ಮಾಣಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಗಂಭೀರ
(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 01. ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ಸಂಜೆ ನಡೆದಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಮಾಣಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಗಂಭೀರ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್






