ಕ್ರೈಮ್ ನ್ಯೂಸ್

ಸುಳ್ಯ: ಯುವಕನಿಗೆ ಬೆದರಿಸಿ ಮೊಬೈಲ್ ಫೋನ್ ಹಾಗೂ ನಗದು ದರೋಡೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 28. ಹಾಸನಕ್ಕೆ ವ್ಯಾಪಾರಕ್ಕೆ ಹೋಗಿದ್ದ ಜಯನಗರ ಮೂಲದ ಯುವಕನ ಕೈಯಿಂದ ಯಾರೋ ಅಪರಿಚಿತರು ತಡರಾತ್ರಿ ಒಂದು ಗಂಟೆಯ ವೇಳೆಗೆ ಮೊಬೈಲ್ ಹಣ ಕದ್ದೊಯ್ದ ಘಟನೆ ವರದಿಯಾಗಿದೆ. ಸುಳ್ಯ ಜಯನಗರ ನಿವಾಸಿ ಪ್ರದೀಪ್ ಎಂಬ ಯುವಕ ಹಾಸನದಲ್ಲಿ ಮಸಾಲೆ ಪದಾರ್ಥಗಳ ಲೈನ್ ಸೇಲ್ ಗೆಂದು ಹೋಗಿದ್ದ ಈತ ಸೋಮವಾರ ರಾತ್ರಿ ಒಂದು ಗಂಟೆಯ ವೇಳೆಗೆ ಬಸ್ಸಿನಿಂದ ಇಳಿದು ರೂಮಿಗೆ ಹೋಗುತ್ತಿದ್ದ ಸಂದರ್ಭ ಯಾರೋ ಅಪರಿಚಿತ ವ್ಯಕ್ತಿಗಳು ಬಂದು ಚೂರಿ ತೋರಿಸಿ ಆತನ […]

ಸುಳ್ಯ: ಯುವಕನಿಗೆ ಬೆದರಿಸಿ ಮೊಬೈಲ್ ಫೋನ್ ಹಾಗೂ ನಗದು ದರೋಡೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಗೆ ಬೈಕ್ ಢಿಕ್ಕಿ- ಮೃತ್ಯು..! ➤ ಗುರುತು ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 28. ಇಲ್ಲಿನ ಆಟೋ ರಿಕ್ಷಾ ನಿಲ್ದಾಣದ ಬಳಿ ನಿಂತಿದ್ದ ಅಪರಿಚಿತ ವ್ಯಕ್ತಿಯೋರ್ವರಿಗೆ ಬುಲೆಟ್ ಬೈಕ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ. ಅಂದಾಜು 65 ವರ್ಷ ಆಸುಪಾಸಿನ ಅಪರಿಚಿತ ವ್ಯಕ್ತಿಯಾಗಿದ್ದು, ಗುರುತು ಪತ್ತೆಯಾಗದ ಹಿನ್ನೆಲೆ ವ್ಯಕ್ತಿಯ ಗುರುತು ಇರುವವರು ಪುತ್ತೂರು ಸಂಚಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಗೆ ಬೈಕ್ ಢಿಕ್ಕಿ- ಮೃತ್ಯು..! ➤ ಗುರುತು ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಮಹಿಳೆಗೆ ಚೂರಿ ಇರಿತ..!!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ವಿಟ್ಲದ ಜನಪ್ರಿಯ ಗಾಡರ್ನ್‌ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂದು ಗುರುತಿಸಲಾಗಿದೆ. ಚೂರಿ ಇರಿತದಿಂದ ಮಹಿಳೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸ್ಥಳೀಯರು ಗಾಯಾಳು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚೂರಿ ಇರಿತಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಹಲ್ಲೆಗೈದ ಯುವಕ ಪೆರಾಜೆ ಕಡೆ ಓಡಿ ಹೋಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ

ವಿಟ್ಲ: ಮಹಿಳೆಗೆ ಚೂರಿ ಇರಿತ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ನ್ಯಾಯವಾದಿ ಶ್ಯಾಮಲ ಹೆಗ್ಡೆ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 27. ನ್ಯಾಯವಾದಿ, ಹೆಬ್ಬಾರಬೈಲು ನಿವಾಸಿ ಶ್ಯಾಮಲ ಹೆಗ್ಡೆ ರವರು ಹೃದಯಾಘಾತದಿಂದ ಇಂದು ನಿಧನರಾದರು. ಪುತ್ತೂರು ವಕೀಲ ಸಂಘದ ಸದಸ್ಯರಾಗಿದ್ದ ಇವರು, ಇತ್ತೀಚೆಗೆ ಕೆಲ ಸಮಯದಿಂದ ಅನಾರೋಗ್ಯದಿಂದಿದ್ದರು ಎನ್ನಲಾಗಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಪುತ್ತೂರು: ನ್ಯಾಯವಾದಿ ಶ್ಯಾಮಲ ಹೆಗ್ಡೆ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇಗುಲದ ಆವರಣದಲ್ಲೇ ರೌಡಿಶೀಟರ್ ಕೊಲೆ..!

