ಕ್ರೈಮ್ ನ್ಯೂಸ್

ನೆಲ್ಯಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 27. ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಈಚರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ಸಿನಲ್ಲಿದ್ದ ಮಗು ಹಾಗೂ ತಂದೆ ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಡ್ಡಹೊಳೆಯಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ತಂದೆ ಹಾಗೂ ಮಗುವಿಗೆ ಗಾಯಗಳಾಗಿವೆ. ಅಲ್ಲದೇ ಈಚರ್ ಲಾರಿಯ ಚಾಲಕನಿಗೂ ಸಣ್ಣಪುಟ್ಟ […]

ನೆಲ್ಯಾಡಿ: ಬಸ್ ಹಾಗೂ ಲಾರಿ ನಡುವೆ ಢಿಕ್ಕಿ ಇಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿಯ ವ್ಯಕ್ತಿ ಕೊಕ್ಕಡದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 27. ನೆಲ್ಯಾಡಿಯ ವ್ಯಕ್ತಿಯೋರ್ವರು ತನ್ನ ಪತ್ನಿ ಮನೆಯಾದ ಕೊಕ್ಕಡದಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಗ್ರಾಮದ ಮಾದೇರಿ ಪಲಸತಡ್ಕ ನಿವಾಸಿ ವಸಂತ ಮಾಡಿವಾಳ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ ಕಾವಲುಗಾರನಾಗಿ ಕೆಲಸ ಮಾಡಿಕೊಂಡಿದ್ದ ಇವರು, ಆ. 25ರಂದು ಮಧ್ಯಾಹ್ನ ಕೊಕ್ಕಡ ಗ್ರಾಮದ ಕೆಂಪಕೋಡಿಯಲ್ಲಿರುವ ಪತ್ನಿಯ ಮನೆಗೆ ಬಂದು ಮದ್ಯದ ಜೊತೆ ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಮನೆಯವರು ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ನೆಲ್ಯಾಡಿಯ ವ್ಯಕ್ತಿ ಕೊಕ್ಕಡದಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತಮಿಳುನಾಡಿನಲ್ಲಿ ರಸ್ತೆ ಅಪಘಾತ ➤‌ ಮಂಗಳೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ತಮಿಳುನಾಡಿನ ಆಂಬೂರು ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತ‌ದಲ್ಲಿ ಬಿ.ಸಿ.ರೋಡಿನ ಯುವಕನೋರ್ವ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ. ಮೃತರನ್ನು ಇರ್ಷಾದ್ ತಲಪಾಡಿ (37) ಎಂದು ಗುರುತಿಸಲಾಗಿದೆ. ಮಂಗಳೂರು ಬಂದರಿನಿಂದ ತಮಿಳುನಾಡಿನ ಚೆನ್ನೈ ಮಾರುಕಟ್ಟೆಗೆ ಮೀನು ಸಾಗಿಸುತ್ತಿದ್ದ ಲಾರಿಯು ಆಂಬೂರ್ ಎಂಬಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆನ್ನಲಾಗಿದೆ.

ತಮಿಳುನಾಡಿನಲ್ಲಿ ರಸ್ತೆ ಅಪಘಾತ ➤‌ ಮಂಗಳೂರಿನ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ರುಂಡ ಕತ್ತರಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ. 27. ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಆತನ ರುಂಡವನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ತಾರಿಹಾಳ್ ಕ್ರಾಸ್ ಬಳಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಗದಗಯ್ಯ ಹಿರೇಮಠ ಎಂದು ಗುರುತಿಸಲಾಗಿದೆ. ಇವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ತಾರಿಹಾಳ ಕ್ರಾಸ್ ಬಳಿ ತಡೆದ ದುಷ್ಕರ್ಮಿಗಳು, ಅವರ ರುಂಡವನ್ನು ಕತ್ತರಿಸಿದ್ದಾರೆ. ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ಧು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹಿರೇಬಾಗೇವಾಡಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ರುಂಡ ಕತ್ತರಿಸಿದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಸಿಎಂ ಸಿದ್ದರಾಮಯ್ಯರವರ ಸಹೋದರ ನಿಧನ

(ನ್ಯೂಸ್ ಕಡಬ) newskadaba.com ಮೈಸೂರು, ಆ. 27. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ವಾಸವಾಗಿದ್ದ ಸಿದ್ದರಾಮೇಗೌಡ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಸಿದ್ದರಾಮಯ್ಯನವರು ಒಂದು ದಿನದ ಹಿಂದೆಯಷ್ಟೇ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ನಿನ್ನೆ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.  

