ಕ್ರೈಮ್ ನ್ಯೂಸ್

ಆಸ್ತಿ ವೈಷಮ್ಯ- ಅಣ್ಣನ ಬಲಿಪಡೆದ ತಮ್ಮ.!!

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 07. ಆಸ್ತಿ ವೈಷಮ್ಯಕ್ಕೆ ತನ್ನ ಒಡಹುಟ್ಟಿದ ಅಣ್ಣನನ್ನೇ ತಮ್ಮ ಚೂರಿಯಿಂದ ಇರಿದು ಕೊಲೆಮಾಡಿದ ಮನಕಲುಕುವ ಘಟನೆ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ಶೇಖರ್ ಎಂದು ಗುರುತಿಸಲಾಗಿದೆ. ಸಹೋದರ ರಾಜು ಕೊಲೆಗೈದ ಆರೋಪಿ. ತಾಯಿಗೆ ಮಂಜುರಾದ ಭೂಮಿಯಲ್ಲಿ ಅಣ್ಣ ಶೇಖರ ವಾಸವಾಗಿದ್ದರೆ, ಅಣ್ಣನೊಂದಿಗಿರುವ ವೈಮನಸ್ಸಿನಿಂದ ರಾಜು ಪ್ರತ್ಯೇಕ ಶೆಡ್ ಮಾಡಿ ವಾಸವಾಗಿದ್ದನು. ರವಿವಾರದಂದು ಶೇಖರ್ ಮನೆಯ ಅಂಗಳದಲ್ಲಿ ಇತರ ಮೂವರು ಕೆಲಸಗಾರರೊಂದಿಗೆ ಜಲ್ಲಿಯನ್ನು ಹೊತ್ತು ತರುತ್ತಿದ್ದರು. ಅಲ್ಲಿಗೆ ಪಾನಮತ್ತನಾಗಿ […]

ಆಸ್ತಿ ವೈಷಮ್ಯ- ಅಣ್ಣನ ಬಲಿಪಡೆದ ತಮ್ಮ.!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ಮುಳುಗಿ ಯುವಕ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬೈಂದೂರು, ಮಾ. 07. ಸ್ನೇಹಿತರ ಜೊತೆ ಸಮುದ್ರಕ್ಕೆ ತೆರಳಿದ ಯುವಕನೋರ್ವ ನೀರುಪಾಲಾದ ಘಟನೆ ತಾಲೂಕಿನ ಸೋಮೇಶ್ವರ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಬೈಂದೂರು ಬಿಜು ಸಮೀಪದ ಬವಳಾಡಿ ನಿವಾಸಿ ಶಶಿಧರ್ ದೇವಾಡಿಗ ಎಂದು ಗುರುತಿಸಲಾಗಿದೆ. ಈತ ತನ್ನ ನಾಲ್ವರು ಸ್ನೇಹಿತರೊಂದಿಗೆ ಮೀನುಹಿಡಿಯಲು ತೆರಳಿದ್ದು, ಈ ಸಂದರ್ಭ ಅಲೆಗಳ ರಭಸಕ್ಕೆ ಸಿಲುಕಿ ನೀರುಪಾಲಾಗಿದ್ದಾನೆ. ತಕ್ಷಣವೇ ಮೀನುಗಾರರು ಹಾಗೂ ಸ್ನೇಹಿತರು ರಕ್ಷಣೆಗೆ ಮುಂದಾದರಾದರೂ ಶಶಿಧರ್ ಅವರನ್ನು ರಕ್ಷಣೆ ಸಾಧ್ಯವಾಗಿಲ್ಲ. ಮಗನನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ.

ಸಮುದ್ರದಲ್ಲಿ ಮುಳುಗಿ ಯುವಕ ಮೃತ್ಯು..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ..! ➤ ಫೋಕ್ಸೋ ಪ್ರಕರಣದಡಿ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿ ಆರೋಪಿಯನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಸುಳ್ಯ ಐವರ್ನಾಡು ನಿವಾಸಿ ರಕ್ಷಿತ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದು, ವಿಷಯ ಯುವತಿಯ ಮನೆಯವರಿಗೆ ತಿಳಿದು ಆತನಿಗೆ ಬುದ್ದಿವಾದ ಹೇಳಿದ್ದರು. ಅಲ್ಲದೇ ಬಾಲಕಿಯ ತಂದೆ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ..! ➤ ಫೋಕ್ಸೋ ಪ್ರಕರಣದಡಿ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ಯಾಲೆಸ್ತೀನ್ ಕಛೇರಿಯಲ್ಲಿ ಭಾರತದ ರಾಯಭಾರಿ ಶವವಾಗಿ ಪತ್ತೆ…!