(ನ್ಯೂಸ್ ಕಡಬ) newskadaba.com ಕೆ.ಆರ್.ಪೇಟೆ, ಜೂ. 27. ಇಲ್ಲಿನ ಈಶ್ವರ ದೇಗುಲದ ಆವರಣದಲ್ಲಿ ಯುವಕನೋರ್ವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ದ ಘಟನೆ ನಡೆದಿದೆ. ಕೊಲೆಗೀಡಾದ ಯುವಕನನ್ನು ಅರುಣ್ ಎಂದು ಗುರುತಿಸಲಾಗಿದೆ. ಅರುಣ್ ಈ ಹಿಂದೆ ಕೊಲೆ, ಬೆದರಿಕೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದೆನ್ನಲಾಗಿದೆ. ಕೊಲೆಗೆ ಹಳೆ ವೈಷಮ್ಯವೇ ಕಾರಣವಾಗಿದ್ದು, ಬೈಕ್ ನಲ್ಲಿ ಬಂದ ಏಳೆಂಟು ಮಂದಿಯ ತಂಡ ಈ ಕೃತ್ಯವೆಸಗಿದೆ‌. ಸ್ಥಳಕ್ಕೆ ಕೆ.ಆರ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೇಗುಲದ ಆವರಣದಲ್ಲೇ ರೌಡಿಶೀಟರ್ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದೇಶದಿಂದ ಬಂದ ಯುವಕನನ್ನು ಅಪಹರಿಸಿ ಕೊಲೆ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 27. ಭಾನುವಾರ ಮಧ್ಯಾಹ್ನ ಗಲ್ಫ್‌’ನಿಂದ ಬಂದಿದ್ದ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಕೊಲೆಗೈದು ಬಳಿಕ ಮೃತದೇಹವನ್ನು ಆಸ್ಪತ್ರೆಯಲ್ಲಿರಿಸಿ ಪರಾರಿಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಅಬೂಬಕರ್ ಸಿದ್ದೀಕ್ ಎಂದು ಗುರುತಿಸಲಾಗಿದೆ. ಯಾವುದೋ ವ್ಯವಹಾರಕ್ಕೆ ಸಂಬಂಧಿಸಿ ಮೃತ ಯುವಕನ ಅಣ್ಣ ಅನ್ವರ್ ಮತ್ತು ಆತನ ಸಂಬಂಧಿ ಅನ್ಸಾರ್ ಎಂಬಿಬ್ಬರು ಯುವಕರನ್ನು ಎರಡು ದಿನಗಳ ಹಿಂದೆ ಪೈವಳಿಕೆಯ ತಂಡವೊಂದು ಅಪಹರಿಸಿತ್ತು. ಇವರನ್ನು ಬಿಡುಗಡೆ ಮಾಡಬೇಕಾದರೆ ಗಲ್ಫ್‌ನಲ್ಲಿರುವ ಸಿದ್ದೀಕ್ ನನ್ನು ಊರಿಗೆ ಕರೆಸಬೇಕು

