ಕ್ರೈಮ್ ನ್ಯೂಸ್

ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 22. ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ವಿದ್ಯಾನಗರದಲ್ಲಿನ ಸರ್ಕಾರಿ ಕಾಲೇಜು ಬಳಿ ನಡೆದಿದೆ.   ಮೃತ ಸವಾರನನ್ನು ಚಾಲಕ್ಕುಡಿಯ ಎ.ಪಿ ಬಿನೀಶ್ (45) ಎಂದು ಗುರುತಿಸಲಾಗಿದೆ. ಹಾಗೂ ಅವರ ಜೊತೆಗಿದ್ದ ತಮಿಳುನಾಡಿನ ಆನಂದ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದ್ ಕುಮಾರ್ ರವರು ಚಲಾಯಿಸುತ್ತಿದ್ದ ಬೈಕ್ ಹಾಗೂ ಟ್ಯಾಂಕರ್ ನಡುವೆ ಅಪಘಾತ, ನಡೆದಿದ್ದು ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಿನೀಶ್ ಅವರನ್ನು ಆಸ್ಪತ್ರೆಗೆ […]

ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನವಜಾತ ಶಿಶುವಿನ ಮೃತದೇಹ ತೋಡಿನಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 22. ಕಾರ್ಕಳ ಕಸಬಾ ಗ್ರಾಮದ ಪೆರ್ವಾಜೆ ಎಂಬಲ್ಲಿ ಮನೆಯೊಂದರ ಎದುರು ಇರುವ ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ.   ಸ್ಥಳೀಯ ನಿವಾಸಿ ಅಬ್ದುಲ್ ಖಾದರ್ ಎಂಬವರು ಎಂದಿನಂತೆ ನಿನ್ನೆ ಸಂಜೆ ಮನೆಯಿಂದ ಕಾರ್ಕಳ ಪೇಟೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮನೆಯ ಎದುರುಗಡೆ ಇರುವ ತೋಡಿನಲ್ಲಿ ನವಜಾತ ಶಿಶುವಿನ ಮೃತದೇಹವೊಂದು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವಜಾತ ಶಿಶುವಿನ ಮೃತದೇಹ ತೋಡಿನಲ್ಲಿ ಪತ್ತೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ಗರ್ಭದಲ್ಲೇ ಬಿಟ್ಟ ಸಿಬ್ಬಂದಿ..!!

(ನ್ಯೂಸ್ ಕಡಬ) newskadaba.com ಪಾಕಿಸ್ತಾನ, ಜೂ. 22. ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೇ ಬಿಟ್ಟ ಆತಂಕಕಾರಿ ಘಟನೆ ಪಾಕಿಸ್ತಾನ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಹೆರಿಗೆಗಾಗಿ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿ ವೈದ್ಯರು ಇಲ್ಲದ ಕಾರಣ ಹೆರಿಗೆ ಮಾಡಿಸಿ ಅನುಭವವೇ ಇಲ್ಲದ ಆರ್‌ಎಚ್‌ಸಿ ಸಿಬಂದಿಯು ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದಲ್ಲೇ ಬಿಟ್ಟಿದ್ದಾರೆ. ಮಹಿಳೆಯು ಪ್ರಾಣಾಪಾಯದಿಂದ ನರಳಾಡಿದಾಗ

ಹೆರಿಗೆಯ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ಗರ್ಭದಲ್ಲೇ ಬಿಟ್ಟ ಸಿಬ್ಬಂದಿ..!! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

?? Breaking News ಸಮ್ಮರ್‌ಶಾಟ್ ವೇಳೆ ಬೆನ್ನುಮೂಳೆಗೆ ಪೆಟ್ಟು ➤ ನಟ ದಿಗಂತ್ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಗೋವಾ, ಜೂ. 21. ಸ್ಯಾಂಡಲ್ ವುಡ್ ನಟ ದಿಗಂತ್ ಗೆ ಬೆನ್ನು ಮೂಳೆಗೆ ಬಲವಾದ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಟುಂಬಸ್ಥರೊಂದಿಗೆ ಗೋವಾ ಪ್ರವಾಸದಲ್ಲಿದ್ದ ನಟ ದಿಗಂತ್, ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ತೆಗೆಯುತ್ತಿದ್ದ ವೇಳೆ ಬೆನ್ನುಮೂಳೆಗೆ ಬಲವಾದ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ದಿಗಂತ್ ಅವರಿಗೆ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೆಚ್ಚಿನ