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 07. ಪ್ಯಾಲೆಸ್ತೀನ್‌ನಲ್ಲಿ ಭಾರತದ ಪ್ರತಿನಿಧಿ ಮುಕುಲ್ ಆರ್ಯ ಅವರ ಮೃತದೇಹ ರಮಲ್ಹಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಪತ್ತೆಯಾಗಿದೆ. 2008 ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿ ಆರ್ಯ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಕುಲ್ ಸಾವಿಗೆ ಆಘಾತ ವ್ಯಕ್ತಪಡಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ , “ರಮಲ್ಹಾದಲ್ಲಿ ಭಾರತದ ಪ್ರತಿನಿಧಿಯ ಅಗಲಿಕೆಯ ವಿಷಯ ತಿಳಿದು ತೀವ್ರ ಆಘಾತವಾಯಿತು. ಅವರೊಬ್ಬ ಉಜ್ವಲ ಮತ್ತು ಪ್ರತಿಭಾವಂತ ಅಧಿಕಾರಿಯಾಗಿದ್ದರು ಎಂದು ಟ್ವೀಟ್ ಮಾಡಿದ್ದಾರೆ. ಮುಕುಲ್

ಪ್ಯಾಲೆಸ್ತೀನ್ ಕಛೇರಿಯಲ್ಲಿ ಭಾರತದ ರಾಯಭಾರಿ ಶವವಾಗಿ ಪತ್ತೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಟೆಂಪೋ ಅಡ್ಡಗಟ್ಟಿ ನಗದು ದರೋಡೆ ➤ ವ್ಯಕ್ತಿಗೆ ತಲವಾರಿನಿಂದ ಹಲ್ಲೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 04. ರಿಟ್ಝ್ ಕಾರಿನಲ್ಲಿ ಬಂದ ಮುಸುಕುಧಾರಿಗಳ ತಂಡವೊಂದು ಮೀನು ಸಾಗಾಟದ ಟೆಂಪೋವನ್ನು ತಡೆದು ನಿಲ್ಲಿಸಿ ಎರಡು ಲಕ್ಷ ರೂ ದರೋಡೆ ಮಾಡಿ ವ್ಯಾಪಾರಿಗೆ ಹಲ್ಲೆಗೈದು ಪರಾರಿಯಾದ ಘಟನೆ ರಾ.ಹೆ. 66ರ ಆಡಂಕುದ್ರು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಉಳ್ಳಾಲ ಮುಕ್ಕಚ್ಚೇರಿಯ ಮೀನಿನ ವ್ಯಾಪಾರಿ ಮುಸ್ತಫಾ ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತನ್ನ ಟೆಂಪೊದಲ್ಲಿ ಮೀನು ತರಲೆಂದು ಮಂಗಳೂರಿನ ದಕ್ಕೆಗೆ ತೆರಳಿದ್ದು, ಟೆಂಪೋ‌ ಆಡಂಕುದ್ರು ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ರಿಟ್ಝ್ ಕಾರೊಂದು

ಕಾರಿನಲ್ಲಿ ಬಂದ ಮುಸುಕುಧಾರಿಗಳಿಂದ ಟೆಂಪೋ ಅಡ್ಡಗಟ್ಟಿ ನಗದು ದರೋಡೆ ➤ ವ್ಯಕ್ತಿಗೆ ತಲವಾರಿನಿಂದ ಹಲ್ಲೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು…!!

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 04. ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿ ಮೀನುಗಾರ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಶಿರೂರು ಆಳ್ವಗದ್ದೆ ನಿವಾಸಿ ನಾಗರಾಜ ಮೊಗೇರ ಎಂದು ಗುರುತಿಸಲಾಗಿದೆ. ಈತ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಕಾಲಿಗೆ ಮೀನಿನ ಬಲೆ ಸಿಲುಕಿದ ಪರಿಣಾಮ ಆಯತಪ್ಪಿ ಸಮುದ್ರ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಬೋಟ್ ಮೂಲಕ ಮೇಲಕ್ಕೆತ್ತಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು…!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…!!!

