ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ ➤ ಆರೋಪಿ ಸಹಿತ 37.5 ಕ್ವಿಂಟಾಲ್ ಅಕ್ಕಿ ವಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 29. ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲೆತ್ನಿಸುತ್ತಿದ್ದ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಆಹಾರ ಇಲಾಖಾ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಆರೋಪಿಗಳ ಸಹಿತ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬಂಧಿತನನ್ನು ವಾಹನ ಚಾಲಕ ಹಾಸನ ಜಿಲ್ಲೆಯ ಲಕ್ಷ್ಮೀಪುರ ನಿವಾಸಿ ನಂದೀಶ್ ಎಂದು ಗುರುತಿಸಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ ಗೋಡೌನ್ ನಲ್ಲಿ […]

ಬೆಳ್ತಂಗಡಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ ➤ ಆರೋಪಿ ಸಹಿತ 37.5 ಕ್ವಿಂಟಾಲ್ ಅಕ್ಕಿ ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫಾಝಿಲ್ ಹತ್ಯೆ ಪ್ರಕರಣ ➤ 12 ಮಂದಿ ಪೊಲೀಸ್ ವಶಕ್ಕೆ…?

(ನ್ಯೂಸ್ ಕಡಬ) newskadaba.com ಸುರತ್ಕಲ್, ಜು. 29. ಮಂಗಳಪೇಟೆ ನಿವಾಸಿ ಫಾಝಿಲ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಗಳನ್ನೂ ಕೂಡ ವಿಚಾರಣೆ ಮಾಡಲಾಗುತ್ತಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದರು. ಇನ್ನು

ಫಾಝಿಲ್ ಹತ್ಯೆ ಪ್ರಕರಣ ➤ 12 ಮಂದಿ ಪೊಲೀಸ್ ವಶಕ್ಕೆ…? Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆ ಪ್ರಕರಣದ ಮೂರನೇ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 29. ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂದು ಗುರುತಿಸಲಾಗಿದೆ. ಈತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡ ಬಗ್ಗೆ ವರದಿಯಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರದಂದು ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಎಂಬವರನ್ನು ಬಂಧಿಸಿದ್ದರು. ಆರೋಪಿಗಳನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರವೀಣ್ ಹತ್ಯೆ ಪ್ರಕರಣದ ಮೂರನೇ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹಂಪ್ಸ್ ಗೆ ಸಿಲುಕಿದ ದ್ವಿಚಕ್ರ ವಾಹನ ➤ ರಸ್ತೆಗೆ ಬಿದ್ದ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 28. ರಸ್ತೆಯಲ್ಲಿನ ಹಂಪ್ಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ನಡೆದಿದೆ.   ಮೃತ ಯುವಕನನ್ನು ಶಕ್ತಿನಗರದ ಮುತ್ತುರಾಜ್ (20)ಎಂದು ಗುರುತಿಸಲಾಗಿದೆ. ಈತ ರಾತ್ರಿ ಸುಮಾರು 8.30ಕ್ಕೆ ಕಂಕನಾಡಿಯಿಂದ ವೆನ್ಲಾಕ್ ಕಡೆಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ಸಂದರ್ಭ ಫಳ್ನೀರ್ ನ ಹೈಲ್ಯಾಂಡ್ ಆಸ್ಪತ್ರೆ ಮುಂಬಾಗದಲ್ಲಿ ಅಳವಡಿಸಲಾದ ಹಂಪ್ಸ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಈತನನ್ನು ಹೈಲ್ಯಾಂಡ್ ಆಸ್ಪತ್ರೆಗೆ

