ಕ್ರೈಮ್ ನ್ಯೂಸ್

ಪುತ್ತೂರು: ಪತಿಯ ಉತ್ತರಕ್ರಿಯಾ ದಿನದಂದೇ ಪತ್ನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಾಣಾಜೆ, ಆ. 20. ಪತಿಯ ಉತ್ತರಕ್ರಿಯೆಯ ದಿನದಂದೇ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಾಣಾ ಎಂಬಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ಅವರ ಪತ್ನಿ ವಸಂತಿ ಎಂದು ಗುರುತಿಸಲಾಗಿದೆ. ಇಂದು ಕೃಷ್ಣ ನಾಯ್ಕರ ಉತ್ತರ ಕ್ರಿಯಾದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ ಬಿಡುವ ಸಂದರ್ಭ ಮನೆಯಲ್ಲಿದ್ದ ಪತ್ನಿ ವಸಂತಿರವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ […]

ಪುತ್ತೂರು: ಪತಿಯ ಉತ್ತರಕ್ರಿಯಾ ದಿನದಂದೇ ಪತ್ನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕೊಲೆಯತ್ನ ➤‌ ಓರ್ವನ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಇಲ್ಲಿನ ಹೊರವಲಯದ ವಳಚ್ಚಿಲ್ ಎಂಬಲ್ಲಿ ನಡೆದಿದೆ. ಚೂರಿ ಇರಿತ್ಕೊಳಗಾದವನನ್ನು ಮಿಫ್ತಾಹ್ ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ವೇಳೆ ಈತನನ್ನು ತಡೆದ ಗ್ಯಾಂಗ್ ಒಂದು ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಲು ಯತ್ನಿಸಿದ್ದು, ಈ ಸಂದರ್ಭ ತಡೆಯಲು ಬಂದ ಯುವಕನ ಮಾವ ಆಸೀಫ್(30) ಎಂಬವರ ಮೇಲೆ ತಂಡ ಏಕಾಏಕಿ ತಲವಾರು ಹಾಗೂ ಇನ್ನಿತರ ಮಾರಕಾಸ್ರ್ತಗಳಿಂದ ದಾಳಿ

ಮಂಗಳೂರು: ಕೊಲೆಯತ್ನ ➤‌ ಓರ್ವನ ಸ್ಥಿತಿ ಚಿಂತಾಜನಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಕತ್ತಿಯಿಂದ ಹಲ್ಲೆ- ಬಸ್ಸಿಗೆ ಕಲ್ಲು ತೂರಾಟ ➤‌ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 19. ವ್ಯಕ್ತಿಯೋರ್ವ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಶುಕ್ರವಾರದಂದು ಇಲ್ಲಿನ ಕಾನಾ ಸಮೀಪ ನಡೆದಿದೆ. ಗಾಯಾಳು ಹಾಗೂ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಆರೋಪಿಯು ಮೇಲ್ನೋಟಕ್ಕೆ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದಾನೆ ಎಂದು ತಿಳಿದು ಬಂದಿದೆ. ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು

ಸುರತ್ಕಲ್: ಕತ್ತಿಯಿಂದ ಹಲ್ಲೆ- ಬಸ್ಸಿಗೆ ಕಲ್ಲು ತೂರಾಟ ➤‌ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನಿಲ್ಲಿಸಿದ್ದ ಸ್ಕೂಟಿ ಕದ್ದು ಪೊಲೀಸರ ಅತಿಥಿಯಾದ ಕೇರಳ ಮೂಲದ ಕೊಲೆ ಆರೋಪಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 17. ಕೊಲೆ ಪ್ರಕರಣವೊಂದರ ಆರೋಪಿಯಾಗಿದ್ದು, ಕೇರಳದ ಕೋಯಿಕ್ಕೋಡ್‌ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಬಂದು ಎಂಜೀರದಲ್ಲಿ ಮಹಿಳೆಯೋರ್ವರ ಸ್ಕೂಟಿ ಕದ್ದು ಪರಾರಿಯಾಗುತ್ತಿದ್ದ ವೇಳೆ ಗುಂಡ್ಯದಲ್ಲಿ ಧರ್ಮಸ್ಥಳ ಪೊಲೀಸರ ಅತಿಥಿಯಾದ ಘಟನೆ ವರದಿಯಾಗಿದೆ. ಪೊಲೀಸರ ವಶವಾದ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿ ವಿನೀಶ್(21) ಎಂದು ಗುರುತಿಸಲಾಗಿದೆ. ರೆಖ್ಯ ಸಮೀಪದ ಎಂಜೀರ ಮಲ್ನಾಡ್ ಹೋಟೆಲ್ ಸಮೀಪ ಮಹಿಳೆಯೋರ್ವರು ಕೀಯನ್ನು ಸ್ಕೂಟಿಯಲ್ಲಿಯೇ ಬಿಟ್ಟು ಹೋಟೆಲ್‌ಗೆ ಹೋಗಿದ್ದು, ಇದೇ ವೇಳೆ ಅಲ್ಲಿಗೆ ಬಂದ ವಿನೀಶ್

