ಕ್ರೈಮ್ ನ್ಯೂಸ್

ಬೆಳ್ಳಾರೆ: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 23. ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಮೃತರನ್ನು ಕಳಂಜ ಗ್ರಾಮದ ಬಾಳೆಗುಡ್ಡೆ ಕುಂಞಣ್ಣ ನಾಯ್ಕರ ಪುತ್ರಿ ಕುಸುಮ ಎಂದು ಗುರುತಿಸಲಾಗಿದೆ. ಇವರು ಜು. 20ರಂದು ಬೆಳಿಗ್ಗೆ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದರಾದರೂ ಚಿಕಿತ್ಸೆ […]

ಬೆಳ್ಳಾರೆ: ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 23. ಅಕ್ರಮವಾಗಿ ಆಲ್ಟೋ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೊಳ್ನಾಡು ಗ್ರಾಮದ ಪಂಜರಕೋಡಿ ನಿವಾಸಿ ಬಶೀರ್ (28) ಹಾಗೂ ನೌಫಾಲ್ (24) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 23. ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೈಮೇಲಿದ್ದ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದೋಚಿದ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಎಂದು ಗುರುತಿಸಲಾಗಿದೆ. ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದರು. ಮಗ ಮತ್ತು ಸೊಸೆ ಕೆಲಸದ ನಿಮಿತ್ತ ಹೊರಗಡೆ ಹೋಗಿದ್ದು, ಇಂದು ಶನಿವಾರವಾದ ಕಾರಣ

ಬೆಳ್ತಂಗಡಿ: ಚಿನ್ನಾಭರಣಕ್ಕಾಗಿ ಒಂಟಿ ವೃದ್ದೆಯ ಬರ್ಬರ ಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಭಿನ್ನಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ- ಹಲ್ಲೆ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ಖಾಸಗಿ ಸ್ಟಡಿ ಸೆಂಟರ್ ನ ಭಿನ್ನಕೋಮಿನ ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು ಪರಸ್ಪರ ಹಲ್ಲೆ ನಡೆಸಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇಮ್ರಾನ್ ಎಂಬಾತ ಹೊರಗಿನಿಂದ ಯುವಕರನ್ನು ಕರೆ ತಂದು ಹಲ್ಲೆ ನಡೆಸಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ, ಅಷ್ಟೇ ಅಲ್ಲದೆ ಬಸ್ ನಿಲ್ದಾಣದಲ್ಲಿಯೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದು, ವಿದ್ಯಾರ್ಥಿಗಳಾದ ಕಾರ್ತಿಕ್ ಅಜ್ಜಿನಡ್ಕ ಮತ್ತು ಲಿತೀಶ್ ಕಬಕ ರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಕುರಿತು

ಪುತ್ತೂರು: ಭಿನ್ನಕೋಮಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ- ಹಲ್ಲೆ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಣಿ: ಆಟೋರಿಕ್ಷಾ- ಲಾರಿ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾಣಿ, ಜು. 23. ಅಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಮಾಣಿಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂಭಾಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಆಟೋ

ಮಾಣಿ: ಆಟೋರಿಕ್ಷಾ- ಲಾರಿ ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು. 23. ಕಾಲೇಜು ಉಪನ್ಯಾಸಕರೋರ್ವರು ಹೆಬ್ರಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ (33)ಎಂದು ಗುರುತಿಸಲಾಗಿದೆ. ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಇವರಿಗೆ ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಇವರು ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ನೆಲ್ಯಾಡಿಯ ವ್ಯಕ್ತಿ ಹೆಬ್ರಿಯಲ್ಲಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ವರದಕ್ಷಿಣೆ ಕಿರುಕುಳ- ಹಲ್ಲೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 23. ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ವರದಕ್ಷಿಣೆ ಪಡೆದು ಮದುವೆಯಾಗಿರುವ ವ್ಯಕ್ತಿಯೋರ್ವ ಇದೀಗ ಮತ್ತಷ್ಟು ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ರಾಮಕುಂಜ ಆತೂರು ಪೆರ್ಜಿ ನಿವಾಸಿ ಪಿ.ಹುಸೈನ್ ಮತ್ತು ಮೈಮುನಾ ದಂಪತಿ ಪುತ್ರಿ ಸೆಮೀಮಾ ಎಂದು ಗುರುತಿಸಲಾಗಿದೆ. ಇವರನ್ನು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಸಮೀಮಾರವರು 2012ರ ಜೂ. 15ರಂದು ನನ್ನ ವಿವಾಹವು ಹಾಸನದ ಚಿಕ್ಕನಾಡು ಟಿ.ಎಚ್.ಇಮ್ರಾನ್