ಮಂಗಳೂರು: ಹಂಪ್ಸ್ ಗೆ ಸಿಲುಕಿದ ದ್ವಿಚಕ್ರ ವಾಹನ ➤ ರಸ್ತೆಗೆ ಬಿದ್ದ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 28. ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜದ ಆನಂದ (40) ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಕೊಯ್ಯಲೆಂದು ಮರವೇರಿದ್ದ ಇವರು, ಅಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಕರೆಂಟ್ ಶಾಕ್ ತಗುಲಿ ವ್ಯಕ್ತಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 28. ಕೃಷಿ ಕೆಲಸಕ್ಕೆಂದು ಬಂದಿದ್ದ ವ್ಯಕ್ತಿಯೋರ್ವರು ತೋಟಕ್ಕೆ ನೀರು ಹಾಯಿಸುತ್ತಿದ್ದ ವೇಳೆ ಕರೆಂಟ್ ಶಾಕ್ ತಗುಲಿ ಮೃತಪಟ್ಟ ಘಟನೆ ಅಜ್ಜಾವರ ಗ್ರಾಮದ ಮೂಳ್ಯ ಅಟ್ಲೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಮುಳ್ಯ ಅಟ್ಲೂರು ನಿವಾಸಿ ಶಿವಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಇವರು ರವಿಪ್ರಕಾಶ ಎಂಬವರ ತೋಟಕ್ಕೆ ಕೃಷಿ ಕೆಲಸಕ್ಕೆಂದು ಬಂದಿದ್ದು, ಪಂಪ್ ಹೌಸ್ ನಿಂದ ನೀರು ಬಿಡುವ ವೇಳೆ ಕರೆಂಟ್ ಶಾಕ್ ತಗುಲಿ ಅವರು ಎಸೆಯಲ್ಪಟ್ಟರು. ತಕ್ಷಣವೇ ಅಲ್ಲೇ ಇದ್ದ ರವಿಪ್ರಕಾಶ್ ಹಾಗೂ

ಸುಳ್ಯ: ಕರೆಂಟ್ ಶಾಕ್ ತಗುಲಿ ವ್ಯಕ್ತಿ ಮೃತ್ಯು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಬಂಧನ..? ➤ ಹಲವು ಶಂಕಿತರು ಪೊಲೀಸ್ ವಶಕ್ಕೆ

ವರದಿ ಕೃಪೆ: ದಿಗ್ವಿಜಯ ನ್ಯೂಸ್ (ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು‌.28. ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ದಿಗ್ವಿಜಯ ನ್ಯೂಸ್ ದೃಶ್ಯ ಮಾಧ್ಯಮವು ವರದಿ ಮಾಡಿದೆ. ಹಲವು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಬೆಳ್ಳಾರೆ ಬೂಡು ನಿವಾಸಿ ಪ್ರಮುಖ ಆರೋಪಿ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿರುವುದಾಗಿ ದಿಗ್ವಿಜಯ ನ್ಯೂಸ್ ವರದಿ ಮಾಡಿದೆ.  

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಬಂಧನ..? ➤ ಹಲವು ಶಂಕಿತರು ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಂತಿಮ ನಮನಕ್ಕೆ ಬಂದ ಆರ್ ಎಸ್ಎಸ್ ಕಾರ್ಯಕರ್ತನಿಗೆ ಲಾಠಿ ಚಾರ್ಜ್ ಹಿನ್ನೆಲೆ ➤ ಎಸ್ಐ ಸೇರಿದಂತೆ ಹಲವು ಪೊಲೀಸರ ಅಮಾನತಿಗೆ ಹಿಂಜಾವೇ ಆಗ್ರಹ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 27. ಬಿಜೆಪಿಯ ಜಿಲ್ಲಾ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ವಿಷಯ ತಿಳಿದು ಅಂತಿಮ ನಮನ ಸಲ್ಲಿಸಲೆಂದು ಕಾಸರಗೋಡಿನಿಂದ ಆಗಮಿಸಿದ್ದ ಆರೆಸ್ಸೆಸ್ ಹಿರಿಯ ಕಾರ್ಯಕರ್ತ ಪಿ. ರಮೇಶ್ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಲಾಠಿ ಬೀಸಿದ ಪೊಲೀಸರ ಅಮಾನತಿಗೆ ಹಿಂಜಾವೇ ಆಗ್ರಹಿಸಿದೆ. ಪೊಲೀಸರ ಈ ಕೃತ್ಯವನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು, ಅವರ ಮೇಲೆ ಲಾಠಿಯಿಂದ ಹಲ್ಲೆ ಮಾಡಿದ ಪೊಲೀಸರನ್ನು ಅಮಾನತುಗೊಳಿಸುವಂತೆ

ಅಂತಿಮ ನಮನಕ್ಕೆ ಬಂದ ಆರ್ ಎಸ್ಎಸ್ ಕಾರ್ಯಕರ್ತನಿಗೆ ಲಾಠಿ ಚಾರ್ಜ್ ಹಿನ್ನೆಲೆ ➤ ಎಸ್ಐ ಸೇರಿದಂತೆ ಹಲವು ಪೊಲೀಸರ ಅಮಾನತಿಗೆ ಹಿಂಜಾವೇ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರವೀಣ್ ಹತ್ಯೆ ಪ್ರಕರಣ – ಗಡಿ ಭಾಗಗಳಲ್ಲಿ ತೀವ್ರ ತಪಾಸಣೆ ➤ ಬೆಳ್ಳಾರೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.27. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕೇರಳ – ಕರ್ನಾಟಕ ಗಡಿಪ್ರದೇಶಗಳಾದ ಸಾರಡ್ಕ, ಕನ್ಯಾನ, ಸಾಲೆತ್ತೂರು ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ಬಿಗುಗೊಳಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಹಾಗೂ ಕೇರಳಕ್ಕೆ ತೆರಳುವ ವಾಹನಗಳ ಬಗ್ಗೆ ತೀವ್ರ ನಿಗಾ ಇರಿಸಲಾಗಿದೆ. ವಾಹನ ಸಂಚಾರ ವಿರಳವಾಗಿದ್ದು, ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಈಗಾಗಲೇ ಬೆಳ್ಳಾರೆಗೆ ಆಗಮಿಸಿದ್ದು, ತನಿಖೆಯನ್ನು

ಪ್ರವೀಣ್ ಹತ್ಯೆ ಪ್ರಕರಣ – ಗಡಿ ಭಾಗಗಳಲ್ಲಿ ತೀವ್ರ ತಪಾಸಣೆ ➤ ಬೆಳ್ಳಾರೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಮೃತದೇಹದ ಮೆರವಣಿಗೆ ವೇಳೆ ಮಸೀದಿಗೆ ಕಲ್ಲೆಸೆದ ಆಕ್ರೋಶಿತ ಗುಂಪು ➤ ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ ಪೊಲೀಸರು

ಫೋಟೊ ಕೃಪೆ: tv9 (ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮೃತದೇಹದ ಮೆರವಣಿಗೆ ವೇಳೆ ಆಕ್ರೋಶಿತ ಗುಂಪು ಬೆಳ್ಳಾರೆ ಮಸೀದಿಗೆ ಕಲ್ಲೆಸೆದ ವೀಡಿಯೋ ವೈರಲ್ ಆಗಿದೆ. ಬೆಳ್ಳಾರೆ ಜಂಕ್ಷನ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹಾಗೂ ವಿವಿಧ ಜನಪ್ರತಿನಿಧಿಗಳ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದ ಗುಂಪು ಪಕ್ಕದಲ್ಲಿದ್ದ ಮಸೀದಿಗೆ ಕಲ್ಲೆಸೆದಿದ್ದಾರೆ. ಅಲ್ಲದೆ ಹೋಟೆಲ್, ಫ್ಯಾನ್ಸಿಗೆ ಕಲ್ಲೆಸೆದಿದ್ದು, ಮುಂಭಾಗದ ಗಾಜಿನ ಕಪಾಟಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಪರಿಸ್ಥಿತಿ ಕೈ ಮೀರುವುದನ್ನು

ಬೆಳ್ಳಾರೆ: ಮೃತದೇಹದ ಮೆರವಣಿಗೆ ವೇಳೆ ಮಸೀದಿಗೆ ಕಲ್ಲೆಸೆದ ಆಕ್ರೋಶಿತ ಗುಂಪು ➤ ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top