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಮಾ. 04. ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕೊಲೆಯಾದವನನ್ನು ಪ್ರೀತಂ ಎಂದು ಗುರುತಿಸಲಾಗಿದೆ. ಈತನನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ. ಈತ ಅನ್ಯಧರ್ಮದ ಯುವತಿಯನ್ನು ವಿವಾಹವಾಗಿದ್ದು, ಇದುವೇ ಕೊಲೆಗೆ ಕಾರಣವಾಗಿರಬಹುದು ಎಂಬುವುದು ಕೂಡಾ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ಕುರಿತು ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ…!!! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಕ್ರೇನ್ ನಲ್ಲಿ ಭಾರತೀಯ ಮತ್ತೋರ್ವ ವಿದ್ಯಾರ್ಥಿಗೆ ಗುಂಡೇಟು..!!!?

(ನ್ಯೂಸ್ ಕಡಬ) newskadaba.com ರೆಸ್ಜೋವ್, ಮಾ. 04. ಉಕ್ರೇನ್‌ ರಾಜಧಾನಿ ಕೀವ್‌ ನಲ್ಲಿ ಭಾರತೀಯ ವಿದ್ಯಾರ್ಥಿ ಓರ್ವನಿಗೆ ಗುಂಡೇಟು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಂದ್ರ ವಿಮಾನಯಾನ ಇಲಾಖೆ ರಾಜ್ಯ ಖಾತೆ ಸಚಿವ ಜನರಲ್‌ ವಿ.ಕೆ ಸಿಂಗ್‌ ಶುಕ್ರವಾರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬರಿಗೆ ಗುಂಡಿನೇಟು ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಕ್ರೇನ್ ನಲ್ಲಿ ಭಾರತೀಯ ಮತ್ತೋರ್ವ ವಿದ್ಯಾರ್ಥಿಗೆ ಗುಂಡೇಟು..!!!? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ..!! ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಕಾಣಿಯೂರು, ಮಾ. 04. ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕಾಣಿಯೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬಂಡಾಜೆ ನಿವಾಸಿ ಚಂದ್ರಶೇಖರ(57) ಎಂದು ಗುರುತಿಸಲಾಗಿದೆ. ಯುವತಿಯ ಸಹೋದರನು ತಂದೆ ತಾಯಿಯನ್ನು ಚಾರ್ವಾಕದಲ್ಲಿರುವ ಜಮೀನಿಗೆ ಬಿಟ್ಟು ಬರಲೆಂದು ಹೋದ ಸಂದರ್ಭ ಮನೆಯಲ್ಲಿ ಬುದ್ದಿಮಾಂದ್ಯ ಯುವತಿ ಒಬ್ಬಳೇ ಇದ್ದಳು. ಸಹೋದರ ವಾಪಾಸು ಮನೆಗೆ ಹಿಂತಿರುಗಿದಾಗ ಅಕ್ಕ ಕಾಣದೇ ಇದ್ದು, ಹುಡುಕಾಡಿದಾಗ ಮನೆಯ ಎದುರಿನ ಗುಡ್ಡದಿಂದ ಬರುತ್ತಿದ್ದಳು. ಆಕೆಯನ್ನು ವಿಚಾರಿಸಿದಾಗ ಚಂದ್ರಶೇಖರ ನನ್ನ

ಕಾಣಿಯೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ..!! ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮನೆಗೆ ನುಗ್ಗಿದ ಕಳ್ಳರು…!! ➤ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 04. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿರುವ ಘಟನೆ ತಾಲೂಕಿನ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಗಂಡಿಬಾಗಿಲು ಮಸೀದಿ ಬಳಿಯ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಗುರುವಾರದಂದು ರಾತ್ರಿ ಆತೂರು ಮಸೀದಿಯಲ್ಲಿ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ

ಕಡಬ: ಮನೆಗೆ ನುಗ್ಗಿದ ಕಳ್ಳರು…!! ➤ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top