೇ ಮಗುವಿನ ನಿರೀಕ್ಷೆಯಲ್ಲಿದ್ದ 9 ತಿಂಗಳ ಗರ್ಭಿಣಿ ಛಾಯಾಗೆ ಎಚ್1ಎನ್1 ಸೋಂಕು ತಗುಲಿತ್ತು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಂದಿ ಜ್ವರಕ್ಕೆ ತುಂಬು ಗರ್ಭಿಣಿ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೇವರ ವಿಗ್ರಹವನ್ನು ಕದ್ದೊಯ್ದ ಅರ್ಚಕ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 01. ತಾನು ಪೂಜೆ ಮಾಡುತ್ತಿದ್ದ ದೇವರ ವಿಗ್ರಹವನ್ನು ದೇವಸ್ಥಾನದ ಅರ್ಚಕನೇ ಕದ್ದಿರುವ ಘಟನೆ ವಿರಾಜಪೇಟೆ ಸಮೀಪದ ಪೆರುಂಬಾಡಿ – ಬಾಳುಗೋಡು ದೇವಸ್ಥಾನವೊಂದರಲ್ಲಿ ನಡೆದಿದೆ. ಅರ್ಚಕನು ವಿಗ್ರಹವನ್ನು ಚೀಲದಲ್ಲಿ ಹಾಕಿ ಕೊಂಡು ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯ ವ್ಯಕ್ತಿಯೋರ್ವ ವಿಷಯವನ್ನು ದೇವಸ್ಥಾನದ ಆಡಳಿತ ಮಂಡಳಿಗೆ ತಿಳಿಸಿದ್ದು, ತಕ್ಷಣವೇ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆಡಳಿತ ಮಂಡಳಿಯವರಿಗೆ ವಿಗ್ರಹ ಕಳವಾಗಿರುವುದು ಕಂಡುಬಂದಿದೆ. ಕೂಡಲೇ ದೇವಸ್ಥಾನದ ಅರ್ಚಕನಿಗೆ ಕರೆ ಮಾಡಿದ ಆಡಳಿತ ಮಂಡಳಿ “ವಿಗ್ರಹವನ್ನು

ದೇವರ ವಿಗ್ರಹವನ್ನು ಕದ್ದೊಯ್ದ ಅರ್ಚಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ಮಹಿಳೆ ಅನುಮಾನಾಸ್ಪದ ಸಾವು ➤‌ ಪತಿ ಕೊಲೆಗೈದಿರುವ ಶಂಕೆ

(ನ್ಯೂಸ್ ಕಡಬ) newskadaba.com ಕೊಕ್ಕಡ, ಆ. 31. ಇಲ್ಲಿನ ವಿವಾಹಿತ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿದ್ದು, ಪತಿಯೇ ಕೊಲೆಗೈದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಮೃತರನ್ನು ಕೊಕ್ಕಡ ಗ್ರಾಮದ ಅಗರ್ತ ನಿವಾಸಿ ಗಣೇಶ್‌ ಗೌಡ ಅವರ ಪತ್ನಿ ಮೋಹಿನಿ(36) ಎಂದು ಗುರುತಿಸಲಾಗಿದೆ. ಇವರ ಪತಿ ಗಣೇಶ ಗೌಡನಿಗೆ ಕುಡಿತದ ಚಟವಿದ್ದು, ಪತ್ನಿ ಜತೆ ಜಗಳ ನಡೆದು ಗಲಾಟೆ ವಿಕೋಪಕ್ಕೆ ತಿರುಗಿ ಹಲ್ಲೆಗೈದ ಪರಿಣಾಮ ಮೋಹಿನಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದ್ದು, ಮಹಿಳೆ ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪಿಎಸ್‌ಐ

ಕೊಕ್ಕಡ: ಮಹಿಳೆ ಅನುಮಾನಾಸ್ಪದ ಸಾವು ➤‌ ಪತಿ ಕೊಲೆಗೈದಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 29. ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಪ್ಪೆಟ್ಟಿಯಲ್ಲಿ ಸೋಮವಾರದಂದು ನಡೆದಿದೆ. ಮೃತ ಸವಾರನನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ (20) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಟಿಪ್ಪರ್ ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಉಪ್ಪಿನಂಗಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಢಿಕ್ಕಿ ➤‌ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೂಂಜಾಲಕಟ್ಟೆ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤‌ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ಆ. 29. ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಶಫೀಕ್ ಎಂದು ಗುರುತಿಸಲಾಗಿದೆ. ಈತ ಕರಾಯದಿಂದ ಮಂಗಳೂರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್ ಢಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ

ಪೂಂಜಾಲಕಟ್ಟೆ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤‌ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಎರ್ಟಿಗಾ ಹಾಗೂ ಓಮ್ನಿ ನಡುವೆ ಅಪಘಾತ ➤‌ ಏಳು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಆ.27. ಎರ್ಟಿಗಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಶನಿವಾರದಂದು ನಡೆದಿದೆ. ಬೆಂಗಳೂರು ಮೂಲದ‌ ಕುಟುಂಬವು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ನೆಟ್ಟಣ ಅಮಲ ಫಾರ್ಮ್ ಬಳಿ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ

ಕಡಬ: ಎರ್ಟಿಗಾ ಹಾಗೂ ಓಮ್ನಿ ನಡುವೆ ಅಪಘಾತ ➤‌ ಏಳು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top