ವಿದೇಶದಿಂದ ಬಂದ ಯುವಕನನ್ನು ಅಪಹರಿಸಿ ಕೊಲೆ ➤ ಆರೋಪಿಗಳು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುಣೆ ಮೂಲದ ಮಹಿಳೆ ಮಲ್ಪೆ ಬೀಚ್ ನಲ್ಲಿ ಆತ್ಮಹತ್ಯೆಗೆ ಯತ್ನ..! ➤ ಜೀವರಕ್ಷಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಮಲ್ಪೆ, ಜೂ. 27. ಮಲ್ಪೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯನ್ನು ಲೈಫ್ ಗಾರ್ಡ್ ತಂಡ ರಕ್ಷಿಸಿದ ಘಟನೆ ಭಾನುವಾರದಂದು ಸಂಜೆ ನಡೆದಿದೆ. ಮೂಲತಃ ಪುಣೆ ಮೂಲದ ಮಹಿಳೆಯೋರ್ವರು ತನ್ನ ಮಗನೊಂದಿಗೆ ಮಲ್ಪೆ ಬೀಚ್ ಗೆ ಬಂದು, ಅಲ್ಲಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ನೀರಿನತ್ತ ಓಡುತ್ತಿದ್ದರೆನ್ನಲಾಗಿದೆ‌. ಇದನ್ನು ಕಂಡ ಸ್ಥಳದಲ್ಲಿದ್ದ ಜೀವರಕ್ಷಕ ದಳದವರು ತಕ್ಷಣವೇ ಮಹಿಳೆಯನ್ನು ರಕ್ಷಿಸಿದ್ದಾರೆ. ಆದರೆ ಮಹಿಳೆಯು ಮತ್ತೆ ಅದೇ ಪ್ರಯತ್ನ ಮುಂದುವರೆಸಿದಾಗ ಲೈಫ್ ಗಾರ್ಡ್ ತಂಡವು ಮಹಿಳೆ ಹಾಗೂ

ಪುಣೆ ಮೂಲದ ಮಹಿಳೆ ಮಲ್ಪೆ ಬೀಚ್ ನಲ್ಲಿ ಆತ್ಮಹತ್ಯೆಗೆ ಯತ್ನ..! ➤ ಜೀವರಕ್ಷಕ ದಳದಿಂದ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤ ಮಹಿಳೆಯ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 26. ಬಾಕ್ಸೈಟ್ ಸಾಗಾಟದ ಲಾರಿಯೊಂದು ಆಕ್ಟೀವಾಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆಯೇ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಬೆನ್ನಟ್ಟಿ ಬೊಬ್ಬೆಕೇರಿ ಪೆಟ್ರೋಲ್ ಬಂಕ್ ಬಳಿ ತಡೆದು ಪೊಲೀಸರ ವಶಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು ಸವಾರೆ ಮಹಿಳೆಯ ಕೈಗೆ ಗಂಭೀರ ಗಾಯಗಳಾಗಿದೆ.

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤ ಮಹಿಳೆಯ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಫೋಕ್ಸೋ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 26. ಪೋಕ್ಸೋ ಪ್ರಕರಣದಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಲ್ಲೇರಿಯ ಮುನಾಸಿರ್(21) ಎಂದು ಗುರುತಿಸಲಾಗಿದೆ. ಈತ ಕೆಲವು ದಿನಗಳ ಹಿಂದೆ ಓರ್ವ ಅಪ್ರಾಪ್ತೆಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ನೆಪವೊಡ್ಡಿ ಉಪ್ಪಿನಂಗಡಿಯ ಲಾಡ್ಜ್‌ವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಕುರಿತು ಈತನ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದು, ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಫೋಕ್ಸೋ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಮೈಸೂರಿನಲ್ಲಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಅಗ್ನಿ ಅವಘಡ ➤ ಎರಡು ಅಂಗಡಿಗಳು ಸುಟ್ಟು ಭಸ್ಮ- ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಪಂಜ, ಜೂ. 26. ಇಲ್ಲಿನ ಪೇಟೆಯಲ್ಲಿರುವ ರಮೇಶ್ ಪಾಲೋಳಿ ಎಂಬವರ ಮಾಲೀಕತ್ವದ ಕುಕ್ಕೇಶ್ರೀ ಹಾರ್ಡ್ ವೇರ್ ಮತ್ತು ಪಕ್ಕದಲ್ಲಿರುವ ನೂತನ್ ಎಂಬವರ ಮಾಲೀಕತ್ವದ ಕಟ್ಲೇರಿ ಅಂಗಡಿಯೊಳಗೆ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಎರಡೂ ಅಂಗಡಿಗಳು ಸಂಪೂರ್ಣ ಹೊತ್ತಿ ಉರಿದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದೆನ್ನಲಾಗಿದೆ. ಹಾರ್ಡ್ ವೇರ್ ಅಂಗಡಿಯೊಳಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅವಘಡ ಸಂಭವಿಸಿರುವುದಾಗಿ ತಿಳಿದು ಬಂದಿದೆ. ರಾತ್ರಿ10.45ರ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಷಯ ತಿಳಿದು

ಪಂಜ: ಅಗ್ನಿ ಅವಘಡ ➤ ಎರಡು ಅಂಗಡಿಗಳು ಸುಟ್ಟು ಭಸ್ಮ- ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top