?? Breaking News ಸಮ್ಮರ್‌ಶಾಟ್ ವೇಳೆ ಬೆನ್ನುಮೂಳೆಗೆ ಪೆಟ್ಟು ➤ ನಟ ದಿಗಂತ್ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಬಸ್ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 21. ಕೇರಳ ರಸ್ತೆ ಸಾರಿಗೆಯ ಮಲಬಾರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಮಂಗಳವಾರದಂದು ಮಧ್ಯಾಹ್ನ ಸಂಭವಿಸಿದೆ. ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸು ಮಾವಿನಕಟ್ಟೆ ಬಳಿ ತಲುಪುದಿದ್ದಂತೆಯೇ ಮತ್ತೊಂದು ವಾಹನಕ್ಕೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದೆ. ಪರಿಣಾಮ ಚಾಲಕ ಸೇರಿದಂತೆ ಕೆಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಅವರನ್ನು ಸುಳ್ಯ ಸರಕಾರಿ

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಬಸ್ ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರುವಿನ ವಿಚಾರವಾಗಿ ಮಾತಿನ ಚಕಮಕಿ- ಹಲ್ಲೆ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಕರು ಮಾರಾಟದ ವಿಚಾರದಲ್ಲಿ ಹಲ್ಲೆ ನಡೆದು ಮೂವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನಡೆದಿದೆ.   ರಿಝ್ವಾನ್ ಎಂಬವರು ಆರ್ಯಾಪು ಗ್ರಾಮದ ಅಜಿತ್ ಎಂಬವರಿಗೆ ಕರುವೊಂದನ್ನು ನೀಡಿದ್ದು, ಆದರೆ ಮೂರು ತಿಂಗಳ ಕರುವಿನ ಬದಲು ಒಂದು ತಿಂಗಳ ಕರು ನೀಡಿ, ಹೆಚ್ಚಿಗೆ ಹಣವನ್ನು ಪಡೆದು ವಂಚಿಸಲಾಗಿದೆ ಎಂದು ಹೇಳಿ ಕರುವನ್ನು ವಾಪಸ್ ಕೊಂಡುಹೋಗುವಂತೆ ಅಜಿತ್ ಅವರು ರಿಜ್ವಾನ್ ಅವರಿಗೆ ತಿಳಿಸಿದ್ದರು. ಈ ವಿಚಾರವಾಗಿ ಸೋಮವಾರದಂದು ಕಲ್ಲರ್ಪೆಯಲ್ಲಿ

ಕರುವಿನ ವಿಚಾರವಾಗಿ ಮಾತಿನ ಚಕಮಕಿ- ಹಲ್ಲೆ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರೈಲ್ವೇ ನೌಕರರಿಗೆ ನಕಲಿ ಸರ್ಟಿಫಿಕೇಟ್ ನೀಡಿದ್ದ ಆರೋಪಿಯ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ..!!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ರೈಲ್ವೇ ನೌಕರರಿಗೆ ನಕಲಿ ವೈದ್ಯಕೀಯ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತನಾಗಿರುವ ರೈಲ್ವೇ ಇಲಾಖೆಯ ಆರೋಗ್ಯ ಕೇಂದ್ರದ ಫಾರ್ಮಸಿಸ್ಟ್‌ ವಿಜಯನ್‌ ವಿ.ಎ ಅವರ ಮೃತದೇಹವು ತೊಕ್ಕೊಟ್ಟು ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಮಂಗಳೂರಿನಲ್ಲಿ ರೈಲ್ವೇ ಸಿಬ್ಬಂದಿಗಳಿಗೆ ನಕಲಿ ಫಿಟ್ನೆಸ್ ಸರ್ಟಿಫಿಕೇಟ್ ನೀಡುತ್ತಿದ್ದ ಜಾಲವೊಂದನ್ನು ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಪತ್ತೆಮಾಡಿತ್ತು. ಈ ಪ್ರಕರಣದಲ್ಲಿ ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಹಾಗೂ ಆತ್ಮಹತ್ಯೆ ನಡೆಸಿದ ಫಾರ್ಮಸಿಸ್ಟ್‌ ವಿಜಯನ್‌ ಸೇರಿದಂತೆ ಇನ್ನೋರ್ವನನ್ನು

