ಕ್ರೈಮ್ ನ್ಯೂಸ್

ಯುವಕನ ಮೇಲೆ ಗುಂಡಿನ ದಾಳಿ: 3 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 29. ನಗರದ ಕೆಎಂಎಫ್ ಡೈರಿ ಬಳಿ ಬುಧವಾರ ರಾತ್ರಿ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ್ದು ಆತನ ಮಾಜಿ ಪ್ರೇಯಸಿ ಎಂಬ ವಿಚಾರ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯೂ ಸೇರಿದಂತೆ ಮಾಳಮಾರುತಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟಿಳಕವಾಡಿಯ ದ್ವಾರಕಾನಗರದ ಪ್ರವೀಣ ಕುಮಾರ (31) ಗುಂಡಿನ ದಾಳಿಗೆ ಒಳಗಾಗಿ ಬಿಮ್ಸ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಧಾ ಕಿತ್ತೂರು, ನಾಜಿಯಾ […]

ಯುವಕನ ಮೇಲೆ ಗುಂಡಿನ ದಾಳಿ: 3 ಮಂದಿಯ ಬಂಧನ Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ನ. 29. ಶಾಲಾ ಮಕ್ಕಳು ಇರುವ ಆಟೋ ಮತ್ತು ಸ್ಕೂಟಿ ನಡುವೆ ರಸ್ತೆ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪ ನಡೆದಿದೆ. ಮೃತ ವಿದ್ಯಾರ್ಥಿ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ವಿಮಲ್ ರಾಜ್ (10) ಎಂದು ಗುರುತಿಸಲಾಗಿದೆ. ಕಾಮಗೆರೆ ಗ್ರಾಮದ ಸೆಂಟ್ ಕ್ಲೇವಿಯರ್ ಶಾಲೆಗೆ 5 ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಆಟೋ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಯಾದಗಿರಿ, ನ. 29. ಕಾರು ಮತ್ತು ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದ ನಿವಾಸಿ ಹಳ್ಳೆಪ್ಪ ದೊಡ್ಡನಂದಪ್ಪ (45), ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ನಿವಾಸಿ ಮಲ್ಲಯ್ಯ ಹಣಮಂತ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿ ಇರುವ ಜಮೀನ್ನು ನೋಡಿಕೊಂಡು ಮರಳಿ ಶಹಾಪುರ ಕಡೆಗೆ ಬರುವಾಗ ಈ ಅಪಘಾತ

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಜಪೆ, ನ. 29. ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ. ಮೃತ ದುರ್ದೈವಿಯನ್ನು ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ.  ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 28. ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಎಂದು ಗುರುತಿಸಲಾಗಿದೆ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಸೆಂಟ್ರಲ್ ಜೈಲಿನ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳಿಸಿದ ದುಷ್ಕರ್ಮಿ

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 28. ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ್ದಾನೆ ಎಂದು ವರದಿಯಾಗಿದೆ. ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಅನಾಮದೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.  

ಸೆಂಟ್ರಲ್ ಜೈಲಿನ ಅಧೀಕ್ಷಕಿ ಕಾರು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳಿಸಿದ ದುಷ್ಕರ್ಮಿ Read More »

ಕ್ರೈಮ್ ನ್ಯೂಸ್

ಗೂಗಲ್‌ ಮ್ಯಾಪ್‌ ನೆರವಿನಿಂದ ಕಾರು ಚಲಾಯಿಸಿ ಸೇತುವೆಯಿಂದ ಬಿದ್ದು 3 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ನ. 26. ಮೂವರು ಸ್ನೇಹಿತರು ಗೂಗಲ್‌ ಮ್ಯಾಪ್‌ ನೆರವಿನಿಂದ ಕಾರು ಚಲಾಯಿಸಿಕೊಂಡು ಅಪೂರ್ಣ ಸೇತುವೆ ಮೇಲೆ ಹೋಗಿ, ಬಿದ್ದು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಫಾರೂಕಾಬಾದ್‌ ಸಹೋದರರಾದ ನಿತಿನ್ (30) ಅಜಿತ್ (30) ಮತ್ತು ಮೈನಪುರಿ ಜಿಲ್ಲೆಯ ಅಮಿತ್ ಎಂದು ಗುರುತಿಸಲಾಗಿದೆ. ಗೂಗಲ್‌ ಮ್ಯಾಪ್‌ ಇಂಡಿಯಾ ಹಾಗೂ ಉತ್ತರ ಪ್ರದೇಶದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬದೌನ್ ಪೊಲೀಸರು ತಿಳಿಸಿದ್ದಾರೆ.

ಗೂಗಲ್‌ ಮ್ಯಾಪ್‌ ನೆರವಿನಿಂದ ಕಾರು ಚಲಾಯಿಸಿ ಸೇತುವೆಯಿಂದ ಬಿದ್ದು 3 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 26. ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

6 ಜನರಿದ್ದ ವಿಮಾನ ಕೋಸ್ಟರಿಕಾ ರಾಜಧಾನಿಯ ಆಗ್ನೇಯಕ್ಕೆ ಅಪಘಾತ

(ನ್ಯೂಸ್ ಕಡಬ) newskadaba.com ಕೋಸ್ಟರಿಕಾ, ನ. 26. ಆರು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವು ಸೋಮವಾರ ಕೋಸ್ಟರಿಕಾದ ರಾಜಧಾನಿಯ ಆಗ್ನೇಯಕ್ಕೆ ಅಪಘಾತಕ್ಕೀಡಾಯಿತು, ಆದರೆ ವಿಮಾನದಲ್ಲಿದ್ದ ಪ್ರಯಾಣಿಕರ ಬಗ್ಗೆ ಗುರುತು ಪತ್ತೆಯಾಗಿಲ್ಲ. ಹುಡುಕಾಟ ಮತ್ತು ರಕ್ಷಣಾ ಅಧಿಕಾರಿಗಳು ಪರ್ವತದ ಮೇಲೆ ಅವಶೇಷಗಳನ್ನು ಪತ್ತೆ ಮಾಡಿದ್ದಾರೆ, ಆದರೆ ಪ್ರಯಾಣಿಕರ ಸ್ಥಿತಿ ಅಥವಾ ಅವರ ಗುರುತುಗಳ ಬಗ್ಗೆ ವಿವರಗಳನ್ನು ಇನ್ನೂ ಮಾಹಿತಿ ತಿಳಿದು ಬಂದಿಲ್ಲ. ಕೋಸ್ಟರಿಕಾದ ಉತ್ತರ ಕೆರಿಬಿಯನ್ ಕರಾವಳಿಯಲ್ಲಿರುವ ಟೋರ್ಟುಗುರೊದಿಂದ ವಿಮಾನವು ಹೊರಟು ಸ್ಯಾನ್ ಜೋಸ್‌ಗೆ ತೆರಳುತ್ತಿತ್ತು. ಮಧ್ಯಾಹ್ನ 3

6 ಜನರಿದ್ದ ವಿಮಾನ ಕೋಸ್ಟರಿಕಾ ರಾಜಧಾನಿಯ ಆಗ್ನೇಯಕ್ಕೆ ಅಪಘಾತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top