ನೆಲ್ಯಾಡಿ: ನಿಲ್ಲಿಸಿದ್ದ ಸ್ಕೂಟಿ ಕದ್ದು ಪೊಲೀಸರ ಅತಿಥಿಯಾದ ಕೇರಳ ಮೂಲದ ಕೊಲೆ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಹಲ್ಲೆ ಪ್ರಕರಣ ➤‌ ತಂದೆ, ಮಗ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಬೋಳೂರು ಜಾರಂದಾಯ ದೇವಸ್ಥಾನದ ಬಳಿ ಮಂಗಳವಾರ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತಂದೆ ಹಾಗೂ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದೇವದಾಸ್ ಬೋಳೂರು (61) ಮಗ ಸಾಯಿ ಕಿರಣ್ (21) ಎಂದು ಗುರುತಿಸಲಾಗಿದೆ. ಗಾಯಗೊಂಡ ನವೀನ್ ಸಾಲ್ಯಾನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಸಾಲ್ಯಾನ್ ರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದು, ಹಲ್ಲೆಗೆ ಹಳೆಯ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ.

ಮಂಗಳೂರು: ಹಲ್ಲೆ ಪ್ರಕರಣ ➤‌ ತಂದೆ, ಮಗ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ದನ ಕಳವು ಪ್ರಕರಣ ➤‌ ಐವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೊಟ್ಟಿಗೆಯಲ್ಲಿ ಕಟ್ಟಿ ಹಾಕಲಾಗಿದ್ದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ ಘಟನೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಬಜಾಲ್‌ ಗ್ರಾಮದ ದೋಟ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಂಗಳೂರಿನ ಗುರುನಗರ ಬಂಗ್ಲೆಗುಡ್ಡೆಯ ಮಹಮ್ಮದ್‌ ಅಶ್ಪಾಕ್ ಆಲಿಯಾಸ್‌ ಶಮೀರ್‌ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಆದ್ಯಪಾಡಿ ಅಝರುದ್ದೀನ್‌ ಅಲಿಯಾಸ್‌ ಅಜರ್‌ (31), ಬಜಾಲ್‌ ಪಡ್ಪುವಿನ ಸುಹೈಲ್‌ (19), ಬಜಾಲ್‌ ಪಕ್ಕಲಡ್ಕದ ಮೊಹಮ್ಮದ್‌ ಅಫ್ರೀದ್‌ (25) ಮತ್ತು ಬಜಾಲ್‌