ಮಾಜಿ ಸಿಎಂ ಸಿದ್ದರಾಮಯ್ಯರವರ ಸಹೋದರ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ ➤‌ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 26. ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ಸಿಬ್ಬಂದಿಗಳು, ಬೆಳೆಬಾಳುವ ದಿಮ್ಮಿ ಸಹಿತ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಪದ್ಮುಂಜ ನಿವಾಸಿಗಳಾದ ದಿನೇಶ್, ಉಮೇಶ್ ಗೌಡ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಬಂಧಿತರು ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿರುವ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ

ಉಪ್ಪಿನಂಗಡಿ: ರಕ್ಚಿತಾರಣ್ಯದಿಂದ ಮರ ಕಡಿದು ಸಾಗಾಟಕ್ಕೆ ಸಿದ್ದತೆ ➤‌ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರತ್ಯೇಕ ಪ್ರಕರಣ- ವ್ಯಕ್ತಿಗಳಿಬ್ಬರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 25. ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಬಲ್ಲಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೊಂದು ಪ್ರಕರಣದಲ್ಲಿ ಉಪ್ಪಿನಂಗಡಿ ನಲಿಕೆಮಜಲು ನಿವಾಸಿ ಶೀನಪ್ಪ ಗೌಡರವರು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಪ್ರತ್ಯೇಕ ಪ್ರಕರಣ- ವ್ಯಕ್ತಿಗಳಿಬ್ಬರು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೋಳಿತೊಟ್ಟು: ಟಿಪ್ಪರ್- ಸ್ಕೂಟಿ ನಡುವೆ ಢಿಕ್ಕಿ ➤‌ ತಾಯಿ- ಮಗನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 25. ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತಾಯಿ- ಮಗ ಗಾಯಗೊಂಡ ಘಟನೆ ಕಾಂಚನ – ಶಾಂತಿನಗರ ರಸ್ತೆಯ ಗೋಳಿತ್ತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ನೂಜೋಲು ನಿವಾಸಿ ಕುಶಾಲಪ್ಪ ಹಾಗೂ ಅವರ ತಾಯಿ ಉಪ್ಪಿನಂಗಡಿಯಿಂದ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಟಿಪ್ಪರ್ ಅಡಿಗೆ ಬಿದ್ದಿದ್ದ ಕುಶಾಲಪ್ಪ ಹಾಗೂ ಅವರ ತಾಯಿಯನ್ನು ಕಷ್ಟಪಟ್ಟು

ಗೋಳಿತೊಟ್ಟು: ಟಿಪ್ಪರ್- ಸ್ಕೂಟಿ ನಡುವೆ ಢಿಕ್ಕಿ ➤‌ ತಾಯಿ- ಮಗನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ➤‌ 9 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ತುಮಕೂರು, ಆ. 25. ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 9 ಜನರು ಸ್ಥಳದಲ್ಲೇ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ರಾಯಚೂರು ಮತ್ತು ಮಾನ್ವಿ ಮೂಲದ ಜನರು ಕೂಲಿಗೆಂದು ಅರಸಿ ಕ್ರೂಸರ್ ವಾಹನದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಒಂಬತ್ತು ಜನ ಸಾವನ್ನಪ್ಪಿ, ಹಲವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆ

ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ➤‌ 9 ಮಂದಿ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ನಿವಾಸಿ ರಮಾನಂದ(42) ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದ ಬಾವಿಗೆ ನಿನ್ನೆ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದು, ಸಂಜೆವರೆಗೂ ಇವರನ್ನು ಕಾಣದೇ ಇದ್ದಾಗ ಆತಂಕಗೊಂಡು ಮನೆಯವರು ಹುಡುಕಾಡಿದಾಗ ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಸಿಕ್ಕಿದೆ. ತಕ್ಷಣವೇ ಗ್ರಾ.ಪಂ. ಅಧ್ಯಕ್ಷರಾದ ಹೇಮಂತ್ ರವರು ಬೆಳ್ತಂಗಡಿ ಅಗ್ನಿಶಾಮಕದಳಕ್ಕೆ ಮಾಹಿತಿ

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top