ಮಂಗಳೂರು: ರೈಲ್ವೇ ನೌಕರರಿಗೆ ನಕಲಿ ಸರ್ಟಿಫಿಕೇಟ್ ನೀಡಿದ್ದ ಆರೋಪಿಯ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಪತ್ನಿ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಪತಿಯನ್ನು ಬಸ್‌ ನಿಲ್ದಾಣದಲ್ಲಿ ಬಿಟ್ಟು ಪತ್ನಿ ಪರಾರಿಯಾದ ಕುರಿರು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಲ್ಪಾ ಎಂಬಾಕೆ ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಆದರೆ ಬಸ್‌ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಿಲ್ಪಾ ಹಿಂದಿರುಗಿ ಬರದೇ ಇದ್ದುದನ್ನು ಗಮನಿಸಿದ ಪತಿ ಕೂಡಲೇ ಶಿಲ್ಪಾ ಮೊಬೈಲ್‌ಗೆ ಕರೆ ಮಾಡಿದ್ದು

ಪತಿಯನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಪತ್ನಿ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜೀಪು ಪಲ್ಟಿ- ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಚಲಿಸುತ್ತಿದ್ದ ಜೀಪೊಂದು ಸ್ಕಿಡ್ ಆದ ಪರಿಣಾಮ ಯುವತಿ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮುಂಡ್ಕೂರು ಸಂಕಲಕರಿಯಲ್ಲಿ ನಡೆದಿದೆ. ಬೆಳ್ಮಣ್- ಸಂಕಲಕರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಭಾಸ್ಕರ ಎಂಬವರು ತನ್ನ ಜೀಪು ಚಲಾಯಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ತಿರುವಿನಲ್ಲಿ ಜೀಪ್ ಪಲ್ಟಿ ಆಗಿದೆ. ಈ ಸಂದರ್ಭ ಜೀಪ್ ನಲ್ಲಿ ಚಾಲಕ ಸಹಿತ ಐದು ಜನರಿದ್ದು ಯುವತಿಯೋರ್ವಳು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ

ಜೀಪು ಪಲ್ಟಿ- ಯುವತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರೆಡ್ಮಿ ಮೊಬೈಲ್ ಸ್ಪೋಟ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 20. ಇಲ್ಲಿನ ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಲಕ್ಸಿ ಮೊಬೈಲ್ಸ್ ಶೋರೂಂನಲ್ಲಿ ರಿಪೇರಿಗೆಂದು ಬಂದಿದ್ದ ‘ರೆಡ್ಮಿ ಆಂಡ್ರಾಯ್ಡ್’ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಮೊಬೈಲ್ ಹೊತ್ತಿ ಉರಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಮೊಬೈಲ್ಸ್ ಶಾಪ್ ಗೆ ಮಹಿಳೆಯೋರ್ವರು ಬಂದು ಬ್ಯಾಟರಿ ಸಮಸ್ಯೆ ಇರುವುದಾಗಿ ತಿಳಿಸಿ ರಿಪೇರಿಗೆಂದು ರೆಡ್ಮಿ ಮೊಬೈಲ್ ನೀಡಿದ್ದರು. ಇದು ಆಕಸ್ಮಿಕವಾಗಿ ಸ್ಪೋಟಗೊಂಡು ಹೊತ್ತಿ ಉರಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅಂಗಡಿ ಮಾಲಕ

ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ರೆಡ್ಮಿ ಮೊಬೈಲ್ ಸ್ಪೋಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top