ಮಂಗಳೂರು: ದನ ಕಳವು ಪ್ರಕರಣ ➤‌ ಐವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯೊಳಗೆ 6 ಮಂದಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಜಮ್ಮು, ಆ. 17. ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾದ ಘಟನೆ ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ನಡೆದಿದೆ. ಆರು ಮಂದಿಯ ಮೃತದೇಹಗಳನ್ನು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದ್ದು, ವಿವರಗಳಿಗಾಗಿ ಕಾಯಲಾಗುತ್ತಿದೆ. ಇನ್ನು ಆರು ಮಂದಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯಕೀಯ ವರದಿಯಿಂದಷ್ಟೇ ತಿಳಿದು ಬರಬೇಕಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮನೆಯೊಳಗೆ 6 ಮಂದಿ ಶವವಾಗಿ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕ್ಷುಲ್ಲಕ ವಿಚಾರಕ್ಕೆ ಹಲ್ಲೆ ಪ್ರಕರಣ ➤‌ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ. 16. ಇತ್ತಂಡಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ನೌಫಲ್(29) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಮೊಹಮ್ಮದ್ ನವಾಜ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ನವಾಝ್ ಎಂಬಾತ ಆ.15 ರಂದು ಸಂಜೆ ವೇಳೆ ಮೊಬೈಲ್ ರಿಚಾರ್ಜ್ ಖಾಲಿಯಾಗಿದ್ದರಿಂದ ಮನೆಯ ಪಕ್ಕದಲ್ಲಿರುವ ನೌಫಲ್ ಎಂಬಾತನ ಅಂಗಡಿಗೆ ಹೋಗಿ ಫೋನ್ ಫೇ ಮೂಲಕ 50 ರೂ. ರಿಚಾರ್ಜ್ ಮಾಡಲು ಹೇಳಿದ್ದು,

ಕಡಬ: ಕ್ಷುಲ್ಲಕ ವಿಚಾರಕ್ಕೆ ಹಲ್ಲೆ ಪ್ರಕರಣ ➤‌ ಓರ್ವನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕ್ಷುಲ್ಲಕ ವಿಚಾರಕ್ಕೆ ಇತ್ತಂಡಗಳ ನಡುವೆ ಹಲ್ಲೆ ➤‌ ಇಬ್ಬರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಆ. 15. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಇತ್ತಂಡದೊಳಗೆ ಹಲ್ಲೆ ನಡೆದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಆತೂರಿನಲ್ಲಿ ಸೋಮವಾರದಂದು ಸಂಜೆ ನಡೆದಿದೆ. ಹಲ್ಲೆಗೊಳಗಾದವರನ್ನು ಆತೂರು ಜನತಾ ಕಾಲೊನಿ ನಿವಾಸಿ ನವಾಜ್ ಎಂಬವರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆತೂರಿನ ನೌಫಲ್ ಎಂಬವರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  

ಕಡಬ: ಕ್ಷುಲ್ಲಕ ವಿಚಾರಕ್ಕೆ ಇತ್ತಂಡಗಳ ನಡುವೆ ಹಲ್ಲೆ ➤‌ ಇಬ್ಬರು ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟೆರೇಸ್ ಮೇಲೆ ರಾಷ್ಟ್ರಧ್ವಜ ಕಟ್ಟಲೆಂದು ಮೇಲೇರಿದ ಸುಳ್ಯದ ವ್ಯಕ್ತಿ ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 15. ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಹರ್‌ ಘರ್‌ ತಿರಂಗ್‌ ಅಭಿಯಾನಕ್ಕಾಗಿ ತಮ್ಮ ಮನೆಯಲ್ಲಿ ತಿರಂಗ ಹಾರಿಸಲೆಂದು ಹೋದ ಸುಳ್ಯ ಮೂಲದ ವ್ಯಕ್ತಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ. ಮೃತರನ್ನು ಸುಳ್ಯದ ಅರ್ಚಕ ನಾರಾಯಣ ಭಟ್‌ ಅವರ ಪುತ್ರ ವಿಶ್ವಾಸ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಇವರು, ಹೆಣ್ಣೂರು ಎಚ್‌ಬಿಆರ್‌ ಬಡಾವಣೆಯ ಐದನೇ ಬ್ಲಾಕ್‌ನ ಎರಡನೇ ಮಹಡಿಯಲ್ಲಿ ತಾವು ವಾಸಿಸುತ್ತಿದ್ದ ಕಟ್ಟಡದ ಟೇರಸ್‌

ಟೆರೇಸ್ ಮೇಲೆ ರಾಷ್ಟ್ರಧ್ವಜ ಕಟ್ಟಲೆಂದು ಮೇಲೇರಿದ ಸುಳ್ಯದ ವ್ಯಕ್ತಿ ಜಾರಿ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top