ಕಡಬ: ವರದಕ್ಷಿಣೆ ಕಿರುಕುಳ- ಹಲ್ಲೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತ್ತೆ ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಭೂಕುಸಿತ ➤ 18 ಕುಟುಂಬಗಳ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕೊಡಗು, ಜು. 23. ಕೊಡಗಿನಲ್ಲಿ ಮತ್ತೆ ಭಾರೀ ಶಬ್ದದೊಂದಿಗೆ ಭೂ ಕುಸಿತ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಮದೆನಾಡು ಗ್ರಾಮದ ರಾಷ್ಟ್ರೀಯ ಹೆದ್ದಾರಿ 275ರ ಬಳಿಯ ಮದೆನಾಡು, ಜೋಡುಪಾಲ, ಮೊಣ್ಣಂಗೇರಿ ಗ್ರಾಮಸ್ಥರಲ್ಲಿ ಭೂಕಂಪನದ ಅನುಭವವಾಗಿದ್ದು, ಈ ಕಂಪನ ಮತ್ತು ಭೂಕುಸಿತದಿಂದಾಗಿ ಸ್ಥಳೀಯರಲ್ಲಿ ಆತಂಕ ಇನ್ನಷ್ಟು ಹೆಚ್ಚಾಗಿದೆ. ಈಗಾಗಲೇ ಬೆಟ್ಟದ ತಪ್ಪಲಿನ 18 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮತ್ತೆ ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಭೂಕುಸಿತ ➤ 18 ಕುಟುಂಬಗಳ ಸ್ಥಳಾಂತರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಯುವಕರ ತಂಡದಿಂದ ಇಬ್ಬರ ಮೇಲೆ ಹಲ್ಲೆ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 23. ಬಾಲಕಿಯ ಮೇಲೆ ವ್ಯಕ್ತಿಯೋರ್ವರು ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಎಂದು ಗುರುತಿಸಲಾಗಿದೆ. ಕಳೆದ ಹತ್ತು ದಿನಗಳ ಹಿಂದೆ ನಾರಾಯಣ ನಾಯ್ಕ್ (47)

ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಯುವಕರ ತಂಡದಿಂದ ಇಬ್ಬರ ಮೇಲೆ ಹಲ್ಲೆ- ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮುಸ್ಲಿಂ ಗೆಳತಿಯ ಮನೆಗೆ ಬಂದ ಹಿಂದೂ ಸ್ನೇಹಿತೆ ➤ ಹಿಂದೂ ಯುವಕರಿಂದ ಕೊಲೆ ಬೆದರಿಕೆ ಆರೋಪ – ನಾಲ್ವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಜು.22. ಮುಸ್ಲಿಂ ಯುವತಿಯ ಮನೆಗೆ ಹಿಂದೂ ಸ್ನೇಹಿತೆ ತೆರಳಿದ್ದಕ್ಕೆ ಸಂಘ ಪರಿವಾರದ ಕಾರ್ಯಕರ್ತರು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 12 ರಂದು ಉಪ್ಪಿನಂಗಡಿ ರಾಮನಗರ ನಿವಾಸಿ ಕಾವ್ಯ ಎಂಬಾಕೆ ಕೊಯಿಲ ಗ್ರಾಮದ ಕುದ್ಲೂರು ಎಂಬಲ್ಲಿರುವ ತನ್ನ ಮುಸ್ಲಿಂ ಸ್ನೇಹಿತೆ ಸಂಶೀನಾಳ ಮನೆಗೆ ಆಟೋ ರಿಕ್ಷಾದಲ್ಲಿ ಜೊತೆಯಾಗಿ ತೆರಳಿದ್ದರು. ಇದನ್ನು ಗಮನಿಸಿದ್ದ ಸ್ಥಳೀಯ ರಿಕ್ಷಾ

ಕಡಬ: ಮುಸ್ಲಿಂ ಗೆಳತಿಯ ಮನೆಗೆ ಬಂದ ಹಿಂದೂ ಸ್ನೇಹಿತೆ ➤ ಹಿಂದೂ ಯುವಕರಿಂದ ಕೊಲೆ ಬೆದರಿಕೆ ಆರೋಪ – ನಾಲ್ವರ ವಿರುದ